KSRTC ಬಡ ಸಾರಿಗೆ ನೌಕರರ ಮೇಲೆ ಎಸ್ಮಾ ಜಾರಿ ಸಲ್ಲ: ಸಾರಿಗೆ ಸಚಿವರು ಪರಿಶೀಲಿಸಿ- ಅಧಿವೇಶನದಲ್ಲಿ ಶಾಸಕರ ಆಗ್ರಹ
ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆಯಿಂದ ಕರ್ನಾಟಕ ರಾಜ್ಯ ಅತ್ಯವಶ್ಯಕ ಸೇವೆ ವಿಧೇಯಕವನ್ನು ಮಂಡಿಸುವ ಸಂದರ್ಭದಲ್ಲಿ ರಾಜ್ಯದ ಸಾರಿಗೆ ನೌಕರರ ಮೇಲೆ ಎಸ್ಮಾ ಕಾಯಿದೆಯನ್ನು ಜಾರಿ ಮಾಡುತ್ತಿರುವ ಬಗ್ಗೆ ವಿರೋಧ ವ್ಯಕ್ತಪಡಿಸಿ ವಿಧೇಯಕವನ್ನು ಪುನರ್ ಪರಿಶೀಲಿಸುವಂತೆ ಸಾರಿಗೆ ಸಚಿವರಿಗೆ ಶಾಸಕರು ಒತ್ತಾಯಿಸಿದ್ದಾರೆ.
ಎಸ್ಮಾ ಕಾಯ್ದೆ ಹೇರಿ ಸಾರಿಗೆ ನೌಕರರನ್ನು ಬೆದರಿಸುವುದು ಸರಿಯಲ್ಲ. ಗ್ಯಾರಂಟಿ ಬಗ್ಗೆ ಪ್ರಚಾರ ಪಡೆಯುವ ರಾಜ್ಯ ಸರ್ಕಾರ ಸಾರಿಗೆ ನೌಕರರ ಹಿಂಬಾಕಿ, ವೇತನ ಪರಿಷ್ಕರಣೆ ಮಾಡಬೇಕು ಎಂದು ವಿಧಾನ ಪರಿಷತ್ನಲ್ಲಿ ಶಾಸಕರಾದ ಎಸ್.ವಿ. ಸಂಕನೂರ್, ಗೋವಿಂದರಾಜು, ಟಿ.ಎ.ಶರವಣ ಆಗ್ರಹಿಸಿದ್ದಾರೆ.
ಇಂದು ವಿಧಾನಸಭೆಯ ಮೇಲ್ಮನೆಯಲ್ಲಿ ನಡೆದ ಚರ್ಚೆವೇಳೆ ಬಡ ಸಾರಿಗೆ ನೌಕರರ ಮೇಲೆ ಈ ರೀತಿ ಗದಾಪ್ರಹಾರ ಮಾಡುವುದು ಸರಿಯಲ್ಲ. ಅವರು ಪ್ರತಿಭಟನೆಯನ್ನು ಏಕೆ ಮಾಡುತ್ತಾರೆ? ಅವರಿಗೆ ನ್ಯಾಯಯುತವಾಗಿ ಸಿಗಬೇಕಾದ ಸೌಲಭ್ಯಗಳು ಸಿಗದಿದ್ದಾಗ ಮಾಡುತ್ತಾರೆ. ನೀವು ಅವರಿಗೆ ಕೊಡಬೇಕಿರುವುದನ್ನು ಕೊಟ್ಟರೆ ಅವರೇಕೆ ಮುಷ್ಕರಕ್ಕೆ ಮುಂದಾಗುತ್ತಾರೆ ಎಂದು ಸಾರಿಗೆ ಸಚಿವರನ್ನು ಪ್ರಶ್ನಿಸಿದ್ದಾರೆ.
ಇನ್ನು ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗ ಜಾರಿ ಮಾಡಿ ಅವರಿಗೆ ಕೊಡಬೇಕಿರುವುದನ್ನು ಕೊಟ್ಟಿದ್ದೀರಿ. ಆದರೆ ಸಾರಿಗೆ ನೌಕರರಿಗೆ ಕೊಡಬೇಕಿರುವುದನ್ನು ಏಕೆ ಕೊಟ್ಟಿಲ್ಲ? ಅವರು ತಮ್ಮ ಕುಟುಂಬದವರನ್ನು ಬಿಟ್ಟು ದಿನದ 24 ಗಂಟೆ ಹಗಲಿರುಳೆನ್ನದೇ ಸಾರ್ವಜನಿಕರ ಸೇವೆ ಸಲ್ಲಿಸುತ್ತಿದ್ದಾರೆ ಅವರೆಗೆ ಮಾತ್ರ ಈ ತಾರತಮ್ಯತೆ ಏಕೆ ಎಂದು ಅಧಿವೇಶದಲ್ಲಿ ಕೇಳಿದ್ದಾರೆ.
ಕರ್ನಾಟಕ ರಾಜ್ಯ ಅತ್ಯವಶ್ಯಕ ಸೇವೆ ಬರಿ ಸಾರಿಗೆ ನಿಗಮಗಳಿಗೆ ಮಾತ್ರನಾ? ಆಸ್ಪತ್ರೆಗಳು, ಪೊಲೀಸ್ಠಾಣೆ, ಜಲಮಂಡಳಿ, ಬೆಸ್ಕಾಂ, ಚೆಸ್ಕಾಂ ಸೇರಿದಂತೆ ಹಲವು ಇಲಾಖೆಗಳು ಬರುತ್ತವೆ. ಆದರೆ, ಬರಿ ಸಾರಿಗೆ ನೌಕರರ ಮೇಲೆ ಅದು ನೀವು ಸಾರಿಗೆ ಸಚಿವರಾಗಿದ್ದುಕೊಂಡು ಈ ರೀತಿ ಪ್ರಯೋಗ ಮಾಡುವುದು ಸರಿಯಲ್ಲ ಇದನ್ನು ಪರಿಶೀಲನೆ ಮಾಡಿ ಎಂದು ಒತ್ತಾಯಿಸಿದ್ದಾರೆ.
Related

You Might Also Like
BMTC ಬಸ್ ಬಾಗಿಲಿಗೆ ಸಿಲುಕಿದ ಕೈ- ಬಿದ್ದು ಚಕ್ರಕ್ಕೆ ಸಿಲುಕಿ ಪ್ರಯಾಣಿಕ ಸಾವು
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಎಲೆಕ್ಟ್ರಿಕ್ ಬಸ್ ಚಕ್ರಕ್ಕೆ ಸಿಲುಕಿ ಪ್ರಯಾಣಿಕ ಮೃತಪಟ್ಟಿರುವ ಘಟನೆ ಇಂದು ಜಯನಗರದ 4ನೇ ಬ್ಲಾಕ್ನಲ್ಲಿ ನಡೆದಿದೆ. ಸಂಪಂಗಿ (64) ಮೃತಪಟ್ಟವರು....
ರೀಲ್ಸ್, ವಿಡಿಯೋ ಮಾಡುವ ವಕೀಲರಿಗೆ ಶಿಸ್ತು ಕ್ರಮದ ಎಚ್ಚರಿಕೆ ಕೊಟ್ಟ ವಕೀಲರ ಪರಿಷತ್
ಬೆಂಗಳೂರು: ವೃತ್ತಿನಿರತ ವಕೀಲರು ತಮ್ಮನ್ನು ತಾವೇ ಉನ್ನತೀಕರಿಸಿಕೊಳ್ಳುವಂತಹ ಪ್ರಚಾರದ ಯಾವುದೇ ರೀಲ್ಗಳು ಮತ್ತು ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ ಲೋಡ್ ಮಾಡಿದ್ದರೆ ಅಂತಹ ಆಕ್ಷೇಪಾರ್ಹ ರೀಲ್ಗಳು, ವಿಡಿಯೋಗಳನ್ನು...
KKRTC ಬಸ್ – ಟಿಪ್ಪರ್ ನಡುವೆ ಭೀಕರ ಅಪಘಾತ: ಕಂಡಕ್ಟರ್ ಸ್ಥಳದಲ್ಲೇ ಸಾವು, ಚಾಲಕ ಸೇರಿ ಹಲವರಿಗೆ ಗಾಯ
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಿರ್ವಾಹಕ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಚಿಲಕನಹಟ್ಟಿ (ಮರಿಯಮ್ಮನಹಳ್ಳಿ)...
KSRTC ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ: 2035ರವರೆಗೆ ಎಸ್ಮಾ ವಿಸ್ತರಣೆ – ಚರ್ಚೆ ಇಲ್ಲದೇ ಸದನದಲ್ಲಿ ವಿಧೇಯಕ ಅಂಗೀಕಾರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವ ಎಸ್ಮಾ ಕಾಯ್ದೆ 10 ವರ್ಷಗಳ ಅವಧಿಗೆ ವಿಸ್ತರಣೆಯಾಗುವ ಅತ್ಯಾವಶ್ಯಕ...
ರೈತರ ಸಮಸ್ಯೆ ಬಗೆ ಹರಿಸಲು ಒತ್ತಾಯಿಸಿ ಡಿಸಿ ಕಚೇರಿ ಮುಂದೆ ರೈತ ಮುಖಂಡರ ಪ್ರತಿಭಟನೆ
ಮೈಸೂರು: ರೈತರ ಸಮಸ್ಯೆ ಬಗೆ ಹರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ , ರಾಜ್ಯ ಕಬ್ಬು ಬೆಳೆಗಾರರ ಸಂಘದ...
KSRTC ನೌಕರರ ಸಾಮಾನ್ಯ ಮರಣ ಪ್ರಕರಣಕ್ಕಿದ್ದ 10 ಲಕ್ಷ ರೂ. ಪರಿಹಾರ ಮೊತ್ತ 14 ಲಕ್ಷ ರೂ.ಗಳಿಗೆ ಏರಿಸಿ ಎಂಡಿ ಆದೇಶ
ಪರಿಷ್ಕರಿಸಿದ 14 ಲಕ್ಷ ರೂ. ಪರಿಹಾರ ಮೊತ್ತ ಸೆಪ್ಟೆಂಬರ್ 1-2025ರಿಂದ ಜಾರಿ ಬೆಂಗಳೂರು: 10 ಲಕ್ಷ ರೂ.ಗಳಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಕುಟುಂಬ...
KSRTC- ಪ್ರತಿಷ್ಠಿತ ವಿಶ್ವ ದಾಖಲೆ ಸೇರಿದ ಶಕ್ತಿ ಯೋಜನೆ: ಅತೀವ ಸಂತಸ, ಹೆಮ್ಮೆಯ ಕ್ಷಣ- ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ 2023ರ ಜೂನ್ 11ರಿಂದ ಜಾರಿಗೆ ಬಂದ ಶಕ್ತಿ ಯೋಜನೆ ಪ್ರತಿಷ್ಠಿತ ವಿಶ್ವ ದಾಖಲೆಗೆ ಸೇರ್ಪಡೆ (Golden Book...
KKRTC ವಿಜಯಪುರ: ಸಂಸ್ಥೆ ನಿಯಮವನ್ನೇ ಗಾಳಿಗೆ ತೂರಿ ಮತ್ತೆ ಮತ್ತೆ ನೌಕರರಿಂದ ಸ್ವಂತ ಕಾರನ್ನು ಸರ್ವಿಸ್ ಮಾಡಿಸಿಕೊಳ್ಳುತ್ತಿರುವ ಡಿಎಂ
ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅದರಲ್ಲೂ ವಿಜಯಪುರ ವಿಭಾಗದಲ್ಲಿ ಇವರ ಬಹುತೇಕ ಎಲ್ಲ ಘಟಕ ವ್ಯವಸ್ಥಾಪಕರು ಸೇರಿದಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳೂ ಅಂಕುಶವಿಲ್ಲದ ಆನೆಯಂತಾಗಿದ್ದಾರೆ. ಅಂದರೆ...
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...