NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ಮುಷ್ಕರದ ಬಗ್ಗೆ ನನ್ನ ಅಭಿಪ್ರಾಯ-ಅನಿಸಿಕೆಗಳು

ವಿಜಯಪಥ ಸಮಗ್ರ ಸುದ್ದಿ

ಸಾರಿಗೆ ಮುಷ್ಕರ ಎಂಬುದು ಎಲ್ಲಾ ಅಧಿಕಾರಿಗಳು ಮತ್ತು ನೌಕರ ಸಿಬ್ಬಂದಿಗಳ ವೇತನಕ್ಕೆ ಸಂಬಂಧಪಟ್ಟಿರುವುದಾಗಿರುತ್ತದೆ.ಎಲ್ಲರೂ ಒಗ್ಗಟ್ಟಿನಿಂದ ಒಟ್ಟಾಗಿ ಮುಷ್ಕರ ಮಾಡಬೇಕಾಗಿದೆ. ಆದರೆ ನಮ್ಮ ನಿಗಮದಲ್ಲಿ ಅಧಿಕಾರಿಗಳು ಮತ್ತು ಆಡಳಿತ ಸಿಬ್ಬಂದಿಗಳು ಮುಷ್ಕರದಲ್ಲಿ ಭಾಗವಹಿಸುವುದಿಲ್ಲ.

ಮುಷ್ಕರದ ಮುಖಾಂತರ ವೇತನದ ಬಗ್ಗೆ ಏನಾದರು ನಿರ್ಧಾರ ಮತ್ತು ಆದೇಶಗಳು ಆದರೆ ಅದು ಎಲ್ಲರಿಗೂ ಅನ್ವಹಿಸುತ್ತದೆ. ಆದ್ದರಿಂದ ವಿಭಾಗದ DC, DTO, DME ಯವರಿಂದ ಹಿಡಿದು ಎಲ್ಲ ವರ್ಗದ ಅಧಿಕಾರಿಗಳು, ನೌಕರರು, ಸಿಬ್ಬಂದಿಗಳು ಒಗ್ಗಟ್ಟಿನಲ್ಲಿ ಮುಷ್ಕರ ಮಾಡಬೇಕು.

ಇಲ್ಲದಿದ್ದರೆ ಎಲ್ಲರಿಗೂ ಆಗುವಾಗೆ ನಮಗೂ ಆಗುತ್ತದೆ. ಮುಷ್ಕರದಲ್ಲಿ ಭಾಗವಹಿಸಿದವರು ಮಾತ್ರ ಯಾಕೆ ಪೊಲೀಸ್‌ ಕೇಸ್, ವರ್ಗಾವಣೆ, ಅಮಾನತು, ವಜಾ ಮತ್ತು ಇನ್ನಿತರ ಗಂಭೀರ ಪ್ರಕರಣಗಳಲ್ಲಿ ಸಿಲುಕಿ ಕಷ್ಟ ನಷ್ಟ ಅನುಭವಿಸಬೇಕು.

ಆದುದರಿಂದ ಅಧಿಕಾರಿಗಳು ಮತ್ತು ಎಲ್ಲ ವರ್ಗದ ನೌಕರರು ಸಿಬ್ಬಂದಿಗಳು ಒಟ್ಟಾಗಿ ಮುಷ್ಕರ ಮಾಡುವುದಾದರೆ ನಾವೆಲ್ಲರೂ ಮುಷ್ಕರದಲ್ಲಿ ಭಾಗವಹಿಸೋಣ. ಇಲ್ಲದಿದ್ದರೆ ನಾವೆಲ್ಲರೂ ಕರ್ತವ್ಯ ನಿರ್ವಹಿಸುವುದು ಸೂಕ್ತವಾಗಿರುತ್ತದೆ ಎಂಬುದು ನನ್ನ ಪರ್ಸನಲ್ ಅಭಿಪ್ರಾಯ ಮತ್ತು ಅನಿಸಿಕೆ ಆಗಿದೆ.

ಧನ್ಯವಾದಗಳು.

ಜೀವನ್ ಮಾರ್ಟಿಸ್
ಸಂಘಟನೆ ಮುಖಂಡರು
KSRTC ಪುತ್ತೂರು ವಿಭಾಗ

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರಿಗೆ 26 ತಿಂಗಳ ವೇತನ ಹಿಂಬಾಕಿ ಪಾವತಿಗೆ ಮೊದಲ ಹಂತವಾಗಿ 450 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ ! KSRTC: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಗುಡ್ಡಕ್ಕೆ ಡಿಕ್ಕಿ ಹೊಡೆದು ನಿಂತ ಬಸ್‌- ತಪ್ಪಿದ ಭಾರಿ ಅನಾಹುತ KSRTC ಪ್ರಮುಖ ಬೇಡಿಕೆಗಳ ಸರ್ಕಾರ ಇನ್ನೂ ನೌಕರರ ಶ್ರಮಕ್ಕನ್ವಯ ಇತ್ಯರ್ಥಪಡಿಸಿಲ್ಲ: ಜ್ಯೋತಿ ಅನಂತಸುಬ್ಬರಾವ್ ಅಸಮಾಧಾನ ಇಂದು ಸಾರಿಗೆ ಸಚಿವರ ಅಧ್ಯಕ್ಷತೇಲಿ ನೌಕರರ ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿ ಕುರಿತು ಮತ್ತೇ ಒಕ್ಕೂಟದ ಜತೆ ಸಭೆ ಕೆಲ ಸಾರಿಗೆ ಅಧಿಕಾರಿಗಳಿಗೆ ವರದಾನವಾದ 17/1ನಿಯಮ- ಮೇ 10ರೊಳಗೆ ರದ್ದುಗೊಳಿಸಿ ಮೂಲ ಹುದ್ದೆಗೆ ನಿಯೋಜಿಸಲು ಎಂಡಿಗೆ ಸಾರಿ... ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಓಕೆನಾ ಅಥವಾ ವೇತನ ಆಯೋಗನಾ? ನೌಕರರ ಅಭಿಪ್ರಾಯವೇನು? KKRTC ವಿಜಯಪುರ: ಪ್ರತಿಷ್ಠಿತ ಸಾರಿಗೆ ಕಲ್ಯಾಣ ರಥ ಸ್ವಂತಕ್ಕೆ ಬಳಸುತ್ತಿರುವ ಕೆಲ ಅಧಿಕಾರಿಗಳು- ಮೌನವಾಗಿರುವ ಡಿಸಿ ಅಮಾ... ಕೇಂದ್ರ ಸರ್ಕಾರ 1966ರ ಸಕ್ಕರೆ ನಿಯಂತ್ರಣ ಕಾಯ್ದೆ ಬಗ್ಗೆ ಕೇಳಿರುವ ಅಭಿಪ್ರಾಯಕ್ಕೆ ರಾಜ್ಯ ಸರ್ಕಾರ ಸಮಿತಿ ರಚಿಸಿ ವರದಿ ... ಮೇ 15ರೊಳಗೆ ಡಿಕೆಶಿಗೆ ಹೈಕಮಾಂಡ್​ನಿಂದ ಸಿಗಲಿದೆಯೇ ಬಿಗ್ ಬರ್ತ್​ಡೇ ಗಿಫ್ಟ್? ನಿಗೂಢವಾಗಿ ಮೃತಪಟ್ಟ ಪ್ರತಿಷ್ಠಿತ ಖಾಸಗಿ ಕಂಪನಿಯೊಂದರ ಮಹಿಳಾ ಉದ್ಯೋಗಿ: ಬೆತ್ತಲೆ, ಅರೆಕೊಳೆತ ಸ್ಥಿತಿಯಲ್ಲಿ ಪತ್ತೆ