ಮಂಡ್ಯ: ಸರ್ಕಾರಿ ಶಾಲೆ ಮಕ್ಕಳಿಗೆ ಅಪೌಷ್ಟಿಕತೆ ಹೋಗಲಾಡಿಸಲು ಸರ್ಕಾರ ಮೊಟ್ಟೆ ಕೊಡುತ್ತಿದೆ. ಅದಕ್ಕೆ ಪಾಲಕರ ಬೆಂಬಲವೂ ಇದೆ. ಇಲ್ಲಿ ಕೆಲ ಪೋಷಕರು ನೀವು ಶಾಲೆಯಲ್ಲಿ ನಮ್ಮ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡಿದರೆ ಟಿಸಿ ಕೊಡಿ ಎಂದು ಪ್ರತಿಭಟನೆ ಮಾಡುತ್ತಿದ್ದಾರೆ.
ಹೌದು! ಮಂಡ್ಯದ ಗ್ರಾಮವೊಂದರಲ್ಲಿ ಈಗ ಮೊಟ್ಟೆ ವಿವಾದ ಉದ್ಬವವಾಗಿದೆ. ಮೊಟ್ಟೆ ಕೊಡುವುದೇ ಆದರೆ ನಮ್ಮ ಮಕ್ಕಳನ್ನು ಶಾಲೆಗೆ ಕಳ್ಸಲ್ಲ ಎಂದು ಪೋಷಕರು ಹಠಹಿಡಿದು ಕುಳಿತಿದ್ದಾರೆ.
ಮಂಡ್ಯದ ಆಲಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ವಿಚಾರಕ್ಕೆ ಕಿರಿಕ್ ಶುರುವಾಗಿದೆ. ಈ ಶಾಲೆಯಲ್ಲಿರುವ 120 ವಿದ್ಯಾರ್ಥಿಗಳ ಪೈಕಿ 80 ಮಕ್ಕಳು ಮೊಟ್ಟೆ ಬೇಡ ಎಂದು ಹೇಳುತ್ತಿದ್ದಾರೆ. ಪೋಷಕರು ಕೂಡ ಮೊಟ್ಟೆ ಕೊಡುವುದನ್ನು ವಿರೋಧಿಸಿದ್ದು, ಮೊಟ್ಟೆ ಕೊಟ್ರೆ ನಮ್ಮ ಮಕ್ಕಳಿಗೆ ಟಿಸಿ ಕೊಡಿ ಬೇರೆ ಶಾಲೆಗೆ ಸೇರಿಸುತ್ತೀವಿ ಎಂದು ಹೇಳುತ್ತಿದ್ದಾರೆ.
ಏಕೆ ಇವರು ಹೀಗೆ ಹೇಳುತ್ತಿದ್ದಾರೆ ಎಂದರೆ ಅದಕ್ಕೆ ಒಂದು ಕಾರಣ ಕೂಡ ಇದೆ. ಶಾಲೆ ಸಮೀಪದಲ್ಲೇ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನವಿದೆ. ಈ ಹಿಂದಿನಿಂದಲೂ ಈ ದೇವಾಲಯ ಸುತ್ತಮುತ್ತ ಮಾಂಸಾಹಾರ ನಿಷೇಧವಿದೆ. ಇದು ಹಲವಾರು ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಸಂಪ್ರದಾಯವಾಗಿದೆ. ಇನ್ನು ಶಾಲೆ ಕೂಡ ದೇವಾಲಯದ ಸಮೀಪದಲ್ಲೇ ಇರುವುದರಿಂದ ನೀವು ಮೊಟ್ಟೆ ನೀಡಿ ನಮ್ಮ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಬೇಡಿ ಎಂದು ಪೋಷಕರು ಹೇಳುತ್ತಿದ್ದಾರೆ.
ಇದೇ ಕಾರಣದಿಂದ ಕಳೆದ 3 ವರ್ಷಗಳಿಂದ ಇಲ್ಲಿನ ವಿದ್ಯಾರ್ಥಿಗಳಿಗೆ ಸರ್ಕಾರ ಮೊಟ್ಟೆ ವಿತರಿಸಲು ನಿರ್ಧರಿಸಿದಾಗಲೂ ಈ ಶಾಲೆಯಲ್ಲಿ ಮೊಟ್ಟೆ ಬದಲಿಗೆ ಬಾಳೆಹಣ್ಣು, ಚಿಕ್ಕಿ ನೀಡಲು ಶಾಲೆಯ ಎಸ್ಡಿಎಂಸಿ ನಿರ್ಧರಿಸಿತ್ತು. ಅಂದಿನಿಂದ ಇಲ್ಲಿಯವರೆಗೂ ಈ ನಿಯಮವನ್ನೇ ಪಾಲಿಸಿಕೊಂಡು ಬರಲಾಗುತ್ತಿದೆ.
ಆದರೆ ಈಗ ಗ್ರಾಮದ ಕೆಲವರು ಮಕ್ಕಳಿಗೆ ಪೌಷ್ಟಿಕಾಹಾರ ಪೂರೈಕೆ ದೃಷ್ಟಿಯಿಂದ ಮೊಟ್ಟೆ ವಿತರಿಸಿ ಎಂದು ಮನವಿ ಮಾಡಿದ್ದಾರೆ. ಅವರ ಮನವಿ ಮನ್ನಣೆ ನೀಡಿ ಶಿಕ್ಷಣ ಇಲಾಖೆ ಕೂಡ ಸರ್ಕಾರದ ನಿಯಮದಂತೆ ಮೊಟ್ಟೆ ಕೊಡಲು ಮುಂದಾಗಿದೆ. ಆದರೆ, ಅಧಿಕಾರಿಗಳ ಈ ನಿರ್ಧಾರ ಗ್ರಾಮಸ್ಥರನ್ನು ಕೆರಳಿಸಿದೆ. ಮೊಟ್ಟೆ ತಿನ್ನುವ ಮಕ್ಕಳಿಗೆ ಅವರ ಮನೆಗೆ ಮೊಟ್ಟೆ ತಲುಪಿಸಿ. ನೀವು ಶಾಲೆಯಲ್ಲಿ ಮೊಟ್ಟೆ ಕೊಟ್ಟು ಜನರ ಭಾವನೆಗೆ ನೋವುಂಟು ಮಾಡಬೇಡಿ ಎಂದು ಒತ್ತಾಯಿಸುತ್ತಿದ್ದಾರೆ.
ಒಟ್ಟಾರೆ ಆಲಕೆರೆ ಗ್ರಾಮದ ಮೊಟ್ಟೆ ವಿವಾದ ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ಸಂದಿಗ್ಧ ಪರಿಸ್ಥಿತಿಗೆ ತಳ್ಳಿದೆ. ಮೊಟ್ಟೆ ಕೊಟ್ಟರೇ 80 ವಿದ್ಯಾರ್ಥಿಗಳು ಶಾಲೆ ಬಿಡುವ ಆತಂಕ ಒಂದೆಡೆಯಾದರೆ, ಮೊಟ್ಟೆ ಕೊಡದಿದ್ರೆ ಸರ್ಕಾರದ ಪೌಷ್ಟಿಕಾಹಾರ ಪೂರೈಕೆ ನಿಯಮ ಉಲ್ಲಂಘನೆಯಾಗುವ ಭಯ ಕಾಡುತ್ತಿದೆ. ಹೀಗಾಗಿ ಇಲ್ಲಿ ಪೋಷಕರು ಹೇಳುತ್ತಿರುವಂತೆ ಮಕ್ಕಳಿಗೆ ಶಾಲೆಯಲ್ಲಿ ಪೊಟ್ಟೆ ಕೊಡುವ ಬದಲು ಆ ಮೊಟ್ಟೆಗಳನ್ನೇ ಅವರ ಮನೆಗೆ ಕೊಟ್ಟು ಅಲ್ಲೇ ತಿನ್ನುವಂತ ಕ್ರಮ ತೆಗೆದುಕೊಂಡರೆ ಯಾವುದೇ ಗೊಂದಲವಿಲ್ಲ.
ಆದರೆ, ಮಕ್ಕಳ ಮನೆಗಳಿಗೆ ಶಾಲೆಯಿಂದ ಮೊಟ್ಟೆ ಕೊಡುವುದಕ್ಕೆ ಸಂಬಂಧಪಟ್ಟ ಮೇಲಧಿಕಾರಿಗಳು ಒಪ್ಪಿಗೆ ನೀಡಿ ಮನೆಗೆ ಮೊಟ್ಟೆ ಕೊಡುತ್ತಿರುವುದಕ್ಕೆ ಕಾರಣವನ್ನು ಸರ್ಕಾರಕ್ಕೆ ಮನವರಿಕೆ ಮಾಡಿಕೊಡಬೇಕಿದೆ. ಆ ಬಳಿಕ ಮೊಟ್ಟೆ ವಿತರಣೆ ಮಾಡಬಹುದಾಗಿದೆ.ಈ ಕೆಲಸವನ್ನು ಸಂಬಂಧಪಟಟ ಅಧಿಕಾರಿಗಳು ಮಾಡಬೇಕಿದೆ.
Related

You Might Also Like
ಕರ್ತವ್ಯ ಲೋಪವೆಸಗಿದ ಮೂವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಆದೇಶ
ಬೆಂಗಳೂರು: ಬಿಬಿಎಂಪಿ ಪಶ್ಚಿಮ ವಲಯ ಮಹಾಲಕ್ಷ್ಮಿಪುರ ವಿಭಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೂವರು ಸಿಬ್ಬಂದಿಯನ್ನು ಕರ್ತವ್ಯ ಲೋಪವೆಸಗಿರುವ ಕಾರಣ ಕರ್ತವ್ಯದಿಂದ ಬಿಡುಗಡೆಗೊಳಿ ಪಶ್ಚಿಮ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್...
ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ: ಜಿಲ್ಲಾಧಿಕಾರಿ ಬಸವರಾಜು
10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ...
ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಭಾಗವಹಿಸುವ ನೌಕರರ ವಿರುದ್ಧ ಕ್ರಮ: KSRTC ಎಂಡಿ ಅಕ್ರಮ್ ಪಾಷ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹೂಡಲು ತೀರ್ಮಾನಿಸಿರುವುದರಿಂದ ನೌಕರರು...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆ ನಾಳೆ ಖಾಸಗಿ ಬಸ್ ಮಾಲೀಕರ ಸಭೆ ಕರೆದ ಸಾರಿಗೆ ಆಯುಕ್ತರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರು ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸಾರಿಗೆ ಇಲಾಖೆ ಆಯುಕ್ತರ...
ಮೊಂಡುತನ ಬಿಟ್ಟು ಸಾರಿಗೆ ನೌಕರರಿಗೆ ಕೊಡಬೇಕಿರುವುದ ಕೊಡಿ: ಅಧಿಕಾರವಿದೆ ಎಂಬ ದರ್ಪ ಬಿಡಿ ಸಿದ್ದುಜೀ- ಇದು ಶಾಶ್ವತವಲ್ಲ!
ಸಿಎಂ ಸಿದ್ದರಾಮಯ್ಯ ಸಾಹೇಬರೆ ನೀವು ಈಗ ವಕೀಲರಲ್ಲ ಸರ್ಕಾರದ ಸಂಬಳ ಪಡೆಯುವವರಲ್ಲಿ ನೀವು ಒಬ್ಬರು ಈಗ ನಿಮಗೆ ವಕೀಲ ವೃತ್ತಿ ಮಾಡುವುದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ ಎಂಬುದನ್ನು ಮರೆತಿರ...
ಆ.5ರಿಂದ ಸಾರಿಗೆ ನೌಕರರು ಹಮ್ಮಿಕೊಂಡಿರುವ ಮುಷ್ಕರಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ: ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ನ್ಯಾಯಯುತ ಬೇಡಿಕೆಯ ಹೋರಾಟಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...
KSRTC ನಾಲ್ಕೂ ನಿಗಮಗಳ ನೌಕರರ ವೇತನ ಪರಿಷ್ಕರಣೆ 2027ರ ನಂತರ ಮಾಡಲು ಮಾತ್ರ ಸಾಧ್ಯ: ಪ್ರತಿಪಾದಿಸುತ್ತಿರುವ ಸಾರಿಗೆ ಇಲಾಖೆ
ಬೆಂಗಳೂರು: ನಾಲ್ಕೂ ಸಾರಿಗೆ ನಿಗಮಗಳ ಅಧಿಕಾರಿಗಳು/ನೌಕರರ ವೇತನ ಪರಿಷ್ಕರಣೆ 2023ರ ಮಾರ್ಚ್ನಲ್ಲಿ ಶೇ.15ರಷ್ಟು ಹೆಚ್ಚಳ ಮಾಡಿರುವುದರಿಂದ ಮುಂದಿನ ಪರಿಷ್ಕರಣೆಯನ್ನು 2027ರ ನಂತರ ಮಾಡಲು ಮಾತ್ರ ಸಾಧ್ಯ ಎಂದು...
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...