ಆನೇಕಲ್: ಬ್ರೇಕ್ ಫೇಲಾಗಿ ರಸ್ತೆ ಬದಿಯ ಕಂದಕಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನುಗ್ಗಿರುವ ಘಟನೆ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಹರಪ್ಪನಹಳ್ಳಿ ಬಳಿ ನಡೆದಿದೆ.
ಪ್ರಯಾಣಿಕರಿದ್ದ ಬಸ್ ಚಲಿಸುತ್ತಿರುವಾಗಲೇ ಬ್ರೇಕ್ ಫೇಲಾದ್ದು, ಈ ವೇಳೆ ಚಾಲಕನ ನಿಯಂತ್ರ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ನುಗ್ಗಿದೆ. ಅದೃಷ್ಟವಶಾತ್ ಘಟನೆಯಿಂದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಜಿಗಣಿ ಬಿಎಂಟಿಸಿ ಘಟದ ಬಸ್ ಇದಾಗಿದ್ದು, ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಡಿಪೋದಲ್ಲಿರುವ ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಂಥ ಘಟನೆ ನಡೆದಿದೆ. ಬಸ್ಗಳನ್ನು ಮಾರ್ಗಕ್ಕೆ ಇಳಿಸುವ ಮುನ್ನ ಅವುಗಳ ಫಿಟ್ನೆಸ್ ಚೆಕ್ ಮಾಡುವುದಿಲ್ಲ, ಸಾರ್ವಜನಿಕರ ಪ್ರಾಣದ ಜತೆ ಅಧಿಕಾರಿಗಳು ಚೆಲ್ಲಾಟವಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಇನ್ನು ಚಾಲಕರು ಬಸ್ನಲ್ಲಿ ದೋಷ ಕಂಡು ಬಂದಿದೆ ಎಂದು ಲಾಗ್ ಶೀಟ್ನಲ್ಲಿ ಬರೆದರೆ ಅವರಿಗೆ ಹೀಗೆ ಏಕೆ ದೂರು ಬರೆದಿದ್ದೀರಿ ಎಂದು ಮಾನಸಿಕ ಕಿರುಕುಳ ನೀಡುವುದರಿಂದ ಚಾಲನಾ ಸಿಬ್ಬಂದಿಗಳು ಬಸ್ನಲ್ಲಿ ಕಂಡುಬರುವ ದೋಷಗಳನ್ನು ತಿಳಿಸುತ್ತಿಲ್ಲ. ಇದಕ್ಕೆ ಅಧಿಕಾರಿಗಳ ಕಿರುಕುಳವೇ ಕಾರಣವಾಗಿದೆ.
ಜತೆಗೆ ಚಾಲನಾ ಸಿಬ್ಬಂದಿಗಳು ಬಸ್ನಲ್ಲಿ ಕಂಡು ಬರುವ ಸಮಸ್ಯೆಯನ್ನು ಲಿಖಿತವಾಗಿ ಅಥವಾ ಮೌಖಿಕವಾಗಿ ತಿಳಿಸಿದರೆ ಅಂಥ ನೌಕರರಿಗೆ ನೀವೆ ಈ ಸಮಸ್ಯೆಗೆ ಕಾರಣ ಎಂದು ಅವರ ವಿರುದ್ಧವೇ ಮೆಮೋ ಕೊಡುವುದು ಬಳಿಕ ಅವರ ವೇತನದಲ್ಲಿ ಹಣ ಕಡಿತ ಮಾಡಲಾಗುತ್ತದೆ ಹೀಗಾಗಿ ನೌಕರರು ಭಯದಿಂದ ಬಸ್ನಲ್ಲಿನ ದೋಷಗಳನ್ನು ತಿಳಿಸುವುದಿಲ್ಲ.
ಇತ್ತ ಬಸ್ನ ಬಿಡಿಭಾಗಗಳನ್ನು ಸರಿಯಾಗಿ ಪೂರೈಕೆ ಮಾಡದಿರುವುದರಿಂದ ಡಿಪೋಗಳಲ್ಲಿ ತಾಂತ್ರಿಕ ಸಿಬ್ಬಂದಿಗಳಿಗೂ ಕೂಡ ಇದು ತಲೆನೋವಾಗಿ ಪರಿಣಮಿಸಿದೆ. ಕಾರಣ ಒಂದು ಬಸ್ನ ಬಿಡಿಭಾಗಗಳನ್ನು ಬಿಚ್ಚಿ ಮತ್ತೊಂದು ಬಸ್ಗೆ ಜೋಡಿಸಬೇಕು. ಮತ್ತೆ ಅದು ಮಾರ್ಗ ಪೂರ್ಣ ಮಾಡಿ ಬಂದ ಬಳಿಕ ಅದೇ ಬಿಡಿಭಾಗವನ್ನು ಮತ್ತೆ ಇನ್ನೊಂದ ಬಸ್ ಹಾಕಬೇಕು ಹೀಗೆ ತಾಂತ್ರಿಕ ಸಿಬ್ಬಂದಿಗಳಿಗೂ ಕೂಡ ಬಹುತೇಕ ಎಲ್ಲ ಡಿಪೋಗಳನ್ನು ಕೆಲಸದ ಒತ್ತಡ ಹೆಚ್ಚಾಗುತ್ತಿದೆ ಎಂದು ನೌಕರರು ಆರೋಪಿಸಿದ್ದಾರೆ.
ಇನ್ನಾದರೂ ಈ ಬಗ್ಗೆ ಸಂಬಂಧಪಟ್ಟ ಮೇಲಧಿಕಾರಿಗಳು ಎಚ್ಚೆತ್ತುಕೊಂಡು ಆಗುತ್ತಿರುವ ಸಮಸ್ಯೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಂಡು ಬಸ್ಗಳ ಬಿಡಿ ಭಾಗಗಳನ್ನು ಕಾಲಕಾಲಕ್ಕೆ ಸರಿಯಾಗಿ ಪೂರೈಸಬೇಕು ಎಂದು ನೌಕರರು ಒತ್ತಾಯಿಸಿದ್ದಾರೆ.
Related

You Might Also Like
KKRTC ಬಸ್ – ಟಿಪ್ಪರ್ ನಡುವೆ ಭೀಕರ ಅಪಘಾತ: ಕಂಡಕ್ಟರ್ ಸ್ಥಳದಲ್ಲೇ ಸಾವು, ಚಾಲಕ ಸೇರಿ ಹಲವರಿಗೆ ಗಾಯ
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಿರ್ವಾಹಕ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಚಿಲಕನಹಟ್ಟಿ (ಮರಿಯಮ್ಮನಹಳ್ಳಿ)...
KSRTC ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ: 2035ರವರೆಗೆ ಎಸ್ಮಾ ವಿಸ್ತರಣೆ – ಚರ್ಚೆ ಇಲ್ಲದೇ ಸದನದಲ್ಲಿ ವಿಧೇಯಕ ಅಂಗೀಕಾರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವ ಎಸ್ಮಾ ಕಾಯ್ದೆ 10 ವರ್ಷಗಳ ಅವಧಿಗೆ ವಿಸ್ತರಣೆಯಾಗುವ ಅತ್ಯಾವಶ್ಯಕ...
ರೈತರ ಸಮಸ್ಯೆ ಬಗೆ ಹರಿಸಲು ಒತ್ತಾಯಿಸಿ ಡಿಸಿ ಕಚೇರಿ ಮುಂದೆ ರೈತ ಮುಖಂಡರ ಪ್ರತಿಭಟನೆ
ಮೈಸೂರು: ರೈತರ ಸಮಸ್ಯೆ ಬಗೆ ಹರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ , ರಾಜ್ಯ ಕಬ್ಬು ಬೆಳೆಗಾರರ ಸಂಘದ...
KSRTC ನೌಕರರ ಸಾಮಾನ್ಯ ಮರಣ ಪ್ರಕರಣಕ್ಕಿದ್ದ 10 ಲಕ್ಷ ರೂ. ಪರಿಹಾರ ಮೊತ್ತ 14 ಲಕ್ಷ ರೂ.ಗಳಿಗೆ ಏರಿಸಿ ಎಂಡಿ ಆದೇಶ
ಪರಿಷ್ಕರಿಸಿದ 14 ಲಕ್ಷ ರೂ. ಪರಿಹಾರ ಮೊತ್ತ ಸೆಪ್ಟೆಂಬರ್ 1-2025ರಿಂದ ಜಾರಿ ಬೆಂಗಳೂರು: 10 ಲಕ್ಷ ರೂ.ಗಳಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಕುಟುಂಬ...
KSRTC- ಪ್ರತಿಷ್ಠಿತ ವಿಶ್ವ ದಾಖಲೆ ಸೇರಿದ ಶಕ್ತಿ ಯೋಜನೆ: ಅತೀವ ಸಂತಸ, ಹೆಮ್ಮೆಯ ಕ್ಷಣ- ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ 2023ರ ಜೂನ್ 11ರಿಂದ ಜಾರಿಗೆ ಬಂದ ಶಕ್ತಿ ಯೋಜನೆ ಪ್ರತಿಷ್ಠಿತ ವಿಶ್ವ ದಾಖಲೆಗೆ ಸೇರ್ಪಡೆ (Golden Book...
KKRTC ವಿಜಯಪುರ: ಸಂಸ್ಥೆ ನಿಯಮವನ್ನೇ ಗಾಳಿಗೆ ತೂರಿ ಮತ್ತೆ ಮತ್ತೆ ನೌಕರರಿಂದ ಸ್ವಂತ ಕಾರನ್ನು ಸರ್ವಿಸ್ ಮಾಡಿಸಿಕೊಳ್ಳುತ್ತಿರುವ ಡಿಎಂ
ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅದರಲ್ಲೂ ವಿಜಯಪುರ ವಿಭಾಗದಲ್ಲಿ ಇವರ ಬಹುತೇಕ ಎಲ್ಲ ಘಟಕ ವ್ಯವಸ್ಥಾಪಕರು ಸೇರಿದಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳೂ ಅಂಕುಶವಿಲ್ಲದ ಆನೆಯಂತಾಗಿದ್ದಾರೆ. ಅಂದರೆ...
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...
ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಸಿಗುತ್ತಿದೆ ಮುಕ್ತಿ
ಬೆಂಗಳೂರು: ರಾಜ್ಯ ರಾಜಧಾನಿಯ ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಮುಕ್ತಿ ಸಿಗುತ್ತಿದೆ. ಹೌದು! ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಉದ್ಘಾಟನೆ ಆಗುತ್ತಿದೆ. ಇಂದು...
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...