ಬೆಂಗಳೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನೂತ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ.ಬಿ.ಸುಶೀಲಾ ಅವರನ್ನು ನೇಮಿಸಿ ಸರ್ಕಾರ ಮಂಗಳವಾರ (ಜು.8) ಆದೇಶ ಹೊರಡಿಸಿದೆ.
ಪ್ರಸ್ತುತ ಯಾದಗಿರಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿರುವ IAS ಅಧಿಕಾರಿ ಸುಶೀಲಾ ಅವರನ್ನು ಕೂಡಲೇ ಜಾರಿಗೆ ಬರುವಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ರಾಚಪ್ಪ (KAS ಹಿರಿಯ ಶ್ರೇಣಿ) ಈವರೆಗೂ ಸೇವೆ ಸಲ್ಲಿಸಿದ್ದಾರೆ. ಇನ್ನು ನೂತನ ಎಂಡಿ ಅವರಿಗೆ ಪ್ರಮುಖವಾಗಿ ನೌಕರರ ವೇತನ ಹೆಚ್ಚಳ ಹಾಗೂ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಕೊಡಿಸುವುದು ಸೇರಿದಂತೆ ಹಲವು ಸವಾಲುಗಳನ್ನು ಎದುರಿಸಬೇಕಿದೆ.
ಸರ್ಕಾರದ ಮಟ್ಟದಲ್ಲಿ ಮಾತುಕತೆ ಮಾಡಿ ನೌಕರರಿಗೆ ಕಾನೂನಾತ್ಮಕವಾಗಿ ಸಿಗಬೇಕಿರುವ ಸೌಲಭ್ಯಗಳನ್ನು ಕೊಡಿಸುವ ಜತೆಗೆ ನಿಗಮದಲ್ಲಿರುವ ಆಂತರಿಕ ಕಲಹ ನೌಕರರ ಮೇಲೆ ಕೆಲ ಅಧಿಕಾರಿಗಳು ಎಸಗುತ್ತಿರುವ ದೌರ್ಜನ್ಯವನ್ನು ತಡೆಯುವ ನಿಟ್ಟಿನಲ್ಲಿ ಪ್ರಮುಖ ಪಾತ್ರವಹಿಸುವ ಸವಾಲು ಕೂಡ ಇದೆ.
ಈ ಎಲ್ಲ ಸವಾಲುಗಳನ್ನು ನೀರು ಕುಡಿದಷ್ಟೆ ಸಲಿಸಾಗಿ ನಿಭಾಹಿಸುವ ಶಕ್ತಿ ಮತ್ತು ಯುಕ್ತಿ ನಿಮಗೆ ಸಿಗಲಿ ಎಂದು ಸಮಸ್ತ ನಿಗಮದ ನೌಕರರ ಪರವಾಗಿ ವಿಜಯಪಥದ ಹಾರೈಕೆ.
Related

You Might Also Like
ಜು.11ರಂದು ಸಾರಿಗೆ ನಿಗಮಗಳ ಎಂಡಿಗಳ ಜತೆ ಆರ್ಥಿಕ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಭೆ
ಬೆಂಗಳೂರು: ಸಾರಿಗೆ ಇಲಾಖೆ ಅಡಿ ಕಾರ್ಯನಿರ್ವಹಿಸುತ್ತಿರುವ ನಿಗಮಗಳ ಕಾರ್ಯನಿರ್ವಹಣೆ, ಆದಾಯ- ವೆಚ್ಚ ಹಾಗೂ ಅವುಗಳ ಪ್ರಸ್ತುತ ಹೊಣೆಗಾರಿಕೆಗಳ ಕುರಿತು ಚರ್ಚಿಸಲು ಆರ್ಥಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ...
UPI ಮೂಲಕ 50 ಸಾವಿರ ಕಳುಹಿಸಿದರೆ ಎಷ್ಟು ತೆರಿಗೆ ಕಡಿತ? ಹೊಸ ಆದಾಯ ತೆರಿಗೆ ನಿಯಮ ಏನು?
ಪ್ರಸ್ತುತ ಭಾರತದಲ್ಲಿ ಡಿಜಿಟಲ್ ಪಾವತಿ ಪ್ರವೃತ್ತಿ ಬಹಳ ವೇಗವಾಗಿ ಬೆಳೆಯುತ್ತಿದ್ದು, ವಿಶೇಷವಾಗಿ UPI (ಏಕೀಕೃತ ಪಾವತಿ ಇಂಟರ್ಫೇಸ್) ಹಣವನ್ನು ಕಳುಹಿಸುವುದು ಮತ್ತು ಸ್ವೀಕರಿಸುವುದನ್ನು ಬಹಳ ಸುಲಭಗೊಳಿಸಿದೆ. ಪ್ರತಿಯೊಬ್ಬರೂ...
ಶಾಲಾ ವಾಹನಕ್ಕೆ ರೈಲು ಡಿಕ್ಕಿ: ಮೂವರು ಮಕ್ಕಳು ಮೃತ, 10 ವಿದ್ಯಾರ್ಥಿಗಳಿಗೆ ಗಾಯ
ಕಡಲೂರು: ಶಾಲಾ ವಾಹನಕ್ಕೆ ರೈಲು ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದು, 10 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಕಡಲೂರು ಜಿಲ್ಲೆಯ ಸೆಮ್ಮಂಗುಪ್ಪಂನಲ್ಲಿ ಇಂದು ಬೆಳಗ್ಗೆ ನಡೆದಿದೆ....
ದಶಕದಿಂದ ಇಪಿಎಸ್ ನಿವೃತ್ತರು ಹಕ್ಕಿಗಾಗಿ ಹೋರಾಟ ನಡೆಸುತ್ತಿದ್ದರೂ ಕಿವಿಗೊಡದ ಕೇಂದ್ರ: ನಂಜುಂಡೇಗೌಡ ಅಸಮಾಧಾನ
ಬೆಂಗಳೂರು: ಇಪಿಎಸ್ ನಿವೃತ್ತರು ದಶಕದಿಂದ ತಮ್ಮ ಹಕ್ಕಿಗಾಗಿ ಹೋರಾಟ ನಡೆಸುತ್ತಿದ್ದರೂ ಸಹಾ ಕೇಂದ್ರ ಸರ್ಕಾರ ಕಿವಿಗೊಡದೆ ಇರುವುದು ಅತ್ಯಂತ ಶೋಚನೀಯ ಎಂದು ಬಿಎಂಟಿಸಿ & ಕೆಎಸ್ಆರ್ಟಿಸಿ, ನಿವೃತ್ತ...
BMTC: ಮಹಿಳೆ ಮೇಲೆ ಬಸ್ ನುಗ್ಗಿಸಲು ಯತ್ನ ಪ್ರಕರಣ- 17ನೇ ಘಟಕದ ಚಾಲಕನ ಅಮಾನತಿಗೆ ತಡೆ ನೀಡಿದ ಹೈ ಕೋರ್ಟ್
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ಅಡ್ಡಗಟ್ಟಿದ ಮಹಿಳೆ ಮೇಲೆ ಬಸ್ ನುಗ್ಗಿಸಲು ಯತ್ನಿಸಿದ ಆರೋಪದಡಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಚಾಲಕನನ್ನು ಅಮಾನತು ಮಾಡಿದ ಆದೇಶಕ್ಕೆ ಹೈ...
ರೈತರಿಗೆ ಬೆಳೆ ವಿಮೆ ಅರಿವು ಮೂಡಿಸಿ: ಜಿಲ್ಲಾಧಿಕಾರಿ ಬಸವರಾಜು ತಾಕೀತು
ಬೆಂಗಳೂರು ಗ್ರಾಮಾಂತರ: ಕೃಷಿ, ತೋಟಗಾರಿಕೆ ಅಧಿಕಾರಿಗಳು ಮತ್ತು ಬೆಳೆ ವಿಮಾ ಸಂಸ್ಥೆಗಳು ಜಂಟಿಯಾಗಿ ಸ್ಥಳೀಯ ಮಟ್ಟದಲ್ಲಿ ರೈತರಿಗೆ ಬೆಳೆ ವಿಮೆ ಬಗ್ಗೆ ಹಾಗೂ ಅದರಿಂದ ಆಗುವ ಅನುಕೂಲಗಳ...
KSRTC: ಚಾಲಕನ ನಿಯಂತ್ರಣ ಕಳೆದು ಕೊಂಡು ಕಾಫಿ ತೋಟಕ್ಕೆ ನುಗ್ಗಿದ ಬಸ್
ವಿರಾಜಪೇಟೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಚಾಲಕ ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ನುಗ್ಗಿರುವ ಘಟನೆ ಇಂದು ಬೆಳಗ್ಗೆ ವಿರಾಜಪೇಟೆಯ ಕಾವೇರಿ ಕಾಲೇಜು ಬಳಿಯ...
KSRTC ಬೇಲೂರು: ಡಿಎಂ ಕಿರುಕುಳಕ್ಕೆ ನೊಂದು ಡಿಪೋದಲ್ಲೆ ವಿಷ ಸೇವಿಸಿದ ಚಾಲಕ ಕಂ ನಿರ್ವಾಹಕ- ಸ್ಥಿತಿ ಗಂಭೀರ
ಡಿಎಂ ಶಾಜೀಯಾ ಭಾನು ಹಾಗೂ ಡಿಸಿ ಅಮಾನತಿಗೆ ಶಾಸಕ ಸುರೇಶ್ ಒತ್ತಾಯ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಹಾಗೂ ಪೊಲೀಸ್ ಅಧಿಕಾರಿಗಳು ಬೇಲೂರು: ಕರ್ನಾಟಕ ರಾಜ್ಯ ರಸ್ತೆ...
ನಿಯಂತ್ರಣ ಕಳೆದುಕೊಂಡ ಬೈಕ್ ವಿಸಿ ನಾಲೆ ಬಿದ್ದು ಇಬ್ಬರು ಸವಾರರು ಮೃತ
ಮದ್ದೂರು: ಸವಾರನ ನಿಯಂತ್ರಣ ಕಳೆದುಕೊಂಡ ಬೈಕ್ ವಿಸಿ ನಾಲೆಗೆ ಬಿದ್ದ ಪರಿಣಾಮ ಬೈಕ್ ಹಿಂಬದಿ ಕುಳಿತಿದ್ದ ವೃದ್ಧ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಹೊಸಗಾವಿ ಬಳಿ...