KSRTC: ಆ.5ರ ಮುಷ್ಕರದ ವೇಳೆ ಬಸ್ಗೆ ಕಲ್ಲು ಹೊಡೆದ ಇಬ್ಬರು ನೌಕರರು ಅರೆಸ್ಟ್- ಜಾಮೀನು ಸಿಗದೆ ಕಂಬಿ ಎಣಿಸುತ್ತಿರುವ…

ಹುಬ್ಬಳ್ಳಿ: ನಾಲ್ಕೂ ಸಾರಿಗೆ ನಿಗಮಗಳ ನೌಕರರಿಗೆ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ ಆ.5ರಂದು ಹಮ್ಮುಕೊಂಡಿದ್ದ ಅನಿರ್ದಿಷ್ಟಾವಧಿ ಮುಷ್ಕರದ ವೇಳೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ಗೆ ಬೈಕ್ನಲ್ಲಿ ಬಂದು ಕಲ್ಲು ತೂರಿ ಪರಾರಿಯಾಗಿದ್ದ ಮುಸುಕುದಾರಿಗಳಿಬ್ಬರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದೇ ಆ.5ರಂದು ಹೊಸಪೇಟೆ ವಿಭಾಗದ ಬಸ್ ಹುಬ್ಬಳ್ಳಿಯಿಂದ ಹೊಸಪೇಟೆ ಬರುತ್ತಿದ್ದ ಬಸ್ಗೆ ಕಲ್ಲು ತೂರಿ ಬಸ್ನ ಮುಂದಿನ ಭಾಗದ ಗ್ಲಾಸ್ ಜಖಂ ಮಾಡಿ ಪರಾರಿಯಾಗಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹುಬ್ಬಳ್ಳಿ ನಗರ ಘಟಕ-1ರ ಇಬ್ಬರು ನೌಕರರನ್ನು ಇದೇ ಆ.7ರಂದು ಬಂಧಿಸಿರುವ ಪೊಲೀಸರು ಎಫ್ಐಆರ್ ದಾಖಲಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.
ನ್ಯಾಯಾಧೀಶರು ಸಂಸ್ಥೆಯ ಈ ಇಬ್ಬರು ಹುಬ್ಬಳ್ಳಿ ನಗರ ಘಟಕ-1ದ ನೌಕರರನ್ನು ನ್ಯಾಯಾಂಗ ಬಂಧನದಲ್ಲಿಟಟಿದ್ದಾರೆ. ಈ ನಡುವೆ ಈ ಆರೋಪಿಗಳು ಜಾಮೀನು ಅರ್ಜಿ ಹಾಕಿದ್ದು, ಈವರೆಗೂ ಇವರಿಗೆ ಜಾಮೀನು ಸಿಕ್ಕಿಲ್ಲ. ಹೀಗಾಗಿ ಕೋಪಕ್ಕೆ ಬುದ್ಧಿಕೊಟ್ಟು ಮಾಡಿದ ತಪ್ಪಿಗೆ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ.
ಈ ಇಬ್ಬರು ಸಾರಿಗೆ ನೌಕರರು ಮುಷ್ಕರದ ಸಮಯದಲ್ಲಿ ಮಾರ್ಗದಲ್ಲಿದ್ದ ಬಸ್ ಮೇಲೆ ಕಲ್ಲು ತೂರಿದ್ದರಿಂದ ಈಗ ಜೈಲು ಸೇರುವಂತಾಗಿದೆ. ಅಲ್ಲದೆ ಪ್ರತಿ ಮುಷ್ಕರ ಮಾಡುವ ವೇಳೆ ನೌಕರರನ್ನಷ್ಟೇ ಬನ್ನಿ ಎಂದು ಕರೆ ನೀಡುವ ಸಂಘಟನೆಗಳ ಮುಖಂಡರು ಈ ರೀತಿ ನಡೆಯುವ ಘಟನೆಗಳ ಜವಾಬ್ದಾರಿಯನ್ನು ಸ್ವಯಂ ಪ್ರೇರಿತವಾಗಿ ಏಕೆ ತೆಗೆದುಕೊಂಡು ನೌಕರರ ಪರ ಕಾನೂನು ಹೋರಾಟಕ್ಕೆ ಮುಂದಾಗುವುದಿಲ್ಲ?
ಇಲ್ಲಿ ಮುಷ್ಕರ ನಡೆಸಿದ್ದರಿಂದ ಕಲ್ಲು ತೂರಿ ಸರ್ಕಾರಿ ಬಸ್ಗೆ ಹಾನಿಯಾಗಿದೆ. ಹೀಗಾಗಿ ಈ ರೀತಿ ದುಡುಕಿನ ನಿರ್ಧಾರ ತೆಗೆದುಕೊಳ್ಳುವ ನೌಕರರ ಜೀವನ ಮತ್ತು ಕುಟುಂಬ ಎಷ್ಟು ತೊಂದರೆಗೆ ಸಿಲುಕುತ್ತದೆ ಎಂಬುವುದಕ್ಕೆ ಈ ಇಬ್ಬರು ನೌಕರರೇ ನಮಗೆ ಜ್ವಲಂತ ನಿದರ್ಶನವಾಗಿದ್ದಾರೆ.
ಹೀಗಾಗಿಯೇ ಪ್ರತಿ ಬಾರಿಯೂ ವಿಜಯಪಥ ನೌಕರರಿಗೆ ಎಚ್ಚರಿಕೆ ನೀಡುತ್ತಲೇ ಬರುತ್ತಿದೆ. ಯಾವುದೇ ಸಂಘಟನೆಗಳು ಕರೆ ನೀಡುವ ಪ್ರತಿಭಟನೆಯಲ್ಲಿ ನೀವು ಭಾಗಿಯಾಗಬೇಡಿ, ನಿಮ್ಮ ಜತೆಗೆ ಸಂಸ್ಥೆಯ ಎಲ್ಲ ಅಧಿಕಾರಿಗಳು, ಇಬ್ಬಂದಿಗಳು ಭಾಗಿಯಾದರೆ ಅಂತಹ ಹೋರಾಟದಲ್ಲಿ ನೀವು ಭಾಗವಹಿಸಿ ಈ ರೀತಿ ಕಾನೂನು ಬಾಹಿರ ಮುಷ್ಕರದಲ್ಲಿ ಭಾಗವಹಿಸುವುದು ಬಳಿಕ ಕೋಪಕ್ಕೆ ಬುದ್ಧಿಕೊಟ್ಟು ಈ ರೀತಿ ಕಾನೂನು ಬಾಹಿರ ಕೃತ್ಯ ಎಸಗಿ ಜೈಲು ಸೇರುವುದು ಇದು ನಿಮಗೆ ಬೇಕಾ ಅಂತ.
ಇನ್ನಾದರೂ ಸಂಘಟನೆಗಳ ಮುಖಂಡರು ಕೂಡ ಈ ರೀತಿ ಅಮಾಯಕರನ್ನು ಬಲಿಕೊಡುವಂಥ ಹೋರಾಟಗಳನ್ನು ಬಿಟ್ಟು ಅವರಿಗೆ ನ್ಯಾಯಯುತವಾಗಿ ಸಿಗಬೇಕಿರುವುದನ್ನು ಪಡೆಯುವುದಕ್ಕೆ ಸಮಸ್ತ ಸಾರಿಗೆಯ ಅಧಿಕಾರಿಗಳು/ನೌಕರರನ್ನು ಒಟ್ಟುಗೂಡಿಸಿಕೊಂಡು ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟು ಬಳಿಕ ಹೋರಾಟಕ್ಕೆ ಇಳಿಯಿರಿ. ಹೀಗೆ ಅಮಾಯಕ ನೌಕರರ ಬಲಿ ಕೊಡುವ ಕೆಲಸ ಮಾಡಬೇಡಿ ಎಂದು ಸಮಸ್ತ ನೌಕರರ ಪರವಾಗಿ ನೊಂದು ನೌಕರರು ಮನವಿ ಮಾಡಿದ್ದಾರೆ.
Related

You Might Also Like
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ನಿಧನ
ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಅವರು ಇಂದು ತಡರಾತ್ರಿ ನಿಧನಹೊಂದಿದ್ದಾರೆ. ಕೆಂಗೇರಿ ಸಮೀಪ ಶ್ರೀಮಠ ಸ್ಥಾಪನೆ ಮಾಡಿ ಶಿಕ್ಷಣ, ಆಧ್ಯಾತ್ಮಿಕ...
EPS ಪಿಂಚಣಿದಾರರಿಗೆ ಕನಿಷ್ಠ ಪಿಂಚಣಿ ಜಾರಿಗೆ ಸಂಸತ್ತಿನಲ್ಲಿ ಒತ್ತಾಯಿಸಲು ಆಗ್ರಹಿಸಿ ಸಂಸದರ ಮನೆ ಮುಂದೆ ಧರಣಿಗೆ ನಿರ್ಧಾರ
ಮೈಸೂರು: ಇಪಿಎಸ್ ನಿವೃತ್ತ ನೌಕರರಿಗೆ ಕನಿಷ್ಠ ಪಿಂಚಣಿ 7500 ರೂ.+ ಇತರೆ ಸೌಲಭ್ಯಗಳನ್ನು ಜಾರಿ ಮಾಡುವ ಸಂಬಂಧ ಲೋಕಸಭೆ ಅಧಿವೇಶನದಲ್ಲಿ ಗಮನ ಸೆಳೆಯುವಂತೆ ಮೈಸೂರು ಹಾಗೂ ಚಾಮರಾಜನಗರ...
ರೇಣುಕಾಸ್ವಾಮಿ ಕೊಲೆ ಪ್ರಕರಣ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್: ಮತ್ತೆ ಜೈಲಿಗೆ ನಟ ದರ್ಶನ್ ಅಂಡ್ ಟೀಂ
ನ್ಯೂಡೆಲ್ಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಜಾಮೀನು...