NEWSನಮ್ಮರಾಜ್ಯವಿದೇಶಶಿಕ್ಷಣ-

ಇಂದಿನಿಂದ ಆಂಗ್ಲ ಮಾಧ್ಯಮದಲ್ಲೂ SSLC ಪುನರ್‍ಮನನ ತರಗತಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ಏಪ್ರಿಲ್ 29ರಿಂದ ಚಂದನ  ವಾಹಿನಿಯಲ್ಲಿ ಆರಂಭಿಸಲಾಗಿರುವ ಎಸ್  ಎಸ್ ಎಲ್ ಸಿ ಪುನರ್ಮನನ ತರಗತಿಗಳನ್ನು ಆಂಗ್ಲ ಮಾಧ್ಯಮದಲ್ಲಿಯೂ ಸಹ  ಮೇ 9ರಿಂದ  ಪ್ರಾರಂಭಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ  ಸಚಿವ ಎಸ್.  ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕನ್ನಡ ಮಾಧ್ಯಮದಲ್ಲಿ ಆರಂಭಿಸಲಾಗಿರುವ ಪುನರ್ಮನನ ತರಗತಿಗಳನ್ನು ರಾಜ್ಯದ ವಿದ್ಯಾರ್ಥಿ ಸಮೂಹ ಬೃಹತ್ ಮಟ್ಟದಲ್ಲಿ  ಸದುಪಯೋಗಪಡಿಸಿಕೊಳ್ಳುತ್ತಿದ್ದು, ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳಿಗೂ ಉಪಯೋಗವಾಗುವಂತೆ ಪುನರ್ಮನನ ತರಗತಿಗಳನ್ನು ಆರಂಭಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

ಮುಂದಿನ  30 ದಿನಗಳ ಅವಧಿಯಲ್ಲಿ ಮೊದಲ 16 ದಿನ ಗಣಿತ ಹಾಗೂ ವಿಜ್ಞಾನ, ನಂತರದ 10 ದಿನ ಸಮಾಜ ವಿಜ್ಞಾನ ತರಗತಿಗಳನ್ನುಆಂಗ್ಲಮಾಧ್ಯಮದಲ್ಲಿ ಬೋಧಿಸಲಾಗುತ್ತಿದೆ. ಸಮಾಜ ವಿಜ್ಞಾನ ಬೋಧನೆ ಪೂರ್ಣಗೊಂಡ ಬಳಿಕ 6 ದಿನಗಳ ಕಾಲ ಹಿಂದಿ, ಸಂಸ್ಕೃತ ಹಾಗೂ ಉರ್ದು ಮೊದಲ ಭಾಷೆಗಳ ತರಗತಿಗಳನ್ನೂ ಸಹ ಬೋಧಿಸಲಾಗುವುದು  ಎಂದು ಸಚಿವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮೇ 9ರಿಂದ  ಪ್ರತಿದಿನ ಬೆಳಗ್ಗೆ 9.30ರಿಂದ  11ಗಂಟೆವರೆಗೆ  ಚಂದನ ವಾಹಿನಿಯಲ್ಲಿ ಈ ತರಗತಿಗಳು ಪ್ರಸಾರವಾಗುವುದಿದ್ದು,  ಈ ತರಗತಿಗಳ ಮುದ್ರಿತ ಭಾಗವನ್ನು ಮಕ್ಕಳ ವಾಣಿ ಯೂ-ಟ್ಯೂಬ್ ವಾಹಿನಿಯಲ್ಲೂ ದೊರೆಯಲಿದೆ ಎಂದು ಸಚಿವರು ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ