ಇಂದು ಕರೆದಿದ್ದ KSRTC ನೌಕರರ ಸಂಧಾನ ಸಭೆಯಲ್ಲಿ ಕಾಲವಕಾಶ ಕೇಳಿದ ಆಡಳಿತ ಮಂಡಳಿ- ಆ.2ಕ್ಕೆ ಸಭೆ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗಸ್ಟ್ 5ರಿಂದ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನೋಟಿಸ್ ನೀಡಿರುವ ಸಂಬಂಧ ಇಂದು ಸಂಜೆ ಕಾರ್ಮಿಕ ಆಯುಕ್ತರ ಸಮ್ಮುಖದಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿಯು ಪ್ರಮುಖ ಬೇಡಿಕೆಗಳಾದ 38 ತಿಂಗಳ ವೇತನ ಹಿಂಬಾಕಿ ಮತ್ತು 2024ರ ಜನವರಿ 1ರಿಂದ ಜಾರಿಗೆ ಬರಬೇಕಾಗಿರುವ ವೇತನ ಪರಿಷ್ಕರಣೆ ಮಾಡಬೇಕು ಎಂದು ಆಗ್ರಹಿಸಿ ಆಗಸ್ಟ್ 5 ರಿಂದ ಮುಷ್ಕರ ನಡೆಸಲು ತೀರ್ಮಾನಿಸಿದ್ದು, ಹೀಗಾಗಿ ಸರ್ಕಾರ ಅಷ್ಟರೊಳಗೆ ನಮ್ಮ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದೆ.
ಈ ಹಿನ್ನೆಲೆಯಲ್ಲಿ ಸಮತಿ ನೀಡಿರುವ ಮುಷ್ಕರದ ನೋಟಿಸ್ ಸಂಬಂಧ ಇಂದು ಕಾರ್ಮಿಕ ಇಲಾಖೆ ಆಯುಕ್ತರ ಸಮ್ಮುಖದಲ್ಲಿ ಸಮಿತಿ ಪದಾಧಿಕಾರಿಗಳು ಹಾಗೂ ಸಾರಿಗೆ ನಿಗಮಗಳ ಆಡಳಿತ ಮಂಡಳಿ ನಡುವೆ ಸಂಧಾನ ಸಭೆ ನಡೆಯಿತು.
ಈ ವೇಳೆ ಜಂಟಿ ಕ್ರಿಯಾ ಸಮಿತಿ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಹಾಗೂ 2024 ಜನವರಿ 1ರಿಂದ ವೇತನ ಪರಿಷ್ಕರಣೆ, ಎರಡು ಬೇಡಿಕೆಗಳ ಬಗ್ಗೆ ತಮ್ಮ ಸ್ಪಷ್ಟ ಅಭಿಪ್ರಾಯವನ್ನು ತಿಳಿಸಿ ಈ ನಮ್ಮ ಬೇಡಿಕೆಗಳನ್ನು ಈಡೇರಿಸಲೇಬೇಕೆಂದು ಒತ್ತಾಯಿಸಿತು. ಸಮಿತಿಯ ವಾದವನ್ನು ಆಲಿಸಿದ ಆಯುಕ್ತರು ಆಡಳಿತ ವರ್ಗದ ಅಭಿಪ್ರಾಯ ಕೇಳಿದರು.
ಈ ಸಂದರ್ಭದಲ್ಲಿ ಆಡಳಿತ ವರ್ಗದ ಪರವಾಗಿ ಸಭೆಗೆ ಆಗಮಿಸಸಿದ್ದ ಕೆಎಸ್ಆರ್ಟಿಸಿ ನಿಗಮದ ನಿರ್ದೇಶಕರು ( ಸಿ ಮತ್ತು ಜಾ), ಕಾರ್ಮಿಕರ ಬೇಡಿಕೆಗಳ ಬಗ್ಗೆ ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸಲಾಗಿದೆ. ಅಲ್ಲದೆ ಈ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕಾಗಿದೆ. ಆದ್ದರಿಂದ ಸ್ವಲ್ಪ ಕಾಲಾವಕಾಶ ಬೇಕೆಂದು ಮನವಿ ಮಾಡಿದರು.
ಆಗ ಜಂಟಿ ಕ್ರಿಯಾ ಸಮಿತಿಯು ನಮ್ಮ ಬೇಡಿಕೆಗಳ ಬಗ್ಗೆ ಅಂತಿಮ ತೀರ್ಮಾನವನ್ನು ಆಗಸ್ಟ್ 4ರೊಳೆಗೆ ತೆಗೆದುಕೊಳ್ಳಲೇಬೇಕು ಎಂದು ಸ್ಪಷ್ಟವಾಗಿ ತಿಳಿಸಿತು. ಹೀಗಾಗಿ ಆಯುಕ್ತರು ಸಭೆಯನ್ನು ಮತ್ತೆ ಆ.2ರಂದು ಬೆಳಗ್ಗೆ 11 ಗಂಟೆಗೆ ನಿಗದಿಸಿಗೊಳಿಸಿ ಅಂದು ಆಡಳಿತ ವರ್ಗ ಸರ್ಕಾರದ ಸ್ಪಷ್ಟ ತೀರ್ಮಾನವನ್ನು ತಿಳಿಸಬೇಕು ಎಂದು ಸೂಚಿಸಿದರು.
ಇನ್ನು ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು ಸರ್ಕಾರದಿಂದ ನಮ್ಮ ಬೇಡಿಕೆಗಳ ಬಗ್ಗೆ ಸ್ಪಷ್ಟ ತೀರ್ಮಾನ ಬರುವವರಿಗೂ ಮುಷ್ಕರದ ತೀರ್ಮಾನ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.
Related

You Might Also Like
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...