KSRTC ಅನಿರ್ದಿಷ್ಟಾವಧಿ ಮುಷ್ಕರ: ಕರ್ತವ್ಯಕ್ಕೆ ಗೈರಾದ ಸಾರಿಗೆ ನೌಕರರಿಗೆ ಎದುರಾಯಿತು ಕೆಲಸ ಕಳೆದುಕೊಳ್ಳುವ ಭೀತಿ!

ಬೆಂಗಳೂರು: ವೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದ್ದ ಸಾರಿಗೆ ನೌಕರರಿಗೆ ಇದೀಗ ಅಮಾನತು ಇಲ್ಲವೇ ಕರ್ತವ್ಯದಿಂದಲೇ ವಜಾಗೊಳ್ಳುವ ಭೀತಿ ಎದುರಾಗಿದೆ.
ಏಕೆಂದರೆ ಸಾರ್ವಜನಿಕರಿಗೆ ತೊಂದರೆ ಕೊಟ್ಟು ಕರ್ತವ್ಯಕ್ಕೆ ಗೈರು ಹಾಜರಾಗಿ ಪ್ರತಿಭಟನೆ ನಡೆಸುವಂತಿಲ್ಲ. ಹಾಗೊಂದು ವೇಳೆ ನಿಯಮಕ್ಕೆ ವಿರುದ್ಧವಾಗಿ ನಡೆದುಕೊಂಡರೆ, ಅಂತಹ ಸರ್ಕಾರಿ, ಅರೆ ಸರ್ಕಾರಿ ಹಾಗೂ ಖಾಸಗಿ ನೌಕರರ ವಿರುದ್ದ ಅಗತ್ಯ ಸೇವಾ ನಿರ್ವಾಹಣೆ ಕಾಯ್ದೆ(ಎಸಾ)ಯಡಿ ಕಾನೂನು ಕ್ರಮ ಜರುಗಿಸಲು ಅವಕಾಶವಿದೆ ಎಂದು ಈಗಾಗಲೇ ನಿನ್ನೆ ಕರ್ತವ್ಯಕ್ಕೆ ಬಾರದ ಸಾರಿಗೆ ನೌಕರರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ.
ಈ ಹಿಂದೆ ಇದೇ ರೀತಿ ವೈದ್ಯರು ರಾಜ್ಯದಾದ್ಯಂತ ಕರ್ತವ್ಯಕ್ಕೆ ಗೈರು ಹಾಜರಾಗಿ ಪ್ರತಿಭಟನೆ ನಡೆಸಲು ಮುಂದಾದಾಗ ಅವರ ವಿರುದ್ಧ ಎಸ್ಮಾ ಕಾಯ್ದೆ ಅಸ್ತ್ರ ಬಳಸಲು ಸರ್ಕಾರ ಮುಂದಾಗಿತ್ತು. ಕೊನೆಗೆ ನ್ಯಾಯಾಲಯ ಮಧ್ಯ ಪ್ರವೇಶಿಸಿ ವೈದ್ಯರಿಗೆ ಛೀಮಾರಿ ಹಾಕಿದ್ದರಿಂದ ಪ್ರತಿಭನಟನೆಯಿಂದ ಹಿಂದೆ ಸರಿದಿದ್ದರು.
ಅದೇ ರೀತಿ ಈಗ ಹೈ ಕೋರ್ಟ್ನಲ್ಲಿ PIL ಅರ್ಜಿ ವಿಚಾರಣೆ ಇರುವಾಗ ನಿಮ್ಮ ಮುಷ್ಕರವನ್ನು ಒಂದು ದಿನದ ಮಟ್ಟಿಗೆ ಮುಂದೂಡಿ ಎಂದು ಕೋರ್ಟ್ ಹೇಳಿತ್ತು. ಆದರೆ ಕೋರ್ಟ್ ನಿರ್ದೇಶನವನ್ನು ಉಲ್ಲಂಘಿಸಿ ಮುಷ್ಕರ ಮಾಡಿದ್ದರಿಂದ ನಿನ್ನೆ ಕೋರ್ಟ್ ಛೀಮಾರಿ ಹಾಕಿದ್ದರಿಂದ ಇಂದು ಸಾರಿಗೆ ನೌಕರರು ಪ್ರತಿಭನಟನೆಯಿಂದ ಹಿಂದೆ ಸರಿದಿದ್ದಾರೆ.
ಆದರೆ, ಇದೀಗ ಸಾರಿಗೆ ನೌಕರರು ಕರ್ತವ್ಯಕ್ಕೆ ಗೈರಾಗಿರುವ ಕಾರಣ ನೂರಾರು ನೌಕರರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿರುವುದರಿಂದ ಈಗ ಅಮಾನತು ಅಥವಾ ವಜಾ ಭೀತಿ ಎದುರಿಸುತ್ತಿದ್ದಾರೆ.
ಕೋರ್ಟ್ ನಿರ್ದೇಶನದ ಪಾಲಿಸದೆ ಸಾರಿಗೆ ನೌಕರರು ಮುಷ್ಕರ ಮಾಡಿದ್ದರು. 2021ರಲ್ಲಿ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಮುಷ್ಕರ ಮಾಡಿದಾಗಲೂ ಕೂಡ ಸಾವಿರಾರು ನೌಕರರನ್ನು ವಜಾ ಮಾಡಲಾಗಿತ್ತು. ಈ ಬಾರಿಯೂ ನೌಕರರ ಮೇಲೆ ಕೇಸ್ ಬೀಳುವ ಭೀತಿ ಇದೆ.
ಇನ್ನು 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಮತ್ತು 2024ರ ಜನವರಿ 1ರಿಂದ ಆಗಬೇಕಿರುವ ವೇತನ ಪರಿಷ್ಕರಣೆ ಸಂಬಂಧ ನೌಕರರು ಮುಷ್ಕರಕ್ಕೆ ಮುಂದಾಗಿದ್ದು, ಸದ್ಯ ಇನ್ನು ಎರಡು ದಿನ ಮುಷ್ಕರ ಮಾಡದಂತೆ ಹೈ ಕೋರ್ಟ್ ನಿರ್ದೇಶನ ನೀಡಿದೆ.
ಇನ್ನು ನಿನ್ನೆ ಡಿಪೋಗಳಲ್ಲಿ ಬಸ್ ನಿಲ್ಲಿಸಿ ಕರ್ತವ್ಯಕ್ಕೆ ಗೈರಾಗಿರುವ ಸಾರಿಗೆ ನೌಕರರು ಬಿಎಂಟಿಸಿ, ಕೆಎಸ್ಆರ್ಟಿಸಿ, ವಾಯುವ್ಯ ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ನೌಕರರಿಗೆ ಅಮಾನತುಗೊಳ್ಳುವ ಭೀತಿ ಎದುರಾಗಿದೆ. ನೌಕರ ಸಂಘಟನೆಗಳೊಂದಿಗೆ ಗುರುತಿಸಿಕೊಂಡಿರುವ ನೌಕರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಈಗಾಲೇ ನೋಟಿಸ್ ಜಾರಿ ಮಾಡಲಾಗಿದೆ. ಹೀಗಾಗಿ ಇದು ಯಾವ ಹಂತ ತಲುಪುತ್ತದೋ ಎಂಬುವುದು ನಾಳೆಯೊಳಗೆ ಗೊತ್ತಾಗಲಿದೆ.
Related

You Might Also Like
KSRTC ನೌಕರರ ಸಾಮಾನ್ಯ ಮರಣ ಪ್ರಕರಣಕ್ಕಿದ್ದ 10 ಲಕ್ಷ ರೂ. ಪರಿಹಾರ ಮೊತ್ತ 14 ಲಕ್ಷ ರೂ.ಗಳಿಗೆ ಏರಿಸಿ ಎಂಡಿ ಆದೇಶ
ಪರಿಷ್ಕರಿಸಿದ 14 ಲಕ್ಷ ರೂ. ಪರಿಹಾರ ಮೊತ್ತ ಸೆಪ್ಟೆಂಬರ್ 1-2025ರಿಂದ ಜಾರಿ ಬೆಂಗಳೂರು: 10 ಲಕ್ಷ ರೂ.ಗಳಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಕುಟುಂಬ...
KSRTC- ಪ್ರತಿಷ್ಠಿತ ವಿಶ್ವ ದಾಖಲೆ ಸೇರಿದ ಶಕ್ತಿ ಯೋಜನೆ: ಅತೀವ ಸಂತಸ, ಹೆಮ್ಮೆಯ ಕ್ಷಣ- ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ 2023ರ ಜೂನ್ 11ರಿಂದ ಜಾರಿಗೆ ಬಂದ ಶಕ್ತಿ ಯೋಜನೆ ಪ್ರತಿಷ್ಠಿತ ವಿಶ್ವ ದಾಖಲೆಗೆ ಸೇರ್ಪಡೆ (Golden Book...
KKRTC ವಿಜಯಪುರ: ಸಂಸ್ಥೆ ನಿಯಮವನ್ನೇ ಗಾಳಿಗೆ ತೂರಿ ಮತ್ತೆ ಮತ್ತೆ ನೌಕರರಿಂದ ಸ್ವಂತ ಕಾರನ್ನು ಸರ್ವಿಸ್ ಮಾಡಿಸಿಕೊಳ್ಳುತ್ತಿರುವ ಡಿಎಂ
ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅದರಲ್ಲೂ ವಿಜಯಪುರ ವಿಭಾಗದಲ್ಲಿ ಇವರ ಬಹುತೇಕ ಎಲ್ಲ ಘಟಕ ವ್ಯವಸ್ಥಾಪಕರು ಸೇರಿದಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳೂ ಅಂಕುಶವಿಲ್ಲದ ಆನೆಯಂತಾಗಿದ್ದಾರೆ. ಅಂದರೆ...
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...
BMTC: ಬ್ರೇಕ್ ಫೇಲಾಗಿ ಕಂದಕಕ್ಕೆ ನುಗ್ಗಿದ ಬಸ್- ಅದೃಷ್ಟವಶಾತ್ ಪ್ರಯಾಣಿಕರು ಸೇಫ್
ಆನೇಕಲ್: ಬ್ರೇಕ್ ಫೇಲಾಗಿ ರಸ್ತೆ ಬದಿಯ ಕಂದಕಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನುಗ್ಗಿರುವ ಘಟನೆ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಹರಪ್ಪನಹಳ್ಳಿ ಬಳಿ...
ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಸಿಗುತ್ತಿದೆ ಮುಕ್ತಿ
ಬೆಂಗಳೂರು: ರಾಜ್ಯ ರಾಜಧಾನಿಯ ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಮುಕ್ತಿ ಸಿಗುತ್ತಿದೆ. ಹೌದು! ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಉದ್ಘಾಟನೆ ಆಗುತ್ತಿದೆ. ಇಂದು...
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...












