NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರು ಇಟ್ಟಿರುವ ಬೇಡಿಕೆ ತಪ್ಪಲ್ಲ- ಸಿಎಂ, ಸಾರಿಗೆ ಸಚಿವರು ಸ್ಪಂದಿಸಬೇಕು: ಡಿಸಿಎಂ ಡಿಕೆಶಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರು ಇಟ್ಟಿರುವ ಬೇಡಿಕೆ ತಪ್ಪಲ್ಲ. ಸಿಎಂ ಹಾಗೂ ಸಾರಿಗೆ ಸಚಿವರು ಅವರ ಬೇಡಿಕೆಗೆ ಸ್ಪಂದಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಇಂದು ನಗರದಲ್ಲಿ ಮಾತನಾಡಿದ ಅವರು, ಸಾರಿಗೆ ನೌಕರರು ಕೂಡ ಸಾರ್ವಜನಿಕರ ಸೇವೆ ಮಾಡುವುದಕ್ಕೆ ಬಂದಿರುವುದು ಹೀಗಾಗಿ ಸರ್ಕಾರದೊಂದಿಗೆ ಅವರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಇನ್ನು ಜನರಿಗೆ ತೊಂದರೆ ಕೊಡುವ ಕೆಲಸ ಆಗಬಾರದು ಈ ನಿಟ್ಟಿನಲ್ಲಿ ಸಾರಿಗೆ ಸಚಿವರ ಹಾಗೂ ಮುಖ್ಯಮಂತ್ರಿಗಳು ನೌಕರರ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬೇಕು ಅದಕ್ಕೂ ಮೊದಲು ನೌಕರರು ಕೂಡ ಸರ್ಕಾರವನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ಇನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ ಮಾತನಾಡಿ, ಬಸ್‌ ಸಂಪೂರ್ಣವಾಗಿ ನಿಂತಿಲ್ಲ ನಿಂತಿದ್ದರೆ ಜನತೆಗೆ ಸಮಸ್ಯೆ ಆಗುತ್ತಿತ್ತು ಎಂದು ಹೇಳಿದ್ದಾರೆ.

ಇನ್ನು ನೌಕರರ ಬೇಡಿಕೆ ಬಗ್ಗೆ ನಮಗೆ ಮಾಹಿತಿ ಶೇರ್‌ ಆಗಿಲ್ಲ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

ನೌಕರರ ಬೇಡಿಕೆ ಏನು ಎಂದು ಸಾರಿಗೆ ಸಚಿವರು ಹಾಗೂ ಮುಖ್ಯಮಂತ್ರಿಗಳು ಕರೆದು ಪರಿಹಾರ ಮಾಡುತ್ತಾರೆ ಆ ಬಗ್ಗೆ ನಮಗೆ ಏನು ಗೊತ್ತಿಲ್ಲ ಎಂದಷ್ಟೇ ಗೃಹ ಸಚಿವರು ಹೇಳಿದರು.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ