NEWSಉದ್ಯೋಗನಮ್ಮರಾಜ್ಯ

KSRTC ಅಧಿಕಾರಿಗಳು ಕಚೇರಿಗೆ ಬಂದಾಗ ತಮ್ಮ ಹಣ ಎಷ್ಟಿತ್ತು ಹೋಗುವಾಗ ಎಷ್ಟಿದೆ ಅಂತ ತಿಳಿಸಬೇಕು: ಎಂಡಿ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರವು ಕಚೇರಿಗಳಲ್ಲಿ ನಗದು ಘೋಷಣೆ ವಹಿ ನಿರ್ವಹಣೆ ಕುರಿತು ವಿವರವಾಗಿ ಮಾರ್ಗಸೂಚಿಗಳನ್ನು ನೀಡಿ, ನಿಗಮ/ ಮಂಡಳಿಗಳಲ್ಲಿ ಸಹ ನಗದು ಘೋಷಣೆ ವಹಿ ನಿರ್ವಹಣೆ ಮಾಡುವಂತೆ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಎಲ್ಲ ಹಂತದ ಕಚೇರಿಗಳಲ್ಲಿ ನಗದು ಘೋಷಣೆ ವಹಿ ನಿರ್ವಹಣೆ ಮಾಡಲು ಕೂಡಲೆ ಕ್ರಮ ವಹಿಸಬೇಕು ಎಂದು ಎಂಡಿ ಅಕ್ರಮ್‌ ಪಾಷ ಆದೇಶ ಹೊರಡಿಸಿದ್ದಾರೆ.

ಕ್ರಮ ವಹಿಸಬೇಕಿರುವುದು: 1. ಅಧಿಕಾರಿ/ ನೌಕರರು ಕರ್ತವ್ಯಕ್ಕೆ ಹಾಜರಾದ ತಕ್ಷಣ ಹಾಗೂ ಕಚೇರಿಯಿಂದ ನಿರ್ಗಮಿಸುವಾಗ ಕಚೇರಿಗೆ ತಂದ ನಗದು ಮೊತ್ತವನ್ನು ನಗದು ಘೋಷಣೆ ವಹಿಯಲ್ಲಿ ತನ್ನ ಸಹಿಯೊಂದಿಗೆ ಘೋಷಿಸತಕ್ಕದ್ದು.

2. ನಗದು ಘೋಷಣೆ ವಹಿಯು ಸಂಬಂಧಪಟ್ಟ ವಿಭಾಗ/ ಶಾಖೆಯ ಅಧಿಕಾರಿಯ ವಶದಲ್ಲಿರತಕ್ಕದ್ದು ಮತ್ತು ಈ ಅಧಿಕಾರಿಯು ನೌಕರನು ಮಾಡಿದ ನಮೂದುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಅಧಿಕಾರವನ್ನು ಹೊಂದಿದ್ದಾರೆ.

3. ಯಾವುದೇ ಅಧಿಕಾರಿ/ ನೌಕರನು ನಗದು ಘೋಷಿಸಿದ್ದಕ್ಕಿಂತ ಹೆಚ್ಚಿನ ಹಣವನ್ನು ಹೊಂದಿರುವುದು ಕಂಡುಬಂದರೆ, ಅಂತಹ ಹೆಚ್ಚುವರಿ ಹಣವನ್ನು ಅಕ್ರಮ ಸಂಪಾದನೆ ಎಂದು ಅರ್ಥೈಸಲಾಗುತ್ತದೆ ಹಾಗೂ ಅಂತಹ ಹೆಚ್ಚುವರಿ ಹಣವನ್ನು ಸಕ್ರಮ ಹಣ ಎಂದು ಸಾಬೀತುಪಡಿಸುವುದು ಅಧಿಕಾರಿ/ ನೌಕರನ ಹೊಣೆಯಾಗಿರುತ್ತದೆ.

4. ನಗದು ಘೋಷಣೆ ವಹಿಯನ್ನು ಕಚೇರಿಯ ವೇಳೆಯ ಎಲ್ಲ ಸಮಯದಲ್ಲಿ ಯಾವುದೇ ಉನ್ನತ ಇಲಾಖಾ ಮುಖ್ಯಸ್ಥರ/ ಸಕ್ಷಮ ಪ್ರಾಧಿಕಾರ/ ವಿಭಾಗ ಮುಖ್ಯಸ್ಥರ/ ಘಟಕದ ಮುಖ್ಯಸ್ಥರ ತಪಾಸಣೆಗಾಗಿ ತೆರೆದಿರಬೇಕು ಎಂದು ತಿಳಿಸಿದ್ದಾರೆ.

ಇನ್ನು ನಿಗಮದ ಮಟ್ಟದಲ್ಲಿ ನಗದು ಘೋಷಣೆ ವಹಿ ನಿರ್ವಹಣೆಯ ಮೇಲ್ವಿಚಾರಣೆ ಮಾಡಲು ಉಪ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕ (ಸಿಬ್ಬಂದಿ) ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. ಹೀಗಾಗಿ ಸಂಬಂಧಪಟ್ಟವರೆಲ್ಲರೂ ಈ ಆದೇಶವನ್ನು ಮನದಟ್ಟು ಮಾಡಿಕೊಂಡು ಅದರಂತೆ ಕ್ರಮ ಕೈಗೊಳ್ಳತಕ್ಕದ್ದು. ಅಲ್ಲದೆ ಈ ಸುತ್ತೋಲೆಯು ತಕ್ಷಣದಿಂದ ಜಾರಿಗೆ ಬರುತ್ತದೆ ಎಂದು ತಿಳಿಸಿದ್ದಾರೆ. ಆದೇಶ ಪ್ರತಿ 1738 Cash Declaration

Megha
the authorMegha

Leave a Reply

error: Content is protected !!
Latest news
KKRTC: ಭ್ರಷ್ಟ ಅಧಿಕಾರಿಗಳ ವಿರುದ್ಧ ಎಂಡಿಗೆ ಲಿಖಿತ ದೂರು ಕೊಟ್ಟು 3 ತಿಂಗಳುಗಳು ಕಳೆದರೂ ಯಾವುದೇ ಕ್ರಮವಿಲ್ಲ ಏಕೆ- ಯಾ... KSRTC- ನಮ್ಮ ಹೋರಾಟ ಕಡೆಗಣಿಸುತ್ತಿದ್ದೀರಿ ಇದು ನಿಮಗೆ ಸಲ್ಲ- ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತೇವೆ ಕೇಂದ್ರ ಸರ್... ಸಾರಿಗೆ ನೌಕರರಿಗೆ 26 ತಿಂಗಳ ವೇತನ ಹಿಂಬಾಕಿ ಪಾವತಿಗೆ ಮೊದಲ ಹಂತವಾಗಿ 450 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ ! KSRTC: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಗುಡ್ಡಕ್ಕೆ ಡಿಕ್ಕಿ ಹೊಡೆದು ನಿಂತ ಬಸ್‌- ತಪ್ಪಿದ ಭಾರಿ ಅನಾಹುತ KSRTC ಪ್ರಮುಖ ಬೇಡಿಕೆಗಳ ಸರ್ಕಾರ ಇನ್ನೂ ನೌಕರರ ಶ್ರಮಕ್ಕನ್ವಯ ಇತ್ಯರ್ಥಪಡಿಸಿಲ್ಲ: ಜ್ಯೋತಿ ಅನಂತಸುಬ್ಬರಾವ್ ಅಸಮಾಧಾನ ಇಂದು ಸಾರಿಗೆ ಸಚಿವರ ಅಧ್ಯಕ್ಷತೇಲಿ ನೌಕರರ ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿ ಕುರಿತು ಮತ್ತೇ ಒಕ್ಕೂಟದ ಜತೆ ಸಭೆ ಕೆಲ ಸಾರಿಗೆ ಅಧಿಕಾರಿಗಳಿಗೆ ವರದಾನವಾದ 17/1ನಿಯಮ- ಮೇ 10ರೊಳಗೆ ರದ್ದುಗೊಳಿಸಿ ಮೂಲ ಹುದ್ದೆಗೆ ನಿಯೋಜಿಸಲು ಎಂಡಿಗೆ ಸಾರಿ... ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಓಕೆನಾ ಅಥವಾ ವೇತನ ಆಯೋಗನಾ? ನೌಕರರ ಅಭಿಪ್ರಾಯವೇನು? KKRTC ವಿಜಯಪುರ: ಪ್ರತಿಷ್ಠಿತ ಸಾರಿಗೆ ಕಲ್ಯಾಣ ರಥ ಸ್ವಂತಕ್ಕೆ ಬಳಸುತ್ತಿರುವ ಕೆಲ ಅಧಿಕಾರಿಗಳು- ಮೌನವಾಗಿರುವ ಡಿಸಿ ಅಮಾ... ಕೇಂದ್ರ ಸರ್ಕಾರ 1966ರ ಸಕ್ಕರೆ ನಿಯಂತ್ರಣ ಕಾಯ್ದೆ ಬಗ್ಗೆ ಕೇಳಿರುವ ಅಭಿಪ್ರಾಯಕ್ಕೆ ರಾಜ್ಯ ಸರ್ಕಾರ ಸಮಿತಿ ರಚಿಸಿ ವರದಿ ...