NEWSಕೃಷಿನಮ್ಮರಾಜ್ಯ

ಮೇ 26ರೊಳಗೆ ಅರ್ಜಿ ಸಲ್ಲಿಸಲು ಹೂ ಬೆಳೆಗಾರರಿಗೆ ಕರೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಹೂ ಬೆಳೆದು ನಷ್ಟ ಅನುಭವಿಸಿರುವ ಬೆಳೆಗಾರರಿಗೆ ಪರಿಹಾರಧನ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದ್ದು ಮೇ 26ರೊಳಗಾಗಿ ಅರ್ಜಿ ಸಲ್ಲಿಸುವಂತೆ  ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಹೂ ಬೆಳೆಗಾರರಿಗೆ ತಿಳಿಸಿದ್ದಾರೆ.

2020-21ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯ ಹೂವು ಬೆಳೆಗಾರರಿಗೆ ಪರಿಹಾರಧನ ನೀಡಲಾಗುವುದು ಎಂದು ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಹೂವಿನ ಬೆಳೆಗಾರರಿಗೆ ಪರಿಹಾರಧನ ಕಾರ್ಯಕ್ರಮದಡಿ ಪ್ರತಿ ಫಲಾನುಭವಿಗೆ ಗರಿಷ್ಠ 1 ಹೆಕ್ಟೇರ್ ಪ್ರದೇಶಕ್ಕೆ 25,000 ರೂ. ಮೀರದಂತೆ ಪರಿಹಾರಧನವನ್ನು ನೀಡಲಾಗುವುದು. ಬಹುವಾರ್ಷಿಕ  ಹಾಗೂ ವಾರ್ಷಿಕ ಹೂ ಬೆಳೆಗಳಿಗೆ 2019ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಬೆಳೆ ಸಮೀಕ್ಷೆ ಆಧರಿಸಿ ಸಹಾಯಧನ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಕೋವಿಡ್-19 ನಿಂದಾಗಿ ರಾಜ್ಯದಲ್ಲಿ 2020 ಮಾರ್ಚ್ ತಿಂಗಳಿಂದ ಲಾಕ್ ಡೌನ್ ಮಾಡಿರುವ  ಹಿನ್ನೆಲೆಯಲ್ಲಿ ಎಲ್ಲಾ ದೇವಾಲಯಗಳು ಮುಚ್ಚಿದ್ದು, ಹಬ್ಬ, ಮದುವೆ, ಸಭೆ ಸಮಾರಂಭಗಳು ಹಾಗೂ ಮತ್ತಿತರೆ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಹೂವಿನ ಬೆಳೆಗಳಿಗೆ ಬೇಡಿಕೆ ಇಲ್ಲದ ಕಾರಣ ಹೂ ಬೆಳೆಗಾರರು ತಾವು ಬೆಳೆದಂತಹ ಹೂಗಳನ್ನು ಕಟಾವು ಮಾಡದೆ ಬೆಳೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದಿಂದ ಅವರಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ