NEWSನಮ್ಮರಾಜ್ಯ

ಇಂದು ಹಾಸನದಲ್ಲಿ ಖಾತೆ ತೆರೆದ ಕೊರೊನಾ, ರಾಜ್ಯದಲ್ಲಿ 42 ಹೊಸ ಸೋಂಕು ದೃಢ

ಸಾವಿರ ಸಮೀಪಕ್ಕೆ ಕರ್ನಾಟಕ l ವಿಶ್ವ ಹೆಮ್ಮಾರಿ ಕೇಕೆಗೆ ನಡುಕದ ಹಾದಿಯಲ್ಲಿ ಭಾರತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಈವರೆಗೂ ಹಸಿರು ವಲಯದಲ್ಲಿದ್ದ ಹಾಸನ ಜಿಲ್ಲೆಯಲ್ಲಿ ಇಂದು 5 ಕೊರೊನಾ ಪಾಸಿಟಿವ್‌ ಪ್ರಕರಣಗಳು ವರದಿಯಾಗುವ ಮೂಲಕ ತನ್ನ ವಲಯವನ್ನು ಬದಲಾಯಿಸಿಕೊಳ್ಳುವತ್ತ ಜಿಲ್ಲೆ ವಾಲಿದೆ.

ಹೌದು ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಅಟ್ಟಹಾಸವನ್ನು ಮೆರೆಯುವ ಮೂಲಕ ತನ್ನ ರುದ್ರನರ್ತನವನ್ನು ಮುಂದುವರಿಸಿದೆ. ಇಂದು (ಮೇ 12) ಒಂದೇ ದಿನ ರಾಜ್ಯದ 11 ಜಿಲ್ಲೆಗಳಲ್ಲಿ ಒಟ್ಟು 42 ಮಂದಿಯಲ್ಲಿ ಸೋಂಕು ಪಾಸಿಟಿವ್‌ ಬಂದಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಅದರಲ್ಲಿ ಅತಿ ಹೆಚ್ಚು ಬಾಗಲಕೋಟೆಯಲ್ಲಿ ಅಂದರೆ 15 ಕೊರೊನಾ ಪಾಸಿಟಿವ್‌ ಬಂದಿದ್ದು, ಧಾರವಾಡದಲ್ಲಿ ಒಂಬತ್ತು, ಬೆಂಗಳೂರು ನಗರದಲ್ಲಿ ಮೂರು, ದಕ್ಷಿಣ ಕನ್ನಡ, ಯಾದಗಿರಿ ಮತ್ತು ಬೀದರ್‌ನಲ್ಲಿ ತಲಾ ಎರಡು ಪ್ರಕರಣಗಳು ಹಾಗೂ ಬಳ್ಳಾರಿ, ಚಿಕ್ಕಬಳ್ಳಾಪುರ, ಕಲಬುರಗಿ ಮತ್ತು ಮಂಡ್ಯದಲ್ಲಿ ತಲಾ ಒಂದೊಂದು ಸೋಂಕಿತ ಪ್ರಕರಣ ಪತ್ತೆಯಾಗಿವೆ.

ರಾಜ್ಯದಲ್ಲಿ ಇಂದು ಒಂದೇದಿನ 42 ಕೋವಿಡ್‌-19 ಪಾಸಿಟಿವ್‌ ಬರುವ ಮೂಲಕ ಒಟ್ಟು 904ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಅದರಲ್ಲಿ 31 ಮಂದಿ ಮೃತಪಟ್ಟಿದ್ದು, ಇನ್ನು 426 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗುವ ಮೂಲಕ ಮನೆಗೆ ಮರಳಿದ್ದಾರೆ. ಹಾಗಾಗಿ 447 ಜನ ಚಿಕಿತ್ಸೆಗೆ ದಾಖಲಾಗಿದ್ದಾರೆ. ಮೈಸೂರಿನಲ್ಲಿ ಈ ಹಿಂದೆ ಕಾಣಿಸಿಕೊಂಡಿದ್ದ 88 ಪ್ರಕರಣಗಳಲ್ಲಿ 84 ಮಂದಿ ಗುಣಮುಖರಾಗಿದ್ದು ಇನ್ನು ಕೇವಲ 4 ಮಂದಿ ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ಯಾವುದೇ ಪಾಸಿಟಿವ್‌ಪ್ರಕರಣ ವರದಿಯಾಗಿಲ್ಲ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ದೇಶದಲ್ಲಿ 70,827 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 70,827 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 2.294 ಮಂದಿ ಮೃತಪಟ್ಟಿದ್ದಾರೆ.22,549 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 42,68,496 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 2,87,463 ಜನರು ಮೃತಪಟ್ಟಿದ್ದಾರೆ. 15,33,701 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ