NEWSಕೃಷಿದೇಶ-ವಿದೇಶ

ನ್ಯೂಡೆಲ್ಲಿ: ವಿವಿಧ ಬೇಡಿಕೆಗಳ ಈಡೇರಿಸದ ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಸಮರ ಸಾರಿದ ದೇಶದ ಅನ್ನದಾತರು

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ದೇಶದ ರೈತರ ಬೃಹತ್ ರ‍್ಯಾಲಿ ಸೋಮವಾರ ದೆಹಲಿಯಲ್ಲಿ ನಡೆದು ಜಂತರ್ ಮಂತರ್‌ನಲ್ಲಿ ಸಮಾವೇಶಗೊಂಡಿತು.

ಸಂಯುಕ್ತ ಕಿಸಾನ್ ಮೋರ್ಚಾ ರಾಜಕೀಯತರ ಸಂಘಟನೆಯ ಕರೆಯ ಮೇರೆಗೆ ಸಹಸ್ರಾರು ರೈತರು ಜಂತರ್ ಮಂತರ್ ನಲ್ಲಿ ಕಿಸಾನ್ ಮಹಾಪಂಚಾಯತ್ ರ‍್ಯಾಲಿ ನಡೆಸಿದರು ದೇಶದ ಹಲವು ರಾಜ್ಯಗಳಿಂದ ರೈತರು ತಂಡೋಪ ತಂಡವಾಗಿ ರ‍್ಯಾಲಿಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿದರು.

ಕೃಷಿ ಉತ್ಪನ್ನಗಳಿಗೆ MSP ಗ್ಯಾರಂಟಿ ಕಾನೂನು ಸೇರಿದಂತೆ ರೈತಪರ ಬೇಡಿಕೆಗಳ ಅನುಷ್ಠಾನಕ್ಕಾಗಿ ದೆಹಲಿಯಲ್ಲಿ ಹಮ್ಮಿಕೊಂಡಿರುವ ಬೃಹತ್ “ಕಿಸಾನ್ ಮಹಾಪಂಚಾಯತ್”ನಲ್ಲಿ ಕರ್ನಾಟಕದ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಬಣದ ವಿವಿಧ ಜಿಲ್ಲೆಗಳ ನೂರಾರು ರೈತರು ರ‍್ಯಾಲಿಯಲ್ಲಿ ಭಾಗವಹಿಸಿದ್ದರು.

ಈ ಹೋರಾಟಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ (SKM) ರಾಜಕೀಯೇತರ ರಾಷ್ಟ್ರಮಟ್ಟದ ವೇದಿಕೆ ನೇತೃತ್ವದ ಜಗಜಿತ್ ಸಿಂಗ್ ದಲೆವಾಲಾ ವಹಿಸಿದರು, ಇದರಲ್ಲಿ ದೇಶದಾದ್ಯಂತದ ಮಧ್ಯ ಪ್ರದೇಶ, ಬಿಹಾರ್, ಹರಿಯಾಣ, ಪಂಜಾಬ್, ಕರ್ನಾಟಕ ಹಾಗೂ ತಮಿಳುನಾಡು ಮತ್ತಿತರ ರಾಜ್ಯಗಳ ರೈತ ಸಂಘಟನೆಗಳು ಸಕ್ರಿಯವಾಗಿ ಪಾಲ್ಗೊಂಡಿವೆ.

ಹೋರಾಟದ ಮುಖ್ಯ ಬೇಡಿಕೆಗಳು: 1. ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಖಾತರಿ ಕಾನೂನು ಜಾರಿಯಾಗಬೇಕು. 2. ದೇಶದ ರೈತರ ಸಂಪೂರ್ಣ ಸಾಲ ಮನ್ನಾ ಆಗಬೇಕು.

3. ಭಾರತ–ಅಮೆರಿಕ ನಡುವಿನ ವ್ಯಾಪಾರ ಒಪ್ಪಂದಗಳಲ್ಲಿ ಹೈನುಗಾರಿಕೆ, ಕೋಳಿ ಹಾಗೂ ಕುರಿ ಸಾಕಾಣಿಕೆ ಉದ್ಯಮಗಳನ್ನು ಹೊರಗಿಡಬೇಕು. 4. ಫಲವತ್ತಾದ ಕೃಷಿಭೂಮಿಯನ್ನು ಕೈಗಾರಿಕೆಗಳಿಗೆ ವಶಪಡಿಸಿಕೊಳ್ಳುವ ನೀತಿ ಕೈಬಿಡಬೇಕು. 5. ರೈತ ಹೋರಾಟದಲ್ಲಿ ಭಾಗವಹಿಸಿದ ರೈತರ ಮೇಲಿರುವ ಎಲ್ಲಾ ಪೊಲೀಸು ದೂರುಗಳನ್ನು ರದ್ದುಪಡಿಸಬೇಕು.

ಕರ್ನಾಟಕದಿಂದ ರೈತರ ಮುಖಂಡರಾದ ಸುರೇಶ್ ಪಾಟೀಲ್ ಹತ್ತಳ್ಳಿ ದೇವರಾಜ್, ಬರಡನಪುರ ನಾಗರಾಜ್, ಬಸವರಾಜ್ ಪಾಟೀಲ್, ರಮೇಶ್ ಹೂಗಾರ್, ಶಿವರಾಜ್ ನಾಯಕ್ ಮುಂತಾದವರು ಭಾಗವಹಿಸಿದರು.

Deva
the authorDeva

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ