NEWSನಮ್ಮಜಿಲ್ಲೆನಮ್ಮರಾಜ್ಯ

ಹಾಸನದಲ್ಲಿ ತುಸು ಹೆಚ್ಚಾಗಿಯೇ ಮುಷ್ಕರ ಬಿಸಿ: ಖಾಸಗಿ ಬಸ್‌ಗಳೂ ಇಲ್ಲದೇ ಜನರ ಪರದಾಟ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಇಂದಿನಿಂದ ಕರೆ ನೀಡಿರುವ ಮುಷ್ಕರದ ಬಿಸಿ ಹಾಸನದಲ್ಲೂ ತುಸು ಹೆಚ್ಚಾಗಿಯೇ ತಟ್ಟುತ್ತಿದ್ದು, ಬೆಂಗಳೂರು ಸೇರಿದಂತೆ ವಿವಿಧೆಡೆಯಿಂದ ನಗರಕ್ಕೆ ಬಂದಿರುವ ಪ್ರಯಾಣಿಕರು ಪರದಾಡುತ್ತಿದ್ದಾರೆ.

ಇನ್ನು ಇಂದು ಬೆಳಗ್ಗೆ 4 ಗಂಟೆಯಿಂದಲೇ ನಗರದಲ್ಲಿ ಬಸ್‌ ಸಂಚಾರ ಬಹುತೇಕ ಸಂಪೂರ್ಣವಾಗಿ ಸ್ತಬ್ಧವಾಗಿವೆ. ಹೀಗಾಗಿ ಬಸ್‌ಗಳನ್ನು ಯಥಾಸ್ಥಿತಿಯಲ್ಲಿ ಓಡಾಡುತ್ತಾವಾ ಇಲ್ಲವೇ ಎಂಬ ಗೊಂದಲದಲ್ಲಿ ಪ್ರಯಾಣಿಕರು ಇತ್ತಿಂದತ್ತ ಓಡಾಡುತ್ತಿದ್ದಾರೆ.

ಜತೆಗೆ ನಿಲ್ದಾಣದಲ್ಲಿ ಸಾರಿಗೆ ಅಧಿಕಾರಿಗಳು ಕೂಡ ಇಲ್ಲ. ಹೀಗಾಗಿ ಸಾಋವಜನಿಕರು ಯಾರನ್ನು ಕೇಳಬೇಕು ಎಂಬ ಗೊಂದಲದಲ್ಲೇ ಕುಳಿತಿದ್ದಾರೆ.

ಒಟ್ಟಾರೆ ಸಾರ್ವಜನಿಕರಿಗೆ ಹಾಸನದಲ್ಲಿ ಬಸ್‌ ಬಂದ್‌ಬಿಸಿ ಏರುತ್ತಿದೆ. ಅದೇ ರೀತಿ ಇತರ ಭಾಗಗಳಲ್ಲಿ ಬಂದ್‌ ಆಗುತ್ತಿದೆ. ಈ ನಡುವೆ ಖಾಸಗಿ ಬಸ್‌ಗಳು ಕೂಡ ಕಾಣುತ್ತಿಲ್ಲ ಎಂದು ಪ್ರಯಾಣಿಕರು ಹೇಳುತ್ತಿದ್ದಾರೆ. ಇತ್ತ ಅಧಿಕಾರಿಗಳು ಕೂಡ ನೌಕರರನ್ನು ಫೋನ್‌ ಮೂಲಕ ಸಂಪರ್ಕಿಸಲು ಯತ್ನಿಸುತ್ತಿದ್ದರು ಸಿಗುತ್ತಿಲ್ಲ ಎಂದು ಹೇಳಲಾಗುತ್ತಿದೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ