NEWSನಮ್ಮರಾಜ್ಯ

ಮೇ 24ರ ಸಂಜೆ ವೇಳೆಗೆ ಕರ್ನಾಟಕದಲ್ಲಿ 130 ಹೊಸ ಕೊರೊನಾ ಸೋಂಕಿತರು ಪತ್ತೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ಇಂದು 130 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. ಆ ಮೂಲಕ   ರಾಜ್ಯದಲ್ಲಿ  ಸೋಂಕಿತರ ಸಂಖ್ಯೆ 2089ಕ್ಕೆ  ಏರಿಕೆಯಾಗಿದೆ.

ಇಂದು ಸಂಜೆವೇಳೆಗೆ ಯಾದಗಿರಿ 24, ಉಡುಪಿ 23, ಮಂಡ್ಯ 15 ಹಾಗೂ ಹಾಸನದಲ್ಲಿ 14 ಹೊಸ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಇಂದು ಪತ್ತೆಯಾದ ಹೊಸ ಪ್ರಕರಣಗಳ ಪೈಕಿ 105 ಜನ ಹೊರರಾಜ್ಯದಿಂದ ಬಂದಿದ್ದರೆ, ಇಬ್ಬರು ವಿದೇಶದಿಂದ ಬಂದವರಾಗಿದ್ದಾರೆ. ಇದುವರೆಗೂ 2089 ಸೋಂಕಿತರಲ್ಲಿ 42 ಜನ ಮೃತಪಟ್ಟಿದ್ದರೆ, ಇಬ್ಬರು ಕೊರೊನಾ ಅಲ್ಲದ ಕಾರಣದಿಂದ ಸಾವನ್ನಪ್ಪಿದ್ದಾರೆ. ಇನ್ನು, 654 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 1391 ಜನ  ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಇನ್ನು ಒಟ್ಟಾರೆ ಇಂದು ಚಿಕ್ಕಬಳ್ಳಾಪುರ 27,  ಯಾದಗಿರಿ  24,  ಉಡುಪಿ 23, ಮಂಡ್ಯ 15, ಹಾಸನ 14, ಕಲಬುರಗಿ ಮತ್ತು ಬೀದರ್‌ನಲ್ಲಿ ತಲಾ  6, ದಾವಣಗೆರೆ  4,  ಉತ್ತರ ಕನ್ನಡ,  ತುಮಕೂರು ,  ಶಿವಮೊಗ್ಗದಲ್ಲಿ ತಲಾ 2, ಬೆಂಗಳೂರು, ವಿಜಯಪುರ,  ದಕ್ಷಿಣ ಕನ್ನಡ,  ಕೊಡಗು ಮತ್ತು  ಧಾರವಾಡದಲ್ಲಿ ತಲಾ ಒಂದೊಂದು ಪ್ರಕರಣ ಕಂಡುಬಂದಿದೆ.

ರಾಜ್ಯದ 2089 ಸೋಂಕಿತರಲ್ಲಿ ಜಿಲ್ಲೆಗಳ ವ್ಯಾಪ್ತಿಗೆ ಬಂದರೆ.  ಬೆಂಗಳೂರು ನಗರ 266, ಮಂಡ್ಯ 252, ಕಲಬುರಗಿ 141, ಬೆಳಗಾವಿ 127, ಚಿಕ್ಕಬಳ್ಳಾಪುರ 126, ದಾವಣಗೆರೆ 125, ಯಾದಗಿರಿ 111, ಹಾಸನ 98, ಮೈಸೂರು 90, ಬೀದರ್‌ 85, ಬಾಗಲಕೋಟೆ 77, ಉಡುಪಿ 76, ವಿಜಯಪುರ 69, ಉತ್ತರ ಕನ್ನಡ 68, ರಾಯಚೂರು 66, ದಕ್ಷಿಣ ಕನ್ನಡ 58, ಧಾರವಾಡ 39, ಗದಗ 35, ಶಿವಮೊಗ್ಗ 34, ಬಳ್ಳಾರಿ 33, ತುಮಕೂರು 26, ಕೋಲಾರ 14, ಚಿತ್ರದುರ್ಗ 11, ಬೆಂಗಳೂರು ಗ್ರಾಮಾಂತರ 11, ಚಿಕ್ಕಮಗಳೂರು 10, ಹಾವೇರಿ 6, ಕೊಪ್ಪಳ 3, ಕೊಡಗು 3 ಹಾಗೂ ಇತರೆ (29) ಸೋಂಕಿತರು ಕಂಡು ಬಂದಿದ್ದಾರೆ. ರಾಮನಗರ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಇದುವರೆಗೂ ಯಾವುದೇ ಸೋಂಕು ಪ್ರಕರಣ ಪತ್ತೆಯಾಗಿಲ್ಲ.

ದೇಶದಲ್ಲಿ 133,725 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 133,725 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 3,909 ಮಂದಿ ಮೃತಪಟ್ಟಿದ್ದಾರೆ. 54,865 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 5,435,994 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 344,514 ಜನರು ಮೃತಪಟ್ಟಿದ್ದಾರೆ 2,273,223 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್