NEWSನಮ್ಮರಾಜ್ಯ

ಮೇ 31- ರಾಜ್ಯದಲ್ಲಿ ಕೊರೊನಾ ಕೇಕೆ 299 ಮಂದಿಗೆ ಸೋಂಕು ದೃಢ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ  ಇಂದು ರಣಕೇಕೆ ಹಾಕಿದ್ದು, 299  ಹೊಸ ಪ್ರಕರಣಗಳು ದೃಢಪಟ್ಟಿದ್ದು  ಈ ಮೂಲಕ ರಾಜ್ಯದಲ್ಲಿ 3221 ಮಂದಿ ಸೋಂಕಿಗೆ ಒಳಗಾಗಿದ್ದಾರೆ. ಅದರಲ್ಲಿ  ಇಬ್ಬರು ಮೃತಪಟ್ಟಿದ್ದಾರೆ.

ಇಂದು ರಾಯಚೂರು ಜಿಲ್ಲೆಯೊಂದರಲ್ಲೇ 83 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈವರೆಗೆ ಕೊರೊನಾದಿಂದ ಅಸುನೀಗಿದವರ ಸಂಖ್ಯೆ 53 ಕ್ಕೆ ಏರಿಕೆ ಆಗಿದೆ. (ಇದರಲ್ಲಿ ಎರಡು ಅನ್ಯಕಾರಣದಿಂದ ಬಲಿಯಾಗಿದ್ದಾರೆ). ಅದರಲ್ಲಿ ಇಂದು ಬೀದರ್‌  (ರೋಗಿ ನಂ. 2965)  75 ವರ್ಷದ  ವೃದ್ಧ ಮತ್ತು ರಾಯಚೂರಿನ (ರೋಗಿ ನಂ. 2597)  50 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಇಂದು ದೃಢಪಟ್ಟಿರುವ 299 ಪ್ರಕರಣಗಳ ಪೈಕಿ ಬಹುತೇಕರು ಅಂತಾರಾಜ್ಯ ಸಂಪರ್ಕ ಹೊಂದಿದ್ದಾರೆ. 253 ಜನ ಅಂತಾರಾಜ್ಯ ಪ್ರಯಾಣಿಕರಿದ್ದಾರೆ. ಇನ್ನು ಯಾದಗಿರಿಯಲ್ಲಿ 44, ಬೀದರ್‌ನಲ್ಲಿ 33, ಕಲಬುರಗಿಯಲ್ಲಿ 28, ಬೆಂಗಳೂರಿನಲ್ಲಿ 21, ವಿಜಯಪುರ 26, ಮಂಡ್ಯ ಮತ್ತು ಬೆಳಗಾವಿಯಲ್ಲಿ ತಲಾ 13, ದಕ್ಷಿಣ ಕನ್ನಡದಲ್ಲಿ 21, ಉಡುಪಿಯಲ್ಲಿ 10, ದಾವಣಗೆರೆಯಲ್ಲಿ 6, ಉತ್ತರ ಕನ್ನಡದಲ್ಲಿ 5, ಬಳ್ಳಾರಿಮ ಶೀವಮೊಗ್ಗ ಮತ್ತು ಕೋಲಾರದಲ್ಲಿ ತಲಾ ಒಂದೊಂದು ಪ್ರಕರಣ ಪತ್ತೆಯಾಗಿವೆ ಎಂದು   ಸಂಜೆ ಆರೋಗ್ಯ ಇಲಾಖೆ ನೀಡಿದ ಬುಲೆಟಿನ್‌ನಲ್ಲಿ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಇದುವರೆಗೆ 1218 ಮಂದಿ ಗುಣಮುಖರಾಗಿ  ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.  1950 ಮಂದಿಯಲ್ಲಿ  ಸಕ್ರಿಯವಾಗಿದೆ. ಪ್ರಸ್ತುತ 15 ಮಂದಿ ಕೊರೊನಾ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದೇಶದಲ್ಲಿ 183,008  ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 183,008   ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 5,188 ಮಂದಿ ಮೃತಪಟ್ಟಿದ್ದಾರೆ. 87,179 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 6,191,647 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 371,472 ಜನರು ಮೃತಪಟ್ಟಿದ್ದಾರೆ 2,759,158  ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್