NEWSನಮ್ಮಜಿಲ್ಲೆನಮ್ಮರಾಜ್ಯ

KSRTC ನೌಕರರಿಗೆ ವೇತನ ಆಯೋಗದಂತೆ ಸಂಬಳ ಹೆಚ್ಚಳಕ್ಕೆ ಕ್ರಮವಹಿಸಿ: ನೂತನ ಎಂಡಿಗೆ APSSWA ಸಂಘ ಮನವಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರು ಅಧಿಕಾರ ವಹಿಸಿಕೊಂಡ ಕೂಡಲೇ ನೌಕರರಿಗೆ ಬಿಡಿಎ ಹಾಗೂ ಡಿಎ ಕೊಡಲು ಆದೇಶಿಸಿದಕ್ಕೆ ಸಂಸ್ಥೆಯ ಲೆಕ್ಕಪತ್ರ ಹಾಗೂ ಸಿಬ್ಬಂದಿ ಮೇಲ್ವಿಚಾರಕ ಮತ್ತು ಅಧೀಕ್ಷಕರ ಕ್ಷೇಮಾಭಿವೃದ್ಧಿ ಸಂಘ (APSSWA) ದಿಂದ ಅಭಿನಂದಿಸಲಾಯಿತು.

ಬುಧವಾರ ಎಂಡಿ ಅಕ್ರಮ್‌ ಪಾಷ ಅವರನ್ನು ಭೇಟಿ ಮಾಡಿದ ಸಂಘದ ಪದಾಧಿಕಾರಿಗಳು ಹೂಗುಚ್ಛ ನೀಡುವ ಮೂಲಕ ಅಭಿನಂದನೆ ಸಲ್ಲಿಸಿದರು.

ಇನ್ನು ಪದಗ್ರಹಣ ಅದ ತಕ್ಷಣವೇ ನೌಕರರಿಗೆ ಬಿಡಿಎ ಹಾಗೂ ಡಿಎ ಕೊಡಲು ಆದೇಶಿಸಿರುವುದು ಸಂತಸದ ಬೆಳವಣಿಗೆ ಅದಂತೆ ಮುಂದುವರಿದು ಸರ್ಕಾರದ ವೇತನ ಆಯೋಗದಂತೆ ಸಾರಿಗೆ ನೌಕರರ ವೇತನ ಹೆಚ್ಚಿಸಲು ಕ್ರಮಕೈಗೊಳ್ಳಬೇಕೆಂದು ಇದೇ ವೇಳೆ ಮನವಿ ಮಾಡಿದರು.

ಸಂಘದಿಂದ ಮಂಡಿಸಿದ ಎಲ್ಲ ಸಂಗತಿಗಳನ್ನು ಶಾಂತಚಿತ್ತದಿಂದ ಆಲಿಸಿದ ವ್ಯವಸ್ಥಾಪಕ ನಿರ್ದೇಶಕರು ಈಸಂಬಂಧ ಅಗತ್ಯ ಕ್ರಮಕೈಗೊಳ್ಳಲಾಗುವುದೆಂದು ಭರಸೆ ನೀಡಿದರು.

ಈ ಸಂದರ್ಭದಲ್ಲಿ ಲೆಕ್ಕಪತ್ರ, ಸಿಬ್ಬಂದಿ ಮೇಲ್ವಿಚಾರಕ, ಅಧೀಕ್ಷಕ ಸಂಘದ ಅಧ್ಯಕ್ಷ ವಿಜಯ ಚಿಕ್ಕೋಣ, ಉಪಾಧ್ಯಕ್ಷ ಯಲ್ಲಪ್ಪ ದಳಪತಿ, ಕಾನೂನು ಸಲಹೆಗಾರ ತಿಪ್ಪೇಶ್ವರ ಅಣಜಿ, ಚಂದ್ರಾ ಹಾಗೂ ಪ್ರವೀಣ ಬಾದರದಿನ್ನಿ ಇದ್ದರು.

Deva
the authorDeva

1 Comment

  • ಹುಚ್ರು ಯಾವ್ದು ಆಗೋದಿಲ್ಲ ಕೊಟ್ಟಿರೋದು ಮಾಡ್ಕೊಂಡ್ ಇರಿ 😁

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ