ಮೈಸೂರು: ನಗರದ ತಿ.ನರಸೀಪುರ ರಸ್ತೆಯ ಜಿ.ಎಲ್.ಗಾರ್ಡನ್ ನಿವಾಸಿ ಲಂಡನ್ನಲ್ಲಿ ಕೆಲಸದಲ್ಲಿದ್ದ ರಾಘವ ಲಿಂಗೇಗೌಡ (49) ಬುಧವಾರ ಸಂಜೆ ನಿಧನರಾದರು.
ಮೂಲತಃ ತಿ.ನರಸೀಪುರ ತಾಲೂಕು ಬನ್ನೂರು ಹೋಬಳಿಯ ಅತ್ತಹಳ್ಳಿ ಗ್ರಾಮದವರಾದ ಹಾಲಿ ಜಿ.ಎಲ್.ಗಾರ್ಡನ್ನಲ್ಲಿರುವ ಎ.ಸಿ.ಲಿಂಗೇಗೌಡ ಅವರ ಪುತ್ರರಾದ ಮೃತರು ಹಲವು ವರ್ಷಗಳ ಕಾಲ ಲಂಡನ್ನಲ್ಲಿ ಕೆಲಸದಲ್ಲಿದ್ದರು. ತಂದೆ ತಾಯಿ ನೋಡಿಕೊಳ್ಳುವುದಕ್ಕಾಗಿ ಆ ಕೆಲಸವನ್ನು ಬಿಟ್ಟುಬಂದಿದ್ದರು.
ರಾಘವ ಲಿಂಗೇಗೌಡ ಅವರ ಸಹೋದರ ನರೇಂದ್ರ ಮತ್ತು ಸಹೋದರಿ ಸುನಿತಾ ಅಮೆರಿಕದಲ್ಲಿ ಇರುವುದರಿಂದ ಅವರು ಇಂದು ತಡರಾತ್ರಿ ಬರಲಿದ್ದಾರೆ.
ಈ ಹಿನ್ನೆಲೆಯಲ್ಲಿ ಪಾರ್ಥಿವ ಶರೀರವನ್ನು ಜುಲೈ 18 ರಂದು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ12 ಗಂಟೆಯವರಗೆ ಚಿಕ್ಕಹಳ್ಳಿ ಹತ್ತಿರ ಇರುವ ದೊಡ್ಡ ಆಲದ ಮರದ ಎದುರಿನ ನರಸೀಪುರ ರಸ್ತೆಯ ಜಿ.ಎಲ್.ಗಾರ್ಡನ್ ನಿವಾಸದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುವುದು.
ನಂತರ ಚಾಮುಂಡಿ ಬೆಟ್ಟದ ತಪ್ಪಲಿನ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ. ಮೃತರು ಪತ್ನಿ, ಪುತ್ರ, ಪುತ್ರಿ, ತಂದೆ, ತಾಯಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಬುಧವಾರ ನಿಧನರಾದ ರಾಘವ ಲಿಂಗೇಗೌಡ ಅವರ ಪಾರ್ಥಿವ ಶರೀರವನ್ನು ಜೆಎಸ್ಎಸ್ ಆಸ್ಪತ್ರೆಯಲ್ಲಿ ಇಡಲಾಗಿದ್ದು, ನಾಳೆ ಬೆಳಗ್ಗೆ ಜಿ.ಎಲ್.ಗಾರ್ಡನ್ ನಿವಾಸಕ್ಕೆ ತೆಗೆದುಕೊಂಡು ಬಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು.

Related


You Might Also Like
ಅಕ್ರಮ ಆನ್ಲೈನ್ ಬೆಟ್ಟಿಂಗ್ನಲ್ಲಿ 2,000 ಕೋಟಿ ರೂ. ಲಾಭಗಳಿದ ಶಾಸಕ ವೀರೇಂದ್ರ ಪಪ್ಪಿ: ಇಡಿ ದಾಳಿ ವೇಳೆ ಬಯಲು!
ಚಿತ್ರದುರ್ಗ: ಜನಪ್ರತಿನಿಧಿಗಳು ಎಂದರೆ ಸಾಮಾನ್ಯ ಜನರಿಗೆ ಮಾದರಿಯಾಗಿರಬೇಕು. ಆದರೆ ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಕ್ರಮ ಆನ್ಲೈನ್ ಬೆಟ್ಟಿಂಗ್ನಲ್ಲಿ ಅಲ್ಪಾವಧಿಯಲ್ಲಿಯೇ 2,000 ಕೋಟಿ ರೂ. ಲಾಭಗಳಿಸಿದ್ದಾರೆಂಬುವುದು...
ನಾಗರಿಕರಿಗೆ ತ್ವರಿತವಾಗಿ ಸ್ಪಂದಿಸಿ: 5 ನಗರ ಪಾಲಿಕೆಗಳ ಆಯುಕ್ತರಿಗೆ ತುಷಾರ್ ಗಿರಿನಾಥ್ ಸೂಚನೆ
ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಪ್ರಮುಖವಾಗಿ ಎಲ್ಲ ವಿಭಾಗಗಳ ಕುರಿತು ಸಮಗ್ರ ಪರಿಚಯ ಹಾಗೂ ವಿಶೇಷವಾಗಿ 3 ವಿಷಯಗಳಾದ ರಸ್ತೆ ಗುಂಡಿ, ಬೀದಿ ದೀಪ ಹಾಗೂ ಕಸದ ಸಮಸ್ಯೆ...
ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಿ, ಜನರು ಸುಳ್ಳು ದೂರು ದಾಖಲಿಸಬೇಡಿ: ಉಪ ಲೋಕಾಯುಕ್ತ ನ್ಯಾಯಮೂರ್ತಿ ವೀರಪ್ಪ
ಬೆಂಗಳೂರು ಗ್ರಾಮಾಂತರ: ಸಾರ್ವಜನಿಕರು ಲೋಕಾಯುಕ್ತ ಹಾಗೂ ಇನ್ನಿತರೆ ನ್ಯಾಯಾಲಯಗಳಲ್ಲಿ ಸುಳ್ಳು ಕೇಸ್ ದಾಖಲಿಸಬೇಡಿ, ಸುಳ್ಳು ಕೇಸ್ ಎಂದು ಸಾಬೀತಾದರೆ ಅರ್ಜಿದಾರರು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ, ಜತೆಗೆ ನಿಜವಾದ...
ಜಿಬಿಎ-ಗುಂಡಿ ಮುಕ್ತ ರಸ್ತೆ, ಬ್ಲಾಕ್ ಸ್ಪಾಟ್ ರಹಿತ, ಮುಕ್ತ ಪಾದಚಾರಿ ಮಾರ್ಗ ನಿರ್ಮಾಣಕ್ಕೆ ಕಠಿಣ ಕ್ರಮ: ರಾಜೇಂದ್ರ ಚೋಳನ್
ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸಾರ್ವಜನಿಕ ಸಂಚಾರ, ಸುರಕ್ಷತೆ ಮತ್ತು ಮೂಲಭೂತ ಸೌಕರ್ಯಗಳನ್ನು ಉತ್ತಮಗೊಳಿಸುವ ಉದ್ದೇಶದಿಂದ ಗುಂಡಿ ಮುಕ್ತ ರಸ್ತೆ, ಬ್ಲಾಕ್ ಸ್ಪಾಟ್ ರಹಿತ...
ಆ.5ರ ಮುಷ್ಕರ ದಿನದ ಚಾಲಕ, ನಿರ್ವಾಹಕರ ವೇತನ ಕಡಿತ- ಇದು ನ್ಯಾಯಸಮ್ಮತವೇ?
ಬೆಂಗಳೂರು: ಕಳೆದ 2021ರ ಏಪ್ರಿಲ್ನಲ್ಲಿ ನಡೆದಂತಹ ಸಾರಿಗೆ ಮುಷ್ಕರದ ಅವಧಿಯಲ್ಲಿ ಬಹಳಷ್ಟು ಸಾರಿಗೆ ನೌಕರರ ವಿರುದ್ಧ ವಜಾ, ವರ್ಗಾವಣೆ, ಅಮಾನತು ಹಾಗೂ ಪೊಲೀಸ್ ಪ್ರಕರಣಗಳು ದಾಖಲಿಸಲಾಗಿತ್ತು. ಈ...
ಮೈಸೂರು: ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ಗೆ ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ
ಮೈಸೂರು: ನಾಡಹಬ್ಬ ದಸರಾ ಉದ್ಘಾಟಕರಾಗಿ ಆಯ್ಕೆಯಾಗಿರುವ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತರಾದ ಸಾಹಿತಿ ಬಾನು ಮುಷ್ತಾಕ್ ಅವರನ್ನು ಸರ್ಕಾರದ ಪರವಾಗಿ ಮೈಸೂರು ಜಿಲ್ಲಾಡಳಿತದ ವತಿಯಿಂದ ಅಧಿಕೃತವಾಗಿ ಬುಧವಾರ...
ಯುವನಿಧಿ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಸವರಾಜು ಸೂಚನೆ
ಬೆಂಗಳೂರು ಗ್ರಾಮಾಂತರ: ಯುವನಿಧಿ ಯೋಜನೆಯಡಿ ಪದವೀಧರರು ಮತ್ತು ಡಿಪ್ಲೊಮಾ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ, ಫಲಾನುಭವಿಗಳ ಆಸಕ್ತಿ ಮತ್ತು ಅವರ ಸಾಮರ್ಥ್ಯಕ್ಕೆ ತಕ್ಕಂತೆ ಕೌಶಲ್ಯ ತರಬೇತಿ ನೀಡಲು ಕ್ರಮ...
ಜಿಬಿಎ: ನೂತನ ಪಾಲಿಕೆ ಕಚೇರಿಗಳ ನಿರ್ಮಾಣಕ್ಕೆ ನ.1 ರಂದು ಭೂಮಿಪೂಜೆ: ಉಪಮುಖ್ಯಮಂತ್ರಿ ಶಿವಕುಮಾರ್
ಐದು ಪಾಲಿಕೆಗಳಿಗೆ 300 ಕೋಟಿ ರೂ. ಅನುದಾನ ಹಂಚಿಕೆ ಬೆಂಗಳೂರು: “ಐದು ಪಾಲಿಕೆಗಳ ನೂತನ ಕಚೇರಿಗೆ ಭೂಮಿಪೂಜೆಯನ್ನು ನವೆಂಬರ್ 1 ರಂದು ನೆರವೇರಿಸಲಾಗುವುದು. ಎಲ್ಲ ಪಾಲಿಕೆಗಳ ಗಡಿ...