KKRTC ವಿಜಯಪುರ: ಸಂಸ್ಥೆ ನಿಯಮವನ್ನೇ ಗಾಳಿಗೆ ತೂರಿ ಮತ್ತೆ ಮತ್ತೆ ನೌಕರರಿಂದ ಸ್ವಂತ ಕಾರನ್ನು ಸರ್ವಿಸ್ ಮಾಡಿಸಿಕೊಳ್ಳುತ್ತಿರುವ ಡಿಎಂ

ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅದರಲ್ಲೂ ವಿಜಯಪುರ ವಿಭಾಗದಲ್ಲಿ ಇವರ ಬಹುತೇಕ ಎಲ್ಲ ಘಟಕ ವ್ಯವಸ್ಥಾಪಕರು ಸೇರಿದಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳೂ ಅಂಕುಶವಿಲ್ಲದ ಆನೆಯಂತಾಗಿದ್ದಾರೆ. ಅಂದರೆ ನಾವು ಮಾಡಿದ್ದೆ ರೂಲ್ಸ್, ನಾವು ಹೇಳಿದಂತೆ ಕೇಳಬೇಕು ಎಂದು ಸಂಸ್ಥೆಯ ನೌಕರರನ್ನು ಜೀತದಾಳುಗಳಂತೆ ತಮ್ಮ ವೈಯಕ್ತಿಕ ಕೆಲಸಕ್ಕೆ ಬಳಸಿಕೊಳ್ಳುತ್ತಿದ್ದಾರೆ.
ಹೌದು! ಇತ್ತೀಚೆಗೆ ನಿಗಮದ ವಿಜಯಪುರ ಘಟಕ 1 ರ ಘಟಕ ವ್ಯವಸ್ಥಾಪಕ ಸಂಗನಗೌಡ ಬಿರಾದಾರ ಅವರು ತಮ್ಮ ಸ್ವಂತ ವಾಹನ ಕೆಎ 48 M3941 ಕಾರನ್ನು ಘಟಕಕ್ಕೆ ತಂದು ಘಟಕದ ತಾಂತ್ರಿಕ ಸಿಬ್ಬಂದಿಗಳ ಮುಖಾಂತರ ಅದರಲ್ಲೂ ಈ ಬಾರಿ ಮಹಿಳಾ ತಾಂತ್ರಿಕ ಸಿಬ್ಬಂದಿಗಳಿಂದ ವಾಷಿಂಗ್ ಮಾಡಿಸಿಕೊಂಡು ತಿಂಗಳ Maintenance ಚೆಕ್ ಮಾಡಿಕೊಡಿಸಿಕೊಂಡಿದ್ದಾರೆ.
ಅಲ್ಲದೆ ತನ್ನ ಕಾರನ್ನು ಓಡಿಸಲು ಘಟಕದ ಚಾಲಕರನ್ನು ಉಪಯೋಗಿಸಿಕೊಳ್ಳುತ್ತಿದ್ದು, ಇದನ್ನು ನೌಕರರು ಪ್ರಶ್ನಿಸಿದರೆ ಅಂತಹ ನೌಕರರಿಗೆ ವಿನಾಕಾರಣ ಕಿರುಕುಳ ನೀಡಿ ಅಮಾನತು ಮಾಡಿಸುವುದಕ್ಕೆ ಈತ ಮುಂದಾಗುತ್ತಾನೆ ಎಂಬ ಆರೋಪವನ್ನು ಸ್ವತಃ ಘಟಕದ ನೌಕರರು ಮಾಡುತ್ತಿದ್ದಾರೆ.

ಈ ಡಿಪೋ ಡಿಎಂ ಈ ಹಿಂದೆಯೂ ಅಂದರೆ 2025ರ ಏಪ್ರಿಲ್ 9 ರಂದು ಕೂಡ ಕಾರನ್ನು ಘಟಕಕ್ಕೆ ತಂದು ಇಂಜಿನ್ ಆಯಿಲ್ ಬದಲಾವಣೆ, ಗ್ರೀಸಿಂಗ್, ಪಂಚೇರ್ ಹಾಕಿಸಿಕೊಂಡಿದ್ದು ಅಲ್ಲದೆ ವಾಷಿಂಗ್ ಕೂಡ ಮಾಡಿಸಿಕೊಂಡಿದ್ದರ ಬಗ್ಗೆ ವಿಜಯಪಥ ಸಮಗ್ರ ವರದಿ ಮಾಡಿತ್ತು. ಆದರೂ ಈತನ ಮೇಲೆ ಯಾವುದೇ ಕ್ರಮ ಜರುಗಿಸಿಲ್ಲದಿರುವುದು ಮತ್ತೆ ಆತನ ಸಂಸ್ಥೆಯ ತಾಂತ್ರಿಕ ಸಿಬ್ಬಂದಿಗಳನ್ನು ದುರುಪಯೋಗ ಪಡಿಸಿಕೊಳ್ಳುವುದಕ್ಕೆ ಅವಕಾಶವಾಗಿದೆ. ಇದನ್ನೂ ಓದಿ: KKRTC ವಿಜಯಪುರ: ಸಂಸ್ಥೆ ನಿಯಮವನ್ನೇ ಗಾಳಿಗೆ ತೂರಿ ಸಿಬ್ಬಂದಿಯಿಂದ ಘಟಕದಲ್ಲೇ ಸ್ವಂತ ಕಾರು ಸರ್ವಿಸ್ ಮಾಡಿಕೊಂಡ ಡಿಎಂ
ಇದಿಷ್ಟೇ ಅಲ್ಲದೆ ಕಾರಿಗೆ ಸಂಬಂಧಿಸಿದ ಇನ್ನಿತರೇ ಕೆಲಸಗಳನ್ನು ಕಾನೂನು ಬಾಹಿರವಾಗಿ ಸಂಸ್ಥೆಯ ತಾಂತ್ರಿಕ ಸಿಬ್ಬಂದಿಗಳಿಂದ ಮೇಲಿಂದ ಮೇಲೆ ಮಾಡಿಸಿಕೊಳ್ಳುತ್ತಿದ್ದಾರೆ. ಇವರು ಈ ಹಿಂದೆಯೂ ವಿಜಯಪುರ ವಿಭಾಗದ ಇಂಡಿ ಘಕದ ಡಿಎಂ ಆಗಿದ್ದಾಗ ನೌಕರರಿಗೆ ಕಿರುಕುಳ ಕೊಡುತ್ತಿದ್ದರು ಎಂದು KKCC ಸೆಕ್ರೆಟರಿ ಅಲ್ಪ ಸಂಖ್ಯಾತರ ಘಟಕದ ಯಾಕೂಬ ನಾಟಿಕಾರ ಅವರು ಭ್ರಷ್ಟಚಾರದ ಆರೋಪ ಮಾಡಿದ್ದರಿಂದ ವಿಜಯಪುರ ಘಟಕಕ್ಕೆ ವರ್ಗಾವಣೆ ಮಾಡಲಾಗಿದೆ.
ಆದರೆ ಇಲ್ಲಿಯೂ ಕೂಡ ಅವರು ಮತ್ತೆ ತಮ್ಮ ಹಳೆ ಚಾಳಿಯನ್ನೇ ಮುಂದುವರೆಸಿದ್ದಾರೆ. ಜತೆಗೆ ತಮ್ಮ ಸ್ವಂತ ಕಾರನ್ನು ಸರ್ವಿಸ್ ಮಾಡಿಕೊಡುವಂತೆ ಸಂಸ್ಥೆಯ ತಾಂತ್ರಿಕ ಸಿಬ್ಬಂದಿಗೆ ಆದೇಶಿಸಿ ಅದನ್ನು ಮತ್ತೆ ಮತ್ತೆ ರೆಡಿ ಮಾಡಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: KKRTC ವಿಜಯಪುರ: ಸಂಸ್ಥೆ ನಿಯಮವನ್ನೇ ಗಾಳಿಗೆ ತೂರಿ ಸಿಬ್ಬಂದಿಯಿಂದ ಘಟಕದಲ್ಲೇ ಸ್ವಂತ ಕಾರು ಸರ್ವಿಸ್ ಮಾಡಿಕೊಂಡ ಡಿಎಂ
ತಮ್ಮ ಸ್ವಂತ ವಾಹನವನ್ನು ಸಂಸ್ಥೆಯ ಘಕದಲ್ಲಿ ನಿರ್ವಹಣೆ ಮಾಡಿಸುವುದು ಸಂಸ್ಥೆಯ ನಿಯಮದಡಿ ಅಪರಾಧವಾಗುತ್ತದೆ. ಇನ್ನು ಮತ್ತೊಂದು ಶಾಂಕಿಂಗ್ ನ್ಯೂಸ್ ಎಂದರೆ ತಮ್ಮಸ್ವಂತ ವಾಹನಕ್ಕೆ ಘಟಕದಲ್ಲಿ ಹಗಲಲ್ಲೇ ಡೀಸೆಲ್ ಸಹ ತುಂಬಿಸಿರುತ್ತಾರೆ ಎಂಬ ಆರೋಪ ಇವರ ಮೇಲೆ ಇದೆ. ಸಂಸ್ಥೆಯ ಡೀಸೆಲ್ ಬಳಸಿದ್ದರಿಂದ ನಿಗಮಕ್ಕೆ ಆರ್ಥಿಕವಾಗಿಯೂ ಭಾರಿ ನಷ್ಟವಾಗುತ್ತಿದೆ ಎಂಬ ದೂರು ಕೇಳಿ ಬಂದಿದೆ.
ಇನ್ನು ವಿಜಯಪುರ ವಿಭಾಗದಲ್ಲಿ ಇರುವ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಈ ಹಿಂದೆ ಇದೇ ವಿಭಾಗದಲ್ಲಿ ಭಾರಿ ಭ್ರಷ್ಟಾಚಾರ ಮಾಡಿ ವರ್ಗಾವಣೆ ಆಗಿದ್ದ ವ್ಯಕ್ತಿ ಈಗ ಮತ್ತೆ ಇದೇ ವಿಭಾಗಕ್ಕೆ ಬಂದು ಒಕ್ಕರಿಸಿದ್ದು ಈ ಬಗ್ಗೆ ವಿಭಾಗೀಯ ನಿಯಂತ್ರಣಾಧಿಕಾರಿ ನಾರಯಣಪ್ಪ ಕುರಬರ ಇವರಿಗೆ ದೂರು ಕೊಟ್ಟರೆ ನಮ್ಮನ್ನೇ ಅಮಾನತು ಮಾಡುತ್ತಾರೆ ಎಂದು ಸಿಬ್ಬಂದಿಗಳು ಹೆದರಿ ಇವರು ಹೇಳಿದಂತೆ ಕೇಳುತ್ತಿದ್ದಾರೆ.
ಒಟ್ಟಾರೆ ವಿಜಯಪುರ ವಿಭಾಗದಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿನಂತೆ ಇಲ್ಲಿ ಇರುವ ಬಹುತೇಕ ಅಧಿಕಾರಿಗಳು ಸಂಸ್ಥೆಯ ನೌಕರರನ್ನು ಮತ್ತು ಸಂಸ್ಥೆಯ ವಸ್ತುಗಳನ್ನು ದುರುಪಯೋಗಪಡಿಸಿಕೊಂಡು ದೌಲತ್ ಮರೆಯುತ್ತಿದ್ದಾರೆ. ಇದಕ್ಕೆ ಸಂಬಂಧಪಟ್ಟ ಎಂಡಿ ಹಾಗೂ ಸಾರಿಗೆ ಮಂತ್ರಿ ರಾಮಲಿಂಗಾರೆಡ್ಡಿ ಅವರು ಕಡಿವಾಣ ಹಾಕಬೇಕು.
ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಈ ವಿಷಯದಲ್ಲಿ ತುರ್ತಾಗಿ ಕಟ್ಟುನಿಟ್ಟಿನ ಆದೇಶ ಮಾಡಿ ವಿಜಯಪುರ ಘಟಕದ ಘಟಕ ವ್ಯವಸ್ಥಾಪಕ ಸಂಗನಗೌಡ ಬಿರಾದಾರ ಹಾಗೂ ವೈಯಕ್ತಿಕ ವಾಹನವನ್ನು ಘಟಕದಲ್ಲಿ ಸರ್ವಿಸ್ ಮಾಡುವುದಕ್ಕೆ ಬಿಟ್ಟ ಭದ್ರತಾ ಸಿಬ್ಬಂದಿ ಅವರ ವಿರುದ್ಧವೂ ಕೂಡಲೇ ಅಮಾನತು ಮಾಡಬೇಕು ಎಂದು ನೌಕರರು ಒತ್ತಾಯಿಸಿದ್ದಾರೆ.
Related

You Might Also Like
KSRTC ನೌಕರರ ಸಾಮಾನ್ಯ ಮರಣ ಪ್ರಕರಣಕ್ಕಿದ್ದ 10 ಲಕ್ಷ ರೂ. ಪರಿಹಾರ ಮೊತ್ತ 14 ಲಕ್ಷ ರೂ.ಗಳಿಗೆ ಏರಿಸಿ ಎಂಡಿ ಆದೇಶ
ಪರಿಷ್ಕರಿಸಿದ 14 ಲಕ್ಷ ರೂ. ಪರಿಹಾರ ಮೊತ್ತ ಸೆಪ್ಟೆಂಬರ್ 1-2025ರಿಂದ ಜಾರಿ ಬೆಂಗಳೂರು: 10 ಲಕ್ಷ ರೂ.ಗಳಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಕುಟುಂಬ...
KSRTC- ಪ್ರತಿಷ್ಠಿತ ವಿಶ್ವ ದಾಖಲೆ ಸೇರಿದ ಶಕ್ತಿ ಯೋಜನೆ: ಅತೀವ ಸಂತಸ, ಹೆಮ್ಮೆಯ ಕ್ಷಣ- ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ 2023ರ ಜೂನ್ 11ರಿಂದ ಜಾರಿಗೆ ಬಂದ ಶಕ್ತಿ ಯೋಜನೆ ಪ್ರತಿಷ್ಠಿತ ವಿಶ್ವ ದಾಖಲೆಗೆ ಸೇರ್ಪಡೆ (Golden Book...
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...
BMTC: ಬ್ರೇಕ್ ಫೇಲಾಗಿ ಕಂದಕಕ್ಕೆ ನುಗ್ಗಿದ ಬಸ್- ಅದೃಷ್ಟವಶಾತ್ ಪ್ರಯಾಣಿಕರು ಸೇಫ್
ಆನೇಕಲ್: ಬ್ರೇಕ್ ಫೇಲಾಗಿ ರಸ್ತೆ ಬದಿಯ ಕಂದಕಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನುಗ್ಗಿರುವ ಘಟನೆ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಹರಪ್ಪನಹಳ್ಳಿ ಬಳಿ...
ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಸಿಗುತ್ತಿದೆ ಮುಕ್ತಿ
ಬೆಂಗಳೂರು: ರಾಜ್ಯ ರಾಜಧಾನಿಯ ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಮುಕ್ತಿ ಸಿಗುತ್ತಿದೆ. ಹೌದು! ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಉದ್ಘಾಟನೆ ಆಗುತ್ತಿದೆ. ಇಂದು...
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...