NEWSನಮ್ಮರಾಜ್ಯಶಿಕ್ಷಣ

ಸರ್ಕಾರಿ ನೌಕರರು ಜಾತಿ, ಧರ್ಮ ಮಾಡಬಾರದು: ಸಿಎಂ ಸಿದ್ದರಾಮಯ್ಯ ಸಲಹೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸರ್ಕಾರಿ ನೌಕರರು ಜಾತಿ, ಧರ್ಮ ಮಾಡಬಾರದು. ಇದು ವೃತ್ತಿಗೆ ಮಾಡುವ ಅವಮಾನ. ನಮ್ಮ ಮೇಲೆ, ಸರ್ಕಾರಿ ನೌಕರರ ಮೇಲೆ ಸಮಾಜದ ಋಣ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಂದು ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಪ್ಪ ಅಮ್ಮ ಖರ್ಚು ಮಾಡಿದ ಹಣದಲ್ಲಿ ನೀವೆಲ್ಲಾ ಸರ್ಕಾರಿ ನೌಕರರಾಗಲು ಸಾಧ್ಯವಿಲ್ಲ. ನಾವು ಶಾಸಕರಾಗಲು, ಮಂತ್ರಿಗಳಾಗಲು ಸಾಧ್ಯವಿಲ್ಲ. ಜನರ ತೆರಿಗೆ ಹಣದಲ್ಲಿ ನಾವೆಲ್ಲಾ ಬದುಕಿದ್ದೇವೆ. ಹೀಗಾಗಿ ಸಮಾಜದ, ಎಲ್ಲ ಜಾತಿ, ಧರ್ಮದವರ ಋಣವೂ ನಮ್ಮ ಮೇಲಿದೆ. ಈ ಋಣ ಪ್ರಜ್ಞೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.

ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಪ್ರತಿಯೊಬ್ಬರ ಪ್ರತಿಭೆ ಹೊರಗೆ ಬರತ್ತದೆ. ಮಕ್ಕಳ ಪ್ರತಿಭೆ ರೂಪುಗೊಳ್ಳಲು ಶಿಕ್ಷಕರಷ್ಟೇ ಪೋಷಕರ ಶ್ರಮ ಕೂಡ ಅಗತ್ಯ. ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳದಿದ್ದರೆ ಯಾರನ್ನೂ ದೂರಲು ಸಾಧ್ಯವಿಲ್ಲ ಎಂದರು.

ನಮಗೆ ವಿಶ್ವ ಮಾನವರಾಗುವ ಅವಕಾಶ ಇದೆ. ಅಲ್ಪ ಮಾನವರಾಗುವುದು ಬೇಡ. ಹುಟ್ಟು ಆಕಸ್ಮಿಕ, ಸಾವು ನಿಶ್ಚಿತ. ಆದ್ದರಿಂದ ನಾವು ಸಮಾಜದ ಋಣ ತೀರಿಸಿ ಬದುಕನ್ನು ಸಾರ್ಥಕ ಮಾಡಿಕೊಳ್ಳೋಣ. ಶಿಕ್ಷಕರು, ಸೈನಿಕರು, ರೈತರು ನಮ್ಮ ಬದುಕನ್ನು ಹಸನು ಮಾಡಿದ್ದಾರೆ. ಈ ಮೂವರ ಋಣ ತೀರಿಸುವ ಕೆಲಸ ನಾವು ಮಾಡಬೇಕಿದೆ ಎಂದರು.

ಶಿಕ್ಷಕರಾದವರು ಮಕ್ಕಳಲ್ಲಿ ವೈಚಾರಿಕ, ವೈಜ್ಞಾನಿಕ ಪ್ರಜ್ಞೆ ಮೂಡಿಸುವ ಮೂಲಕ ಸಮಾಜಮುಖಿ ಪ್ರಜೆಗಳನ್ನು ರೂಪಿಸಬೇಕು. ಏಳನೇ ವೇತನ‌ ಆಯೋಗದ ಶಿಫಾರಸ್ಸುಗಳನ್ನು ಯಥಾವತ್ತಾಗಿ ಜಾರಿ ಮಾಡಿದ್ದೇನೆ. ಒಪಿಎಸ್ ಜಾರಿ ಕುರಿತಾಗಿ ಸಮಿತಿ ವರದಿ ಕೊಟ್ಟ ಬಳಿಕ‌ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ.
ಆರೋಗ್ಯ ಸಂಜೀವಿನಿ ಬಗ್ಗೆಯೂ ಸೂಕ್ತ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಿದ್ಧವಿದೆ. ನಿಮ್ಮ ಬೇಡಿಕೆಗಳ ಈಡೇರಿಕೆಗೆ ಸದಾ ತೆರೆದ ಮನಸ್ಸಿನಿಂದ ಇರುತ್ತೇನೆ. ಹಾಗೆಯೇ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿಯನ್ನೂ ನೀವು ಪರಿಣಾಮಕಾರಿಯಾಗಿ ಮಾಡಬೇಕು ಎಂದರು.

Megha
the authorMegha

Leave a Reply

error: Content is protected !!
Latest news
ಇ-ಖಾತಾ ತಿದ್ದುಪಡಿ ಜವಾಬ್ದಾರಿ ಉಪ ಆಯುಕ್ತರಿಗೆ ಕೊಡಿ: ಮಹೇಶ್ವರ್ ರಾವ್ ವಿದ್ಯುತ್ ಖಾಸಗೀಕರಣ ನಿಲ್ಲಿಸಿ: ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಆಗ್ರಹ BMTC: ದೈಹಿಕವಾಗಿ ಫಿಟ್‌ ಇದ್ದರೂ ಲಘುಡ್ಯೂಟಿ ಮಾಡುತ್ತಿರುವ ನೌಕರರ ಸಂಘಟನೆಯ ಮುಖಂಡ- ಕಂಡು ಕಾಣದಂತೆ ಮೌನವಾಗಿರುವ ಅಧಿಕ... ಮೃತ ಗೃಹಲಕ್ಷ್ಮಿಯರ ಬ್ಯಾಂಕ್‌ ಖಾತೆ ಸೇರಿದೆ ಬರೋಬರಿ 79.75 ಕೋಟಿ ರೂ.ಗೂ ಹೆಚ್ಚು ಹಣ ಇಂದಿನಿಂದ KSRTC ಬಸ್‌ನಲ್ಲಿ ಯಾವುದೇ ವಿಶೇಷ ಕಾರ್ಡ್‌ ಇಲ್ಲದೆ ಮಹಿಳೆಯರ ಮುಕ್ತ ಪ್ರಯಾಣಕ್ಕೆ ಅವಕಾಶ- "ಪ್ರಿಯದರ್ಶಿನಿ ಯ... ಪೆಟ್ರೋಲ್, ಡೀಸೆಲ್‌ಗೆ ಪರ್ಯಾಯವಾಗಿ ನೂರಕ್ಕೆ ನೂರರಷ್ಟು ಎಥನಾಲ್ ಬಳಕೆ: ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತ 8ನೇ ವೇತನ ಆಯೋಗ: ಸಲಹೆ ಸಂಗ್ರಹಕ್ಕೆ ಸರ್ಕಾರ ಕೊಟ್ಟಿದ್ದ ಗಡುವು ಇಂದಿಗೆ ಮುಕ್ತಾಯ- ವರದಿ ಸಲ್ಲಿಕೆಯೊಂದೇ ಬಾಕಿ ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ