NEWSನಮ್ಮರಾಜ್ಯ

ರೋಟರಿ ರೀ ಬಿಲ್ಡ್ ಕೊಡಗು ಯೋಜನೆಯಡಿ ಮತ್ತೆ 25 ಮನೆಗಳ ಹಸ್ತಾಂತರ

ವಿಜಯಪಥ ಸಮಗ್ರ ಸುದ್ದಿ

ಮಡಿಕೇರಿ: ಕೊಡಗಿನಲ್ಲಿ ಪ್ರಾಕೃತಿಕ ವಿಕೋಪದಿಂದಾಗಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಅಂತರರಾಷ್ಟ್ರೀಯ ರೋಟರಿ ಸಂಸ್ಥೆಯ ರೀ ಬಿಲ್ಡ್ ಕೊಡಗು ಯೋಜನೆ ಮೂಲಕ ಮತ್ತೆ 25 ಮನೆಗಳನ್ನು ಹಸ್ತಾಂತರ ಮಾಡಲಾಗಿದ್ದು, ಈವರೆಗೂ ರೋಟರಿಯಿಂದ 50 ಮನೆಗಳನ್ನು ಸಂತ್ರಸ್ಥರಿಗೆ ನೀಡಲಾಗಿದೆ.

ಕಳೆದ ವರ್ಷ ಜೂನ್ ನಲ್ಲಿ ಪ್ರಥಮ ಹಂತವಾಗಿ ಮನೆ ಕಳೆದುಕೊಂಡ ಸಂತ್ರಸ್ಥರಿಗೆ ಮಾದಾಪುರ ಬಳಿಯ ಇಗ್ಗೋಡ್ಲು ಗ್ರಾಮದಲ್ಲಿ 25 ಮನೆಗಳನ್ನು ರೀ ಬಿಲ್ಡ್ ಕೊಡಗು ವತಿಯಿಂದ ನೀಡಲಾಗಿತ್ತು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಇದೀಗ ಮಾದಾಪುರ, ಗರಗಂದೂರು ವ್ಯಾಪ್ತಿಯ 25 ಮಂದಿಗೆ ಅವರ ಜಾಗದಲ್ಲಿಯೇ ಹೊಸ ಮನೆ ನಿರ್ಮಾಣ ಮಾಡಿ ಭಾನುವಾರ ಸರಳ ರೀತಿಯಲ್ಲಿ ಹಸ್ತಾಂತರಿಸಲಾಯಿತು ಎಂದು ರೀ ಬಿಲ್ಡ್ ಯೋಜನಾ ಸಮಿತಿ ಅಧ್ಯಕ್ಷ ಡಾ.ರವಿ ಅಪ್ಪಾಜಿ ತಿಳಿಸಿದ್ದಾರೆ.

ಈವರೆಗೂ ವಿವಿಧ ರೋಟರಿ ಕ್ಲಬ್ ಗಳು ನೀಡಿದ ಸಹಾಯ ಧನ ಬಳಸಿ 2.56 ಕೋಟಿ ರೂ. ವೆಚ್ಚದಲ್ಲಿ ಮನೆಗಳನ್ನು ರೋಟರಿ ಮೂಲಕ  ಹ್ಯಾಬಿಟೇಟ್  ಫಾರ್ ಹ್ಯೂಮಾನಿಟಿ ಇಂಡಿಯಾ ಸಂಸ್ಥೆಯು  ನಿರ್ಮಾಣ ಮಾಡಿದೆ.  ಪ್ರತೀ ಮನೆಗೂ 5.5 ಲಕ್ಷ ರೂ. ವೆಚ್ಚ ತಗುಲಿದೆ.

ಅಂತರ ರಾಷ್ಟ್ರೀಯ ರೋಟರಿ ಸಂಸ್ಥೆಯ ಪ್ರಮುಖರು ಹಾಗೂ ಭಾರತದ ರೋಟರಿ ನಾಯಕರ ಬೆಂಬಲದೊಂದಿಗೆ ಈ ಯೋಜನೆ ಕಾರ್ಯಗತಗೊಂಡಿದೆ ಎಂದು ಡಾ.ರವಿ ಅಪ್ಪಾಜಿ ಮಾಹಿತಿ ನೀಡಿದ್ದಾರೆ. ಲಾಕ್‍ಡೌನ್ ನಿಯಮಗಳಂತೆ ಸಭಾ ಕಾರ್ಯಕ್ರಮ ಇಲ್ಲದೇ ಸರಳ ರೀತಿಯಲ್ಲಿ 25 ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರ ಮಾಡಿರುವುದಾಗಿಯೂ ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ