CRIMENEWSನಮ್ಮರಾಜ್ಯ

ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್‌ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್‌ ಕೊಡಿಸಿ ಎಂದು ದೂರು ನೀಡಲು ಪೊಲೀಸ್‌ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್‌ ಕೊಡಿಸುತ್ತೇವೆ ಎಂದ ಬೇಡಿಕೆ ಇಟ್ಟ ಆರಕ್ಷಕರು ಈಗ ಲೋಕಾಯುಕ್ತ ಪೊಲೀಸರ ಅತಿಥಿಯಾಗಿದ್ದಾರೆ.

ಹೌದು! ವಂಚನೆ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಲಂಚ ಪಡೆಯುತ್ತಿದ್ದ ವೇಳೆ ರಾಮಮೂರ್ತಿನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌, ಸಬ್‌ ಇನ್ಸ್‌ಪೆಕ್ಟರ್‌ ಹಾಗೂ ಖಾಸಗಿ ವ್ಯಕ್ತಿ ಇಮ್ರಾನ್ ಬಾಬು ಎಂಬಾತನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಕೃಷ್ಣರಾಜಪುರದ ನಿವಾಸಿ ಮಂಜುನಾಥ್ ಎಂಬುವರು, ತಮ್ಮ ಪತ್ನಿ ಕುಟುಂಬದ ಚಿನ್ನಾಭರಣ ಮತ್ತು ನಗದನ್ನು ಪರರಿಗೆ ಕೊಟ್ಟಿದ್ದು ಅದನ್ನು ವಾಪಸ್‌ ಆ ಅನ್ಯರಿಂದ ಕೊಡಿಸಿ ಎಂದು ಪೊಲೀಸರಿಗೆ ದೂರು ನೀಡಿದ್ದರು.

ಈ ಬಗ್ಗೆ ಪ್ರಕರಣ ದಾಖಲಿಸಿ, ಆಭರಣಗಳನ್ನು ವಾಪಸ್ ಪಡೆಯಲು ಸಹಾಯ ಮಾಡಬೇಕಾದರೆ 2 ಲಕ್ಷ ರೂ. ಲಂಚವನ್ನು ನಮಗೆ ಕೊಡಬೇಕು ಎಂದು ಪೊಲೀಸ್‌ ಇನಸ್‌ಪೆಕ್ಟರ್‌ (PI) ರಾಜಶೇಖರ್ ಬೇಡಿಕೆ ಇಟ್ಟಿದ್ದಾನೆ. ಈ ಸಂಬಂಧ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ದೂರುದಾರ ಮಂಜುನಾಥ್ ನೀಡಿದ ಮಾಹಿತಿಯ ಆಧಾರದ ಮೇರೆಗೆ ಲೋಕಾಯುಕ್ತ ಎಸ್‌ಪಿ ಕೋನ ವಂಶಿಕೃಷ್ಣ ಅವರ ಮಾರ್ಗದರ್ಶನದಲ್ಲಿ ಲಂಚಬಾಕರಿಗೆ ಬಲೆ ಬೀಸಲಾಯಿತು.

ದೂರುದಾರರು PSI ರುಮಾನ್ ಪಾಷಾ ಮತ್ತು ಇಮ್ರಾನ್ ಬಾಬು ಅವರಿಗೆ 1 ಲಕ್ಷ ರೂ.ಗಳನ್ನು ಹಸ್ತಾಂತರಿಸುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಇಬ್ಬರನ್ನೂ ಬಂಸಿದ್ದಾರೆ.

ಬಳಿಕ ಈ ಇಬ್ಬರನ್ನು ವಿಚಾರಣೆಗೆ ಒಳಪಡಿಸಲಾಯಿತು. ಅವರ ಮಾಹಿತಿ ಆಧಾರದ ಮೇರೆಗೆ ಇನ್ಸ್‌ಪೆಕ್ಟರ್‌ ರಾಜಶೇಖರನನ್ನೂ ಬಂಧಿಸಸಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದ್ದು, ಲೋಕಾಯುಕ್ತ ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ