ಬಾಗಲಕೋಟೆ: ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟ ರೈತ ಬಸಯ್ಯ ಮುಚಖಂಡಿ ಹಾಗೂ ಹೊಸೂರ ಗ್ರಾಮದ ಮೃತ ರೈತ ಮಹಿಳೆ ಶಾಂತವ್ವ ಭೋವಿ ಕುಟುಂಬಕ್ಕೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಭೇಟಿ ನೀಡಿ ಸಾಂತ್ವನ ಹೇಳಿ ತಲಾ 5 ಲಕ್ಷ ರೂ.ಗಳ ಪರಿಹಾರಧನ ಚೆಕ್ನ್ನು ವಿತರಿಸಿದರು.
ಸಿಡಿಲು ಬಡಿದು ಮೃತಪಟ್ಟದ ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದ 67 ವರ್ಷದ ರೈತ ಬಸಯ್ಯ ವೀರಭದ್ರಯ್ಯ ಮುಚಖಂಡಿ ಅವರ ಪತ್ನಿಗೆ ಮಂಗಳವಾರ ಪರಿಹಾರಧನದ ಚೆಕ್ ವಿತರಿಸಲಾಯಿತು. ಹೊಸೂರ ಗ್ರಾಮದ 25 ವರ್ಷದ ರೈತ ಮಹಿಳೆ ಶಾಂತವ್ವ ಭೋವಿ ಅವರ ಪತಿ ಅಣ್ಣಪ್ಪನಿಗೆ ಪರಿಹಾರಧನದ ಚೆಕ್ನ್ನು ವಿತರಿಸಲಾಯಿತು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಸದರಿ ಕುಟುಂಬಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಅಪಘಾತದಲ್ಲಿ ಮೃತಪಟ್ಟ ನಂದಿಕೇಶ್ವರ ಗ್ರಾಮದ 53 ವರ್ಷದ ಅಂಗನವಾಡಿ ಕಾರ್ಯಕರ್ತೆ ಪ್ರಭಾವತಿ ಹಂಗರಗಿ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿ ಧನ ಸಹಾಯ ಮಾಡಿದರು. ಅದೇ ರೀತಿ ಸಾಲಭಾದೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತ ವೀರಯ್ಯ ಬಸಯ್ಯ ಅಂಗರಗಿ ಕುಟುಂಬಕ್ಕೂ ಸಹ ಭೇಟಿ ನೀಡಿ ಸಾಂತ್ವನ ಹೇಳಿದರು.
ಸಂಸದ ಪಿ.ಸಿ.ಗದ್ದಿಗೌಡರ, ಮಾಜಿ ಶಾಸಕ ರಾಜಶೇಖರ ಶೀಲವಂತ, ಉಪವಿಭಾಗಾಧಿಕಾರಿ ಎಂ.ಗಂಗಪ್ಪ, ಬಾದಾಮಿ ತಹಶೀಲ್ದಾರ ಇಂಗಳೆ ಇತರು ಉಪಸ್ಥಿತರಿದ್ದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail