NEWSನಮ್ಮರಾಜ್ಯ

ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ, ಸಿಎಂ ಕೆಳಗಿಳಿಸುವರೆ ತ್ರಿಮೂರ್ತಿಗಳು?

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದ್ದು ಪಕ್ಷದ ಹಿರಿಯ ಶಾಸಕರು ಎರಡು ಬಾರಿ ಸಿಎಂ ಯಡಿಯೂರಪ್ಪ ವಿರುದ್ಧ ಸಭೆ ನಡೆಸಿದ್ದಾರೆ ಎಂಬ ಸ್ಫೋಟಕ ಮಾಹಿತಿ ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಸಚಿವಾಕಾಂಕ್ಷಿ ಆಗಿದ್ದ  ಹಿರಿಯರು  ಅನ್ಯ ಪಕ್ಷದಿಂದ ಬಂದವರಿಗೆ ಸಚಿವಸ್ಥಾನ ನೀಡಿದ್ದಕ್ಕೆ ಬೇಸರಗೊಂಡಿದ್ದು, ಅದು ಇಲ್ಲಿ ವರೆಗೆ ಬೂದಿ ಮುಚ್ಚಿದ ಕೆಂಡದಂತ್ತಿತ್ತು. ಆದರೆ ಕೊರೊನಾ ವಿಶ್ವಮಾರಿ ರಾಜ್ಯವನ್ನು ಬಾಧಿಸುತ್ತಿರುವ ಈ ಹೊತ್ತಿನಲ್ಲೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಮೂಲಕ ಬಿಎಸ್‌ವೈ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ತಂತ್ರ ಹೆಣೆದಿದ್ದಾರೆ ಎಂದು ಹೇಳಲಾಗುತ್ತಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಇನ್ನು ಪಕ್ಷದ ಸುಮಾರು 27 ಶಾಸಕರು ಈ ಕುರಿತು ರಹಸ್ಯ ಸ್ಥಳದಲ್ಲಿ ಕಳೆದ 15 ದಿನಗಳಿಂದಲೂ ಸೇರುತ್ತಿದ್ದು, ಎರಡು ಬಾರಿ ಸಭೆಯನ್ನು ಮಾಡಿದ್ದಾರೆ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಸಭೆ ನಡೆಸಿದವರಲ್ಲಿ ಪಕ್ಷದ ತ್ರಿಮೂರ್ತಿಗಳ ಪಾತ್ರ ಇದೆ ಎಂದು ಹೇಳಲಾಗುತ್ತಿದೆ. ಇನ್ನು ಇದನ್ನು ಕೇಳಿದ ಸಿಎಂ ಬಿಎಸ್‌ವೈ ಅವರಿಗೆ ದಿಕ್ಕು ಕಾಣದಂತ್ತಾಗಿದ್ದು, ಕೆಲ ಸಚಿವರು ಮತ್ತು ಶಾಸಕರ ಸಲಹೆ ಕೇಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಪಕ್ಷದಲ್ಲಿ ಹಿರಿಯರಾಗಿದ್ದರೂ ನಮಗೆ ಸಚಿವ ಸ್ಥಾನ ನೀಡಲು ಹಿಂದೆಟು ಹಾಕಿದ ಯಡಿಯೂರಪ್ಪ ಅವರು ಸಿಎಂ ಆಗಿ ಮುಂದುವರಿಯಲು ನಾವು ಅವಕಾಶ ಕೊಡಬಾರದು ಎಂದು ತ್ರಿಮೂರ್ತಿಗಳಾದ ಉಮೇಶ್‌ಕತ್ತಿ, ಮುರುಗೇಶ್‌ ನಿರಾಣಿ ಮತ್ತು ಬಸನಗೌಡ ಪಾಟೀಲ್‌ ಯತ್ನಾಳ್‌  ಅವರು ಸಿಡಿದೆದ್ದಿದ್ದಾರೆ ಎಂದು ತಿಳಿದು ಬಂದಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

27 ಶಾಸಕರನ್ನೊಳಗೊಂಡು ತ್ರಿಮೂರ್ತಿಗಳು ನಡೆಸಿದ ರಹಸ್ಯ ಸಭೆಯಿಂದ ಆತಂಕಗೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತ್ರಿಮೂರ್ತಿಗಳಲ್ಲಿ ಒಬ್ಬರನ್ನು ಕರೆದು  ಈ ಇಕ್ಕಟ್ಟಿನ ಪರಿಸ್ಥಿತಿಯನ್ನು ಶಮನ ಮಾಡಲು  ಮಾತುಕತೆ ನಡೆಸಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಯಾವುದೇ ಸಭೆ ನಡೆಸಿಲ್ಲ. ಮಾಧ್ಯಮಗಳಲ್ಲಿ ಬರುತ್ತಿರುವುದು ನೂರಕ್ಕೆ ನೂರು ಸುಳ್ಳು, ಆದರೆ ಭಿನ್ನಮತಿಯರು ಸಭೆ ಸೇರಿದ್ದಾರೋ ಇಲ್ಲವೋ ಎಂಬುವುದು ನಮಗೆ ತಿಳಿದಿಲ್ಲ.  ಆ ಬಗ್ಗೆ ಅವರನ್ನೇ ಕೇಳಿಕೊಳ್ಳಿ. ಬಿಎಸ್‌ವೈ ಅವರು ಹಿರಿಯರು ಅವರು ಪಕ್ಷಕ್ಕೆ ದುಡಿದಿದ್ದಾರೆ. ಈ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಇನ್ನು ಈ ಹಿಂದೆ ಸ್ವಾಮೀಜಿ ಒಬ್ಬರು ನಮಗೆ ಸಚಿವ ಸ್ಥಾನ ಕೊಡಬೇಕು ಎಂದಿದ್ದರು. ಆದರೆ ಅವರ ಮಾತಿನಲ್ಲಿ ತಪ್ಪೇನಿದೆ, ನಾನು ಸನ್ಯಾಸಿಯಲ್ಲ. ನಮಗೂ ಆಸೆ ಇದೆ.

l ಮುರುಗೇಶ್‌ ನಿರಾಣಿ, ಬಿಜೆಪಿ ಶಾಸಕರು

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ