KSRTC ಮುಷ್ಕರಕ್ಕೆ ಬೆಂಬಲ ನೀಡದಿದ್ದರೆ ನಿನಗೆ ಒಂದು ಗತಿ ಕಾಣಿಸುತ್ತೇವೆ: ಗೂಗಲ್ ಮೀಟ್ನಲ್ಲಿ ನೌಕರನಿಗೆ ಬೆದರಿಕೆ- ದೂರು ದಾಖಲು

ತುಮಕೂರು: ಸಾರಿಗೆ ನಿಗಮದ ದಾವಣಗೆರೆ ವಿಭಾಗದ ಜೂನಿಯರ್ ಆಸಿಸ್ಟೆಂಟ್ ಕಂ ಡಾಟಾ ಎಂಟ್ರಿ ಆಪರೇಟರ್ ಪ್ರಸ್ತುತ ಎರವಲು ಸೇವೆ ಸಾರಿಗೆ ಇಲಾಖೆ ಮತ್ತು ಕೆಎಸ್ಆರ್ಟಿಸಿ ನೌಕರರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬೆಂಗಳೂರು ಅಧ್ಯಕ್ಷ ಓಂಕಾರ್ ಸೇರಿದಂತೆ ಎಂಬುವರು ಆ.5ರಂದು ಜಂಟಿ ಕ್ರಿಯಾ ಸಮಿತಿಯವರು ಕರೆ ನೀಡಿರುವ ಸಾರಿಗೆ ಮುಷ್ಕರಕ್ಕೆ ಬೆಂಬಲ ನೀಡಲು ಜುಲೈ 30ರಂದು ಗೂಗಲ್ ಮೀಟಿಂಗ್ ಸಭೆ ಆಯೋಜಿಸಿದ್ದರು.
ಈ ವೇಳೆ ವಿಭಾಗ ಹಾಗೂ ಘಟಕ ಮಟ್ಟದ ನೌಕರರನ್ನು ಮುಷ್ಕರ ಮಾಡಲು ಪ್ರಚೋದನೆ ಮಾಡಿ ಹಾಗೂ ಮುಷ್ಕರ ಮಾಡುವುದಿಲ್ಲ ಎಂದು ಹೇಳಿದ ನೌಕರರಿಗೆ ಬೆದರಿಕೆ ಹಾಕುತ್ತಿದ್ದು ಓಂಕಾರ್ ಸೇರಿದಂತೆ ಹಲವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಂಸ್ಥೆಯ ನೌಕರ ಸೈಯದ್ ಸಾಧಿಕ್ ಎಂಬುವರು ತುಮಕೂರು ವಿಭಾಗದ ವಿಭಾಗಿಯ ನಿಯಂತ್ರಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.
ಶಿರಾ ಘಟಕ ಚಾಲಕ ಕಂ ನಿರ್ವಾಹಕ ಸೈಯದ್ ಸಾಧಿಕ್ ಅವರು ಈ ಸಂಬಂಧ ಘಟಕ ವ್ಯವಸ್ಥಾಪಕರ ಮೂಲಕ ಡಿಸಿ ಅವರಿಗೆ ಆ.1ರಂದು ದೂರು ನೀಡಿದ್ದಾರೆ. ಸಾಧಿಕ್ ಜುಲೈ 30ರಂದು ಕರ್ತವ್ಯ ಮುಗಿಸಿ ಫೋನ್ಲ್ಲಿ ವಾಟ್ಸಾಪ್ ನೋಡುವ ಸಂದರ್ಭದಲ್ಲಿ ಗೂಗಲ್ ಮೀಟ್ ಲಿಂಕ್ ಬಂದಿರುವುದು ನೋಡಿದ್ದಾರೆ.
ಹೀಗಾಗಿ ಆದರಲ್ಲಿ ವೇತನಕ್ಕೆ ಹಾಗೂ ಮುಷ್ಕರಕ್ಕೆ ಸಂಬಂಧಿಸಿದ ವಿಚಾರವನ್ನು ನೋಡಿ ಸಹಜವಾಗಿ ಕುತೂಹಲದಿಂದ ಗೂಗಲ್ ಮೀಟ್ಗೆ ಜಾಯಿನ್ ಆದೇ ಈ ಗೂಗಲ್ ಮೀಟ್ ಸಭೆಯನ್ನು ಓಂಕಾರ್ ಆಯೋಜಿಸಿದ್ದು ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿಯ ಕೆಲವು ನೌಕರರು ಚರ್ಚೆ ಮಾಡುತ್ತಿದ್ದರು. ಅವರವರು ಅವರ ಅಭಿಪ್ರಾಯ ಮತ್ತು ಸಲಹೆ ನೀಡಿದ್ದು, ಈ ವೇಳೆ ಮಂಡ್ಯ ವಿಭಾಗದ ಪ್ರಸಾದ್ ಹಾಗೂ ಶ್ರೀಧರ್ ಎಂಬುವರು ಮುಷ್ಕರಕ್ಕೆ ಬೆಂಬಲ ನೀಡುವ ಹಾಗೂ ಸಂಪೂರ್ಣ ಬಸ್ ಕಾರ್ಯಾಚರಣೆ ಬಂದ್ ಮಾಡುವ ವಿಚಾರ ಮಾತನಾಡಿದರು.
ನಂತರ ತುಮಕೂರು ವಿಭಾಗದಿಂದ ಮಾತನಾಡಿದ ಪುಟ್ಟಯ್ಯ ಕೆ.ವಿ ಚಾಲಕ ಕಂ ನಿರ್ವಾಹಕ ಘಟಕ-01 ಅವರು, ತುಮಕೂರು ವಿಭಾಗದಲ್ಲಿ ಶಿರಾ ಘಟಕ ಹೊರತು ಪಡಿಸಿ ಬಾಕಿ ಎಲ್ಲ ಘಟಕಗಳ ಕಾರ್ಮಿಕರೊಂದಿಗೆ ಈಗಾಗಲೆ ಚರ್ಚೆ ಮಾಡಿದ್ದು ನಾವು ಎಲ್ಲರೂ ಮುಷ್ಕರ ಮಾಡುತ್ತೇವೆ ಎಂದು ಹೇಳಿದರು.
ಹೀಗೆ ಚರ್ಚೆ ಮಾಡುವ ಸಂದರ್ಭದಲ್ಲಿ ಶ್ರೀಧರ್ ಮದ್ದೂರ್ ಘಟಕ ಹಾಗೂ ಪ್ರಸನ್ನ ಕುಮಾರ್ ಜೂನಿಯರ್ ಆಸಿಸ್ಟಂಟ್ ಚಿಕ್ಕಮಗಳೂರು ಇವರು ಮುಷ್ಕರ ಮಾಡಲು ಒಪ್ಪದ ನನ್ನ ಮೇಲೆ ಜಗಳಕ್ಕೆ ಬಿದ್ದು ಅವಾಚ್ಯವಾಗಿ ಬೈದು ಮುಷ್ಕರಕ್ಕೆ ಬೆಂಬಲ ನೀಡದಿದ್ದರೆ ನಿನಗೆ ಒಂದು ಗತಿ ಕಾಣಿಸುತ್ತೇವೆ ಹೇಗೆ ನೀನು ಕರ್ತವ್ಯ ನಿರ್ವಯಿಸುತ್ತೀಯೇ ನಾವು ನೋಡುತ್ತೇವೆ ಎಂದು ಬೆದರಿಕೆ ಸಹ ಹಾಕಿದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಇನ್ನು ಈ ಗೂಗಲ್ ಮೀಟ್ ಸಭೆಯನ್ನು ಸಾರಿಗೆ ಮುಷ್ಕರ ಮಾಡಲು ಪ್ರಚೋದನೆ ನೀಡಲು ಹಾಗೂ ಮುಷ್ಕರ ಮಾಡಲು ನಿರಾಕರಣೆ ಮಾಡುವ ನೌಕರರಿಗೆ ಬೆದರಿಕೆ ಹಾಕಿ ಮುಷ್ಕರ ಮಾಡಿಸಲು ಆಯೋಜಿಸಿರುವ ಸಭೆ ಆಗಿತ್ತು. ಆದ್ದರಿಂದ ಈ ಗೂಗಲ್ ಮೀಟ್ ಸಭೆ ಆಯೋಜಿಸಿದ ಓಂಕಾರ್, ಪುಟ್ಟಯ್ಯ ಕೆ.ವಿ ಹಾಗೂ ಮುಷ್ಕರ ಮಾಡುವುದಿಲ್ಲ ಎಂದ ನನಗೆ ಹಾಗೂ ಇತರೆ ನೌಕರರಿಗೆ ಕೆಟ್ಟ ಪದಗಳಿಂದ ಬೈದು ಬೆದರಿಕೆ ಹಾಕಿರುವ ಶ್ರೀಧರ್, ಪ್ರಸನ್ನ ಕುಮಾರ್ ಇವರೆಲ್ಲರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ತಮ್ಮಲ್ಲಿ ವಿನಂತಿಸುತ್ತೇನೆ, ವಂದನೆಗಳೊಂದಿಗೆ ಎಂದು ಸೈಯಾದ್ ಸಾಧಿಕ್ ದೂರು ನೀಡಿದ್ದಾರೆ.
ನಿನ್ನೆ ದೂರು ಸ್ವೀಕರಿಸಿರುವ ಡಿಎಂ ಹಾಗೂ ವಿಭಾಗೀಯ ನಿಯಂತ್ರಣಾಧಿಕಾರಿಗಳು ಈ ಬಗ್ಗೆ ಏನು ಕ್ರಮ ತೆಗೆದುಕೊಳ್ಳುತ್ತಾರೆ ಎಂಬುದರ ಬಗ್ಗೆ ಇನ್ನಷ್ಟೆ ಗೊತ್ತಾಗಬೇಕಿದೆ.
Related

You Might Also Like
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...
BMTC: ಬ್ರೇಕ್ ಫೇಲಾಗಿ ಕಂದಕಕ್ಕೆ ನುಗ್ಗಿದ ಬಸ್- ಅದೃಷ್ಟವಶಾತ್ ಪ್ರಯಾಣಿಕರು ಸೇಫ್
ಆನೇಕಲ್: ಬ್ರೇಕ್ ಫೇಲಾಗಿ ರಸ್ತೆ ಬದಿಯ ಕಂದಕಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನುಗ್ಗಿರುವ ಘಟನೆ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಹರಪ್ಪನಹಳ್ಳಿ ಬಳಿ...
ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಸಿಗುತ್ತಿದೆ ಮುಕ್ತಿ
ಬೆಂಗಳೂರು: ರಾಜ್ಯ ರಾಜಧಾನಿಯ ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಮುಕ್ತಿ ಸಿಗುತ್ತಿದೆ. ಹೌದು! ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಉದ್ಘಾಟನೆ ಆಗುತ್ತಿದೆ. ಇಂದು...
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...