CRIMENEWSನಮ್ಮಜಿಲ್ಲೆ

ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ.

ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು ಕುಡಿದು ಕಳೆದ ಮೂರು ದಿನಗಳಿಂದ 30ಕ್ಕೂ ಹೆಚ್ಚು ಮಂದಿ ಗ್ರಾಮಸ್ಥರು ಅಸ್ವಸ್ಥಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಅಲ್ಲದೆ ಈ ವಿಷಯ ತಿಳಿಯುತ್ತಿದ್ದಂತೆ ವೈದರ ತಂಡವೊಂದು ಗ್ರಾಮದಲ್ಲಿಯೇ ಬೀಡುಬಿಟ್ಟಿದ್ದು, ಎರಡು ಅಂಬುಲೆನ್ಸ್ ಕೂಡ ಇಲ್ಲಿಯೇ ಇದ್ದು ಅಸ್ವಸ್ಥಗೊಂಡಿರುವ ಮಂದಿ ಗಂಭೀರ ಸ್ಥಿತಿಗೆ ತಲುಪಿದರೆ ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆಗಳಿಗೆ ಸಾಗಿಸುವುದಕ್ಕೆ ಸಿದ್ದವಾಗಿವೆ.

ಈಗಾಗಲೇ ಕೆಲವರನ್ನು ಚಿಕಿತ್ಸೆಗಾಗಿ ವಿಜಯಪುರ, ಬಸವನ ಬಾಗೇವಾಡಿ, ಬಾಗಲಕೋಟೆ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. ಜತೆಗೆ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಓರ್ವನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆ ಮಾಡಿಲಾಗಿದೆ ಎಂದು ಗ್ರಾಪಂ ಅಧಿಕಾರಿ ತಿಳಿಸಿದ್ದಾರೆ.

ಇನ್ನು ಬ್ಯಾಲಿಹಾಳ ಗ್ರಾಮದ ಬಹುತೇಕ ಗ್ರಾಮಸ್ಥರು ಆಸ್ಪತ್ರೆಗಳಲ್ಲಿ ಠಿಕಾಣಿ ಹೂಡಿದ್ದು, ದಿನೇ ದಿನೇ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಜತೆಗೆ ವೈದರ ತಂಡ ಗ್ರಾಮದಲ್ಲಿಯೇ ಇದ್ದು ಸೂಕ್ತ ಚಿಕಿತ್ಸೆ ನೀಡುತ್ತಿದೆ. ಹೀಗಾಗಿ ಇದುವರೆಗೂ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
GBA ದಕ್ಷಿಣ: ಮಳೆ ಬಂದಾಗ ಹೆಚ್ಚು ನೀರು ನಿಲ್ಲುವ ಪ್ರದೇಶಗಳಿಗೆ ಆಯುಕ್ತ ರಮೇಶ್ ಭೇಟಿ ಸರ್ಕಾರ ಸಾರಿಗೆ ನೌಕರರ ಏಳಿಗೆ ಬಗ್ಗೆ ಯೋಚಿಸಲೂ ಆಗದಂತಹ ನಿಕೃಷ್ಟ ಹಂತ ತಲುಪಿರುವುದು ದುರಂತವೇ ಸರಿ: ವಿಪಕ್ಷ ನಾಯಕ ಆರ್‌... KKRTC: ಭ್ರಷ್ಟ ಅಧಿಕಾರಿಗಳ ವಿರುದ್ಧ ಎಂಡಿಗೆ ಲಿಖಿತ ದೂರು ಕೊಟ್ಟು 3 ತಿಂಗಳುಗಳು ಕಳೆದರೂ ಯಾವುದೇ ಕ್ರಮವಿಲ್ಲ ಏಕೆ- ಯಾ... KSRTC- ನಮ್ಮ ಹೋರಾಟ ಕಡೆಗಣಿಸುತ್ತಿದ್ದೀರಿ ಇದು ನಿಮಗೆ ಸಲ್ಲ- ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತೇವೆ ಕೇಂದ್ರ ಸರ್... ಸಾರಿಗೆ ನೌಕರರಿಗೆ 26 ತಿಂಗಳ ವೇತನ ಹಿಂಬಾಕಿ ಪಾವತಿಗೆ ಮೊದಲ ಹಂತವಾಗಿ 450 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ ! KSRTC: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಗುಡ್ಡಕ್ಕೆ ಡಿಕ್ಕಿ ಹೊಡೆದು ನಿಂತ ಬಸ್‌- ತಪ್ಪಿದ ಭಾರಿ ಅನಾಹುತ KSRTC ಪ್ರಮುಖ ಬೇಡಿಕೆಗಳ ಸರ್ಕಾರ ಇನ್ನೂ ನೌಕರರ ಶ್ರಮಕ್ಕನ್ವಯ ಇತ್ಯರ್ಥಪಡಿಸಿಲ್ಲ: ಜ್ಯೋತಿ ಅನಂತಸುಬ್ಬರಾವ್ ಅಸಮಾಧಾನ ಇಂದು ಸಾರಿಗೆ ಸಚಿವರ ಅಧ್ಯಕ್ಷತೇಲಿ ನೌಕರರ ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿ ಕುರಿತು ಮತ್ತೇ ಒಕ್ಕೂಟದ ಜತೆ ಸಭೆ ಕೆಲ ಸಾರಿಗೆ ಅಧಿಕಾರಿಗಳಿಗೆ ವರದಾನವಾದ 17/1ನಿಯಮ- ಮೇ 10ರೊಳಗೆ ರದ್ದುಗೊಳಿಸಿ ಮೂಲ ಹುದ್ದೆಗೆ ನಿಯೋಜಿಸಲು ಎಂಡಿಗೆ ಸಾರಿ... ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಓಕೆನಾ ಅಥವಾ ವೇತನ ಆಯೋಗನಾ? ನೌಕರರ ಅಭಿಪ್ರಾಯವೇನು?