KKRTC: ಲಾರಿಗೆ ಡಿಕ್ಕಿ ಹೊಡೆಯುವುದ ತಪ್ಪಿಸಲು ಹೋಗಿ ರಸ್ತೆಬದಿ ಕಂದಕಕ್ಕೆ ನುಗ್ಗಿದ ಬಸ್- ತಪ್ಪಿದ ಭಾರಿ ಅನಾಹುತ

- ವಿಭಾಗೀಯ ನಿಯಂತ್ರಣಾಧಿಕಾರಿಗಳ ಆದೇಶ ಪಾಲಿಸದ ಬೀದರ್ ಘಟಕ-1ರ ಡಿಎಂ
ಬೀದರ್: ಎದುರಿಗೆ ಬಂದ ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ ರಸ್ತೆಬದಿ ಕಂದಕಕ್ಕೆ ನುಗ್ಗಿರುವ ಘಟನೆ ಕರ್ನೂಲ್ ಬಳಿ ತಡರಾತ್ರಿ ಜರುಗಿದೆ.
ಬಸ್ ಬೀದರ್ನಿಂದ ಬೆಂಗಳೂರಿಗೆ ಹೋಗುತ್ತಿದ್ದಾಗ ಮಧ್ಯರಾತ್ರಿ ಸುಮಾರು1.30ರ ಸಮಯದಲ್ಲಿ ಕರ್ನೂಲ್ ಬಳಿ ಏಕಾಏಕಿ ಹಠಾತ್ತನೇ ಲಾರಿ ಎದುರಿಗೆ ಬಂದಿದೆ. ಈ ವೇಳೆ ಬಸ್ ಚಾಲಕರು ಅಪಘಾತ ತಪ್ಪಿಸಲು ಪ್ರಯತ್ನಿಸಿದಾಗ ಬಸ್ ರಸ್ತೆ ಪಕ್ಕದ ಕಂದಕಕ್ಕೆ ಇಳಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.
ಕೆಕೆಆರ್ಟಿಸಿ ಸಂಸ್ಥೆಯ ಬೀದರ್ ವಿಭಾಗದ ಬೀದರ್ ಘಟಕ -1ರ ಬಸ್ ಇದಾಗಿದ್ದು, ನಿನ್ನೆ (ಆ.26) ತಡರಾತ್ರಿ ಬೀದರ್ನಿಂದ ಬೆಂಗಳೂರಿಗೆ ಹೊರಟಿದ್ದು, ಬಸ್ ಚಾಲಕ ನಾಗೇಶ (213) ಹಾಗೂ ನಿರ್ವಾಹಕ ಸಿದ್ದಲಿಂಗ (127) ಅವರು ಡ್ಯೂಟಿ ಮೇಲೆ ಇದ್ದರು.
ಸುಮಾರು 16 ಜನ ಪ್ರಯಾಣಿಕರಿದ್ದು ಎಲ್ಲರೂ ಬಹುತೇಕ ಮಲಗಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಆದರೆ, ಚಾಲಕ ನಾಗೇಶ ಅವರಿಗೆ ಸಣ್ಣಪುಟ್ಟ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.
ವಿಭಾಗೀಯ ನಿಯಂತ್ರಣಾಧಿಕಾರಿಗಳ ಆದೇಶ ಪಾಲಿಸದ ಡಿಎಂ: ಕೆಕೆಆರ್ಟಿಸಿ ಸಂಸ್ಥೆಯ ಬೀದರ್ ವಿಭಾಗದ ಬೀದರ್ ಘಟಕ -1ರ ಘಟಕ ವ್ಯವಸ್ಥಾಪಕರು ವಿಭಾಗೀಯ ನಿಯಂತ್ರಣಾಧಿಕಾರಿ ಹೊರಡಿಸಿರುವ 480ಕಿಮೀಗೆ ಇಬ್ಬರು ಚಾಲಕರು ಒಬ್ಬ ನಿರ್ವಾಹಕರನ್ನು ಹಾಕಬೇಕು ಎಂದು ಆದೇಶವನ್ನು ಗಾಳಿಗೆ ತೂರಿದ್ದು, ಸುಮಾರು 1500 KM ಕಾರ್ಯಾಚರಣೆಗೆ ಒಬ್ಬರೇ ಚಾಲಕ ಹಾಗೂ ಇನ್ನೋರ್ವ ಚಾಲಕ ಕಂ ನಿರ್ವಾಹಕರನ್ನಷ್ಟೇ ಡ್ಯೂಟಿ ಮೇಲೆ ಕಳುಹಿಸುತ್ತಿದ್ದಾರೆ.

ಇದರಿಂದ ಕಾರ್ಯಾಚರಣೆ ವೇಳೆ ಈ ಸಮಸ್ಯೆಯಾಗುತ್ತಿದ್ದು ಇಂಥ ಅಪಘಾತಗಳು ಸಂಭವಿಸಲು ಕಾರಣವಾಗುತ್ತಿದೆ ಎಂದು ಘಟಕದ ನೌಕರರು ವಿಭಾಗೀಯ ನಿಯಂತ್ರಣಾಧಿಕಾರಿಗಳು ಹೊರಡಿಸಿರುವ ಆದೇಶ ದಾಖಲೆಯೊಂದಿಗೆ ಆರೋಪ ಮಾಡುತ್ತಿದ್ದಾರೆ.
ಡಿಸಿ ಆದೇಶದಲ್ಲೇನಿದೆ?: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬೀದರ್ ವಿಭಾಗದ ಬೀದರ-1, ಬೀದರ-2, ಹುಮನಾಬಾದ, ಬಸವಕಲ್ಯಾಣ, ಭಾಲ್ಕಿ ಮತ್ತು ಔರಾದ ಘಟಕದ ಘಟಕ ವ್ಯವಸ್ಥಾಪಕರು 480 ಕಿ.ಮೀ.ಕ್ಕಿಂತ ಹೆಚ್ಚಿನ ಅನುಸೂಚಿ ಕಿ.ಮೀ. ಇರುವ ಮಾರ್ಗಗಳಿಗೆ ಇಬ್ಬರು ಚಾಲಕರನ್ನು ನಿಯೋಜಿಸಬೇಕು ಎಂದು ಕಳೆದ 2024ರ ಆಗಸ್ಟ್ 16ರಂದೇ ಆದೇಶ ಹೊರಡಿಸಿದ್ದಾರೆ.
ತಮಗೆ ಈ ವಿಷಯಕ್ಕೆ ಸಂಬಂಧಿಸಿದಂತೆ ತಿಳಿಯಪಡಿಸುವುದೇನೆಂದರೆ 480 ಕ್ಕಿಂತ ಹೆಚ್ಚಿನ ಅನುಸೂಚಿ ಕಿ.ಮೀ. ಇರುವ ವೇಗದೂತ ಬಸ್ಗಳಿಗೆ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸುವಾಗ ಇಬ್ಬರು ಚಾಲಕರು ಮತ್ತು ಒಬ್ಬ ನಿರ್ವಾಹಕರನ್ನು ನಿಯೋಜಿಸಿ ಕಾರ್ಯಚರಣೆ ಅನುಸೂಚಿಗಳಿಗೆ ಚಾಲನೆ ಮಾಡಬೇಕು. ಆದ್ದರಿಂದ ತಮ್ಮ ಘಟಕಗಳಲ್ಲಿ 480 ಕ್ಕಿಂತ ಹೆಚ್ಚಿನ ಅನುಸೂಚಿ ಕಿ.ಮೀ. ಇರುವ ವೇಗದೂತ ಅನುಸೂಚಿಗಳಿಗೆ ಕೇಂದ್ರ ಕಚೇರಿಯ ನಿರ್ದೇಶನದಂತೆ ಇಬ್ಬರು ಚಾಲಕರು ಮತ್ತು ಒಬ್ಬ ನಿರ್ವಾಹಕರನ್ನು ನಿಯೋಜಿಸಿ ಕಾರ್ಯಚರಣೆ ಮಾಡಬೇಕು ಎಂದು ಆದೇಶ ಹೊರಡಿಸಿದ್ದಾರೆ.
ಆದರೆ ಈ ಆದೇಶವನ್ನು ವಿಭಾಗದ ಘಟಕ ವ್ಯವಸ್ಥಾಪಕರು ಪಾಲನೆ ಮಾಡದೆ ಬೀದರ್ನಿಂದ ಬೆಂಗಳೂರಿಗೆ ಅಂದರೆ ಸುಮಾರು 1500 KM ಕಾರ್ಯಾಚರಣೆಗೆ ಒಬ್ಬರೇ ಚಾಲಕ ಹಾಗೂ ಇನ್ನೋರ್ವ ಚಾಲಕ ಕಂ ನಿರ್ವಾಹಕರನ್ನಷ್ಟೇ ಡ್ಯೂಟಿ ಮೇಲೆ ಕಳುಹಿಸುತ್ತಿದ್ದಾರೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ನೌಕರರು ಒತ್ತಾಯಿಸಿದ್ದಾರೆ.
Related


You Might Also Like
BMTC: ಕರ್ತವ್ಯ ನಿರತ ಚಾಲಕರು ಮೊಬೈಲ್ ಬಳಸಿದರೆ ಗಂಭೀರ ಕೆಂಪು ಗುರುತಿನ ಪ್ರಕರಣ ದಾಖಲಿಸಿ- ತನಿಖಾ ಸಿಬ್ಬಂದಿಗೆ ಎಂಡಿ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಚಾಲನಾ ಸಿಬ್ಬಂದಿಗಳು ಮಾರ್ಗದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದಾಗ ಮೊಬೈಲ್ ಮತ್ತು ಡಿಜಿಟಲ್ ಗ್ಯಾಜೆಟ್ಸ್ (Bluetooth, Earphone ಇತ್ಯಾದಿಗಳನ್ನು ಬಳಸಿದರೆ ಅವರ...
ಕೆಐಎಡಿಬಿ: ಭೂ ಸ್ವಾಧೀನ ಕುರಿತು ಕೈಗಾರಿಕಾ ಮಂತ್ರಿ ಎಂ.ಬಿ.ಪಾಟೀಲ್ ರೈತರ ನಿಯೋಗದ ಜತೆ ಚರ್ಚೆ- ರಾಮಲಿಂಗಾರೆಡ್ಡಿ
ಆನೇಕಲ್: ತಾಲೂಕಿನ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿಯ ರೈತರ ನಿಯೋಗದ ಜತೆ ಇಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮಂತ್ರಿ ಎಂ.ಬಿ.ಪಾಟೀಲ ಅವರನ್ನು ಭೇಟಿಯಾಗಿ ಪ್ರಸ್ತುತ...
KKRTC ನೌಕರ ನಿಧನ ಪ್ರಕರಣ: ಸಹೋದರನಿಗೆ ಅನುಕಂಪದ ಉದ್ಯೋಗ ಪಡೆಯುವ ಹಕ್ಕಿದೆ- ಹೈಕೋರ್ಟ್ ತೀರ್ಪು
ಬೆಂಗಳೂರು: ಸರ್ಕಾರಿ ನೌಕರನ ಪತ್ನಿ, ಪತಿಗಿಂತ ಮೊದಲೇ ನಿಧನರಾಗಿ ಆಕೆಗೆ ಮಕ್ಕಳಿರಲಿಲ್ಲದಿದ್ದಾಗ ಹಾಗೂ ಆನಂತರದಲ್ಲಿ ಸರ್ಕಾರಿ ನೌಕರನೂ ನಿಧನರಾದಾಗ ಅಂತಹ ಪ್ರಕರಣಗಳಲ್ಲಿ ನೌಕರನ ಸಹೋದರರಿಗೆ ಅನುಕಂಪದ ಆಧಾರದಲ್ಲಿ...
ದೇವನಹಳ್ಳಿ ಸರ್ಕಾರಿ ಶಾಲೆ ಕಿಟಕಿ ಛಾವಣಿ ಕುಸಿದು ವಿದ್ಯಾರ್ಥಿಗಳಿಗೆ ಗಾಯ ಪ್ರಕರಣ: ಆಯೋಗದ ಅಧ್ಯಕ್ಷ ನಾಗಣ್ಣಗೌಡ ಭೇಟಿ
ಗಾಯಗೊಂಡ ಮೂವರು ವಿದ್ಯಾರ್ಥಿಗಳ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ ಬೆಂಗಳೂರು ಗ್ರಾಮಾಂತರ: ದೇವನಹಳ್ಳಿಯ ಕೋಟೆ ಬೀದಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆ ಕಟ್ಟಡದ ಕಿಟಕಿ ಚಾವಣಿ...
NWKRTC: DA ಅರಿಯರ್ಸ್ ಬಗ್ಗೆ ಚರ್ಚಿಸಿ ಆದೇಶ ಮಾಡುವೆ-ಕೂಟದ ಪದಾಧಿಕಾರಿಗಳ ಜತೆ ವ್ಯವಸ್ಥಾಪಕ ನಿರ್ದೇಶಕರ ಚರ್ಚೆ
ಹುಬ್ಬಳ್ಳಿ: ಸಾರಿಗೆ ನೌಕರರ ಕೂಟದಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಲಯ ಮಟ್ಟದ ಕುಂದು ಕೊರತೆ ಬಗ್ಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ ಅವರ ಜತೆ...
ಗಣಪನ ವಿಸರ್ಜನೆಗೆ 41 ಕಲ್ಯಾಣಿಗಳು, 489 ಸಂಚಾರಿ ವಾಹನಗಳು ಸಜ್ಜು
ಬೆಂಗಳೂರು: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಬಿಬಿಎಂಪಿ ವತಿಯಿಂದ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 41 ಕೆರೆ ಅಂಗಳದ ಶಾಶ್ವತ/ ತಾತ್ಕಾಲಿಕ ಕಲ್ಯಾಣಿಗಳು ಹಾಗೂ...
ರಸ್ತೆ ಅಗೆದೆಡೆ ಪುನರ್ ಸ್ಥಾಪನೆ ಮಾಡುವ ವೇಳಾಪಟ್ಟಿ ಕೊಡಿ: ಆಡಳಿತಗಾರ ತುಷಾರ್ ಗಿರಿನಾಥ್
ಬೆಂಗಳೂರು: ನಗರದಲ್ಲಿ ಜಲಮಂಡಳಿ ವತಿಯಿಂದ ರಸ್ತೆ ಅಗೆದ ಭಾಗಗಳ ಪುನರ್ ಸ್ಥಾಪನೆ ಮಾಡುವ ವೇಳಾಪಟ್ಟಿ ನೀಡಲು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಆಡಳಿತಗಾರರಾದ ತುಷಾರ್...
ಆ.28ರಂದು ಕನಿಷ್ಠ ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ EPS ಪಿಂಚಣಿದಾರರ ಬೃಹತ್ ಪ್ರತಿಭಟನೆ
ಬೆಂಗಳೂರು: ಕೇಂದ್ರ ಸರ್ಕಾರ ಮುಸ್ಸಂಜೆಯ ಇಳಿವಯಸ್ಸಿನಲ್ಲಿರುವ ಪ್ರಬುದ್ಧ ಇಪಿಎಸ್-95 ನಿವೃತ್ತರು ಕಳೆದೊಂದು ದಶಕದಿಂದ ದೇಶಾದ್ಯಂತ ನಡೆಸಿದ ಹೋರಾಟಕ್ಕೆ ಯಾವುದೇ ಪ್ರತಿಫಲ ಕೊಡದೆ ಉದ್ಧಟತನದಿಂದ ನಡೆದುಕೊಳ್ಳುತ್ತಿರುವುದಕ್ಕೆ ಸಮಸ್ತ ನಿವೃತ್ತರು...
ನ್ಯೂಡೆಲ್ಲಿ: ವಿವಿಧ ಬೇಡಿಕೆಗಳ ಈಡೇರಿಸದ ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಸಮರ ಸಾರಿದ ದೇಶದ ಅನ್ನದಾತರು
ನ್ಯೂಡೆಲ್ಲಿ: ದೇಶದ ರೈತರ ಬೃಹತ್ ರ್ಯಾಲಿ ಸೋಮವಾರ ದೆಹಲಿಯಲ್ಲಿ ನಡೆದು ಜಂತರ್ ಮಂತರ್ನಲ್ಲಿ ಸಮಾವೇಶಗೊಂಡಿತು. ಸಂಯುಕ್ತ ಕಿಸಾನ್ ಮೋರ್ಚಾ ರಾಜಕೀಯತರ ಸಂಘಟನೆಯ ಕರೆಯ ಮೇರೆಗೆ ಸಹಸ್ರಾರು ರೈತರು...