NEWSನಮ್ಮಜಿಲ್ಲೆನಮ್ಮರಾಜ್ಯ

KSRTC ನೌಕರರ ವೇತನ ಹೆಚ್ಚಳ ಸಂಬಂಧದ ಪ್ರಕರಣ: ಜು.16ಕ್ಕೆ ಮುಂದೂಡಿದ ಹೈಕೋರ್ಟ್‌

ವಿಜಯಪಥ - vijayapatha.in
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಹೆಚ್ಚಳ ಸಂಬಂಧ ಸರ್ಕಾರ ಹಾಗೂ ಸಾರಿಗೆ ನಿಗಮಗಳ ಆಡಳಿತ ಮಂಡಳಿ ವಿರುದ್ಧ ಕಳೆದ ಮಾರ್ಚ್‌ನಲ್ಲಿ ಅರ್ಜಿ ಹಾಕಿದ್ದು ಆ ಪ್ರಕರಣದ ವಿಚಾರಣೆ ಇಂದು ಹೈ ಕೋರ್ಟ್‌ ಏಕಸದಸ್ಯ ನ್ಯಾಯಪೀಠದ ಮುಂದಿದ್ದು, ಜುಲೈ 16ಕ್ಕೆ ಮುಂದೂಡಿದೆ.

ಈ ಹಿಂದೆ ಜೂನ್‌ 25ರಂದು ಪ್ರಕರಣ ನಡೆದಿತ್ತು. ನೌಕರರ ಪರ ವಕೀಲರು ಹಾಗೂ ಸರ್ಕಾರ, ಸಾರಿಗೆ ಆಡಳಿತ ಮಂಡಲಿ ಪರ ವಕೀಲರು ಹಾಜರಾಗಿದ್ದರು. ಈ ವೇಳೆ ಯಾವುದಾದರೂ ನೌಕರರ ಪರ ಸಂಘಟನೆಗಳು ಸಂಸ್ಥೆಯ ಎಂಡಿ ಅವರಿಗೆ ವೇತನ ಹೆಚ್ಚಳ ಹಾಗೂ 38 ತಿಂಗಳ ಹಿಂಬಾಕಿ ಸಂಬಂಧ ಮನವಿ ಮಾಡಿರುವ ಪ್ರತಿಯನ್ನು ಲಗತ್ತಿಸಲು ಕೇಳಿ ಜುಲೈ 2ಕ್ಕೆ ಅಂದರೆ ಇಂದಿಗೆ ನ್ಯಾಯಪೀಠ ಮುಂದೂಡಿತ್ತು.

ಇಂದು ವಿಚಾರಣೆಗೆ ಪ್ರಕರಣ ಬಂತು ಆದರೆ, ಸಮಯದ ಅಭಾವದಿಂದ ಜುಲೈ 16ಕ್ಕೆ ಮುಂದೂಡಲಾಗಿದೆ. ಕಳೆದ 2020ರ ಜನವರಿ 1ರಿಂದ ಅನ್ವಯವಾಗುವಂತೆ ಶೇ.15ರಷ್ಟು ಮೂಲ ವೇತನ ಹೆಚ್ಚಳ ಮಾಡಿರುವ 38 ತಿಂಗಳ ಹಿಂಬಾಕಿ ಹಾಗೂ 2024ರ ಜನವರಿ 1ರಿಂದ ಜಾರಿಗೆ ಬರುವಂತೆ ವೇತನ ಹೆಚ್ಚಳವಾಗಬೇಕಿದ್ದು 17ತಿಂಗಳಗಳು ಕಳೆದರೂ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ.

ನೌಕರರ ವೇತನ ಹೆಚ್ಚಳ ಸಂಬಂಧ 2025ರ ಮಾರ್ಚ್‌ 10ರಂದು ಹೈ ಕೋರ್ಟ್‌ನಲ್ಲಿ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ, ಜತೆಗೆ 2024ರ ಜನವರಿ 1ರಿಂದ ಆಗಬೇಕಿರುವ ವೇತನ ಹೆಚ್ಚಳವನ್ನು ಮಾಡಿಲ್ಲ. ಹೀಗಾಗಿ ನೌಕರರಿಗೆ ನ್ಯಾಯ ಒದಗಿಸಬೇಕು ಎಂದು ಹೈ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ವಿಜಯಪಥ - vijayapatha.in
Megha
the authorMegha

Leave a Reply

error: Content is protected !!
Latest news
NWKRTC: ಮೇ 11ರಂದು ಹಾಲಿ ನೌಕರರಿಗೆ, ಮೇ 15ರಂದು ನಿವೃತ್ತರಿಗೆ ಮೇ18ರಂದು ವರ್ಗಾವಣೆಗೊಂಡ ನೌಕರರಿಗೆ 11 ತಿಂಗಳುಗಳ ವೇ... ಮೇ 11ರಂದು KSRTC ನೌಕರರಿಗೆ 11 ತಿಂಗಳು- KKRTC ನೌಕರರಿಗೆ 12 ತಿಂಗಳುಗಳ ವೇತನ ಹಿಂಬಾಕಿ ಪಾವತಿಗೆ ಆದೇಶ ಸಾರಿಗೆ ನೌಕರರಿಗೆ ಬಿಡುಗಡೆಯಾಗಿರುವ 450 ಕೋಟಿ ರೂ.ನಲ್ಲಿ KSRTC ನೌಕರರಿಗೆ ಮೇ 11ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ... ಮೇ 20ರ ಪೂರ್ವ ನಿರ್ಧಾರಿತ ಮುಷ್ಕರ ಮಾಡಿ ಪೌರುಷ ತೋರಿಸಿ: ಜಂಟಿ ಸಮಿತಿಗೆ ಒಕ್ಕೂಟದ ಜಯರಾಮ್‌ ರಾಥೋಡ್‌ ಸವಾಲ್‌ KSRTC ನೌಕರರ ಕೂಟ- ಜಂಟಿ ಸಮಿತಿ ಸಭೆ ಸೇರುವ ಬಗ್ಗೆ ಎರಡು ದಿನದಲ್ಲಿ ನಿರ್ಣಯ: ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್‌ ಟಿವಿಕೆ ಸರ್ಕಾರ ರಚನೆಗೆ ಸಂಖ್ಯಾಬಲದ ಅಡ್ಡಿ: ರಾಜ್ಯಪಾಲರ ಪವರ್ ಏನು, ಸುಪ್ರೀಂಕೋರ್ಟ್ ವಕೀಲರಾದ ಶಿವರಾಜು ಏನು ಹೇಳುತ್ತಾ... ರಾಜೀನಾಮೆ ನೀಡದೇ ಹೈಡ್ರಾಮಾ ಮಾಡಿದ್ದ ಮಮತಾ ಬ್ಯಾನರ್ಜಿ- ಸರ್ಕಾರ ವಜಾಗೊಳಿಸಿದ ರಾಜ್ಯಪಾಲ KSRTC: ನಿವೃತ್ತರಾದ 25ದಿನದೊಳಗೆ ಭವಿಷ್ಯ ನಿಧಿ ಪಾವತಿಸದಿದ್ದರೆ ಸಂಬಂಧಿಸಿದ ಅಧಿಕಾರಿಗಳೇ ವಿಳಂಬದ ಬಡ್ಡಿ ಬರಿಸಬೇಕು- ಪ... ಅನ್ನದಾತರಿಗೆ ಸಾಲ ಕೊಡಲು ಸಿಬಿಲ್ ಸ್ಕೋರ್ ತಾಳೆ ಹಾಕುವ ಪದ್ಧತಿ ಕೈಬಿಡಬೇಕು: ಆರ್‌ಬಿಐ ಅಧಿಕಾರಿಗಳಿಗೆ ಕುರುಬೂರು ಶಾಂತಕ... ಬಸ್–ತೈಲ ಟ್ಯಾಂಕರ್ ನಡುವೆ ಡಿಕ್ಕಿ: 16 ಮಂದಿ ಸಜೀವ ದಹನ, ಕ್ಷಣಾರ್ಧದಲ್ಲಿ ಹೊತ್ತಿ ಉರಿದ ವಾಹನಗಳು