NEWSಶಿಕ್ಷಣ-

ಅನುಮತಿ ಇಲ್ಲದೇ ಶಾಲೆ ಪ್ರಾರಂಭಿಸಿದರೆ ಕೇಸು ದಾಖಲು

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಬೀದರ್‌: ಇಲಾಖಾ ಅನುಮತಿ ಇಲ್ಲದೇ ಆಡಳಿತ ಮಂಡಳಿ 2020-21 ನೇ ಸಾಲಿಗೆ ಹೊಸ ಶಾಲೆ ಪ್ರಾರಂಭಿಸುವುದಾಗಲಿ ಇಲ್ಲವೇ ಪ್ರಚಾರ ಮಾಡುವುದಾಗಲಿ ಅಥವಾ 1 ರಿಂದ 5ನೇ ತರಗತಿ ಅನುಮತಿ ಪಡೆದು ಇಲಾಖೆ ಅನುಮತಿ ಇಲ್ಲದೇ 6 ರಿಂದ 8ನೇ ವರೆಗೆ ಹೆಚ್ಚಿನ ತರಗತಿ ಪ್ರಾರಂಭಿಸುವುದಾಗಲಿ ಮಾಡಿದ್ದಲ್ಲಿ ಅಂತಹ ಶಾಲೆಗಳನ್ನು ಅನಧಿಕೃತ ಶಾಲೆಯೆಂದು ಪರಿಗಣಿಸಿ ಕರ್ನಾಟಕ  ಶಿಕ್ಷಣ ಕಾಯಿದೆ-1983 ರಂತೆ ಕ್ರಿಮಿನಲ್ ದಾವೆ ಹೂಡಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಎಚ್ಚರಿಕೆ ನೀಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

2020-21ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗುತ್ತಿದ್ದು, ಹೊಸ ಶಾಲೆ ಅನುಮತಿ ಕೋರಿ ಆಡಳಿತ ಮಂಡಳಿ ಈಗಾಗಲೆ ಇಲಾಖೆ ನಿಗದಿ ಪಡಿಸಿರುವುದರ ಮೂಲಕ ಪ್ರಸ್ತಾವನೆ ಸಲ್ಲಿಸಿದ್ದು, ಆಡಳಿತ ಮಂಡಳಿ  ಪ್ರಸ್ತಾವನೆ ಸಲ್ಲಿಸಿರುವ ಮಾತ್ರಕ್ಕೆ ಅನುಮತಿ ದೊರೆತಿದೆ  ಎಂದು ಭಾವಿಸಿ ಶಾಲೆ ಪ್ರಾರಂಭಿಸುವುದಾಗಲಿ ಅಥವಾ ದಾಖಲಾತಿ ಮಾಡುವಂತೆ ಕೋರಿ ಪ್ರಚಾರ ಮಾಡುವುದಾಗಲಿ ಮಾಡುವಂತಿಲ್ಲ ಎಂದು ಡಿಡಿಪಿಐ ತಿಳಿಸಿದ್ದಾರೆ.

ಪೋಷಕರಲ್ಲಿ ಮನವಿ
 ಪೋಷಕರು ತಮ್ಮ ಮಕ್ಕಳಿಗೆ ಯಾವುದೇ ಖಾಸಗಿ ಶಾಲೆಯಲ್ಲಿ ದಾಖಲಾತಿ ಮಾಡಿಸುವ ಪೂರ್ವದಲ್ಲಿ ಸಂಬಂಧಿಸಿದ ಶಾಲೆಯು ಇಲಾಖೆಯಿಂದ ಅನುಮತಿ ಪಡೆದಿರುವ ಬಗ್ಗೆ ಪ್ರಸ್ತುತ ಸಾಲಿನವರೆಗೆ ಮಾನ್ಯತೆ ಪಡೆದಿರುವ ಬಗ್ಗೆ ಹಾಗೂ ಶಾಲೆ ಯಾವ ಮಾಧ್ಯಮದಲ್ಲಿ ಅನುಮತಿ ಪಡೆಯಲಾಗಿದೆ ಎಂಬುದರ  ಬಗ್ಗೆ ದಾಖಲೆಗಳನ್ನು ಪರಿಶೀಲಿಸಿ ತಮ್ಮ ಮಕ್ಕಳಿಗೆ ದಾಖಲಾತಿ ಮಾಡಿಸಲು ಕ್ರಮವಹಿಸುವಂತೆ ಮನವಿ ಮಾಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಸೂಚನಾ ಫಲಕದಲ್ಲಿ ಪ್ರಕಟಿಸಿ
 ಇಲಾಖೆಯಿಂದ ಅನುಮತಿ ಪಡೆದ ಶಿಕ್ಷಣ ಸಂಸ್ಥೆಯವರು ತಮ್ಮ ಶಾಲೆಯ ಅನುಮತಿ ಪತ್ರ, ಮಾನ್ಯತೆ ನವೀಕರಣ ಶಾಲಾ ಶುಲ್ಕದ ವಿವರಗಳನ್ನು ಪೋಷಕರಿಗೆ ಮನವರಿಕೆಯಾಗುವಂತೆ ಕಡ್ಡಾಯವಾಗಿ ಆಯಾ ಶಾಲೆಯ ಸೂಚನಾ ಫಲಕದಲ್ಲಿ ಪ್ರಕಟಿಸಲು ತಿಳಿಸಲಾಗಿದೆ ಎಂದು ಹೇಳಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ