CrimeNEWSನಮ್ಮಜಿಲ್ಲೆ

ಕಾರ್ಪೋರೇಟರ್ ಮೇಲೆ ಇನ್‍ಸ್ಪೆಕ್ಟರ್‌ ಹಲ್ಲೆ ಆರೋಪ

ನಾಜಿಮಾ ಖಾನ್ ಬೆಂಬಲಿಗ ಮಹಿಳೆಯರಿಂದ ಪ್ರತಿಭಟನೆ ಕ್ರಮಕ್ಕೆ ಆಗ್ರಹ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೆ.ಆರ್.ಮಾರ್ಕೆಟ್ ಕಾರ್ಪೋರೇಟರ್ ನಾಜಿಮಾ ಖಾನ್ ಮೇಲೆ ಹಲ್ಲೆ ಮಾಡಿದ  ಇನ್‍ಸ್ಪೆಕ್ಟರ್‌ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಟಿಪ್ಪು ನಗರದ ಮಹಿಳೆಯರು ಕಂಟೈನ್‍ಮೆಂಟ್ ಜೋನ್‌ನಲ್ಲೇ ಪ್ರತಿಭಟನೆ ನಡೆಸಿದರು.

ಶುಕ್ರವಾರ ಚಾಮರಾಜಪೇಟೆಯ ಇನ್‍ಸ್ಪೆಕ್ಟರ್ ಕುಮಾರಸ್ವಾಮಿ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನಾಜಿಮಾ ಖಾನ್ ಆರೋಪಿಸಿದ್ದರು. ಅದರಿಂದ ಬೇಸರಗೊಂಡ  ನಾಜಿಮಾ ಖಾನ್ ಬೆಂಬಲಿಗ ಮಹಿಳೆಯರು ಹಲ್ಲೆ ಮಾಡಿರುವ ಇನ್‍ಸ್ಪೆಕ್ಟರ್ ವಿರುದ್ಧ ಇಂದು ಟಿಪ್ಪುನಗರದಲ್ಲಿ ಪ್ರತಿಭಟನೆ ನಡೆಸಿದ್ದು, ಸ್ಥಳಕ್ಕೆ ಶಾಸಕ ಜಮೀರ್ ಅಹಮದ್ ಬರುವಂತೆ  ಒತ್ತಾಯಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಲಾಕ್‍ಡೌನ್ ನಿಯಮ ಉಲ್ಲಂಘಿಸಿ ಕಂಟೈನ್‍ಮೆಂಟ್ ಜೋನ್‌ನಲ್ಲಿ ಕಾರ್ಪೋರೇಟರ್‌ ಓಡಾಡಿದ್ದರು ಎಂದು ಕರ್ತವ್ಯದಲ್ಲಿದ್ದ ಇನ್‍ಸ್ಪೆಕ್ಟರ್ ನಜಿಮಾ ಅವರ ಐಡಿ ಕಾರ್ಡ್ನ್ನು ವಶಕ್ಕೆ ಪಡೆದುಕೊಂಡಿದ್ದರು.  ಆದರೆ ಇನ್‍ಸ್ಪೆಕ್ಟರ್ ತಮ್ಮನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಮುಂದ್ದರು ಎಂದು ನಜಿಮಾ ಆರೋಪಿಸಿದ್ದಾರೆ.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಒಬ್ಬ ಜನಪ್ರತಿನಿಧಿ ತಮ್ಮ ಏರಿಯಾದಲ್ಲಿ ಓಡಾಡಬಾರದು ಎಂದು ಪೊಲೀಸರು ತಡೆದರೆ ಬಡವರ ಸಮಸ್ಯೆಯನ್ನು ಆಲಿಸುವವರು ಯಾರು. ಬಡವರಿಗೆ ಸ್ಪಂದಿಸದಿದ್ದರೆ ಅವರ ಜೀವನದ ಗತಿಏನು ಎಂದು ಪ್ರತಿಭಟನಾಕಾರರು ಪೊಲೀಸರ ನಡೆಯನ್ನು ಖಂಡಿಸಿದ್ದು ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

 

1 Comment

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್