NEWSನಮ್ಮಜಿಲ್ಲೆನಮ್ಮರಾಜ್ಯ

ಹಾಸನದಲ್ಲಿ ತುಸು ಹೆಚ್ಚಾಗಿಯೇ ಮುಷ್ಕರ ಬಿಸಿ: ಖಾಸಗಿ ಬಸ್‌ಗಳೂ ಇಲ್ಲದೇ ಜನರ ಪರದಾಟ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಇಂದಿನಿಂದ ಕರೆ ನೀಡಿರುವ ಮುಷ್ಕರದ ಬಿಸಿ ಹಾಸನದಲ್ಲೂ ತುಸು ಹೆಚ್ಚಾಗಿಯೇ ತಟ್ಟುತ್ತಿದ್ದು, ಬೆಂಗಳೂರು ಸೇರಿದಂತೆ ವಿವಿಧೆಡೆಯಿಂದ ನಗರಕ್ಕೆ ಬಂದಿರುವ ಪ್ರಯಾಣಿಕರು ಪರದಾಡುತ್ತಿದ್ದಾರೆ.

ಇನ್ನು ಇಂದು ಬೆಳಗ್ಗೆ 4 ಗಂಟೆಯಿಂದಲೇ ನಗರದಲ್ಲಿ ಬಸ್‌ ಸಂಚಾರ ಬಹುತೇಕ ಸಂಪೂರ್ಣವಾಗಿ ಸ್ತಬ್ಧವಾಗಿವೆ. ಹೀಗಾಗಿ ಬಸ್‌ಗಳನ್ನು ಯಥಾಸ್ಥಿತಿಯಲ್ಲಿ ಓಡಾಡುತ್ತಾವಾ ಇಲ್ಲವೇ ಎಂಬ ಗೊಂದಲದಲ್ಲಿ ಪ್ರಯಾಣಿಕರು ಇತ್ತಿಂದತ್ತ ಓಡಾಡುತ್ತಿದ್ದಾರೆ.

ಜತೆಗೆ ನಿಲ್ದಾಣದಲ್ಲಿ ಸಾರಿಗೆ ಅಧಿಕಾರಿಗಳು ಕೂಡ ಇಲ್ಲ. ಹೀಗಾಗಿ ಸಾಋವಜನಿಕರು ಯಾರನ್ನು ಕೇಳಬೇಕು ಎಂಬ ಗೊಂದಲದಲ್ಲೇ ಕುಳಿತಿದ್ದಾರೆ.

ಒಟ್ಟಾರೆ ಸಾರ್ವಜನಿಕರಿಗೆ ಹಾಸನದಲ್ಲಿ ಬಸ್‌ ಬಂದ್‌ಬಿಸಿ ಏರುತ್ತಿದೆ. ಅದೇ ರೀತಿ ಇತರ ಭಾಗಗಳಲ್ಲಿ ಬಂದ್‌ ಆಗುತ್ತಿದೆ. ಈ ನಡುವೆ ಖಾಸಗಿ ಬಸ್‌ಗಳು ಕೂಡ ಕಾಣುತ್ತಿಲ್ಲ ಎಂದು ಪ್ರಯಾಣಿಕರು ಹೇಳುತ್ತಿದ್ದಾರೆ. ಇತ್ತ ಅಧಿಕಾರಿಗಳು ಕೂಡ ನೌಕರರನ್ನು ಫೋನ್‌ ಮೂಲಕ ಸಂಪರ್ಕಿಸಲು ಯತ್ನಿಸುತ್ತಿದ್ದರು ಸಿಗುತ್ತಿಲ್ಲ ಎಂದು ಹೇಳಲಾಗುತ್ತಿದೆ.

Megha
the authorMegha

Leave a Reply

error: Content is protected !!
Latest news
8ನೇ ವೇತನ ಆಯೋಗ: ಸಲಹೆ ಸಂಗ್ರಹಕ್ಕೆ ಸರ್ಕಾರ ಕೊಟ್ಟಿದ್ದ ಗಡುವು ಇಂದಿಗೆ ಮುಕ್ತಾಯ- ವರದಿ ಸಲ್ಲಿಕೆಯೊಂದೇ ಬಾಕಿ ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ... ಕುಡಿಯುವ ನೀರು ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಖಂಡ್ರೆ ಎಚ್ಚರಿಕೆ