NEWSನಮ್ಮರಾಜ್ಯ

ಕ್ವಾರಂಟೈನ್‌ನಲ್ಲಿದ್ದ ಬಾಲಕ ‌ಚಿಕಿತ್ಸೆ ಸಿಗದೆ ಹೊಟ್ಟೆ ನೋವಿನಿಂದ ಬಳಲಿ ಮೃತ

ವಿಜಯಪಥ ಸಮಗ್ರ ಸುದ್ದಿ

ರಾಯಚೂರು: ಕ್ವಾರಂಟೈನ್‌ನಲ್ಲಿ ಇದ್ದ ಹದಿನಾಲ್ಕು ವರ್ಷ ಬಾಲಕ ಚಿಕಿತ್ಸೆ ಸಿಗದೆ ಹೊಟ್ಟೆನೋವಿನಿಂದ ಬಳಲಿ ಮೃತಪಟ್ಟಿರುವ ಘಟನೆ ಗುರುವಾರ ದೇವದುರ್ಗದ ಕ್ವಾರಂಟೈನ್‌ ಕೇಂದ್ರದಲ್ಲಿ ನಡೆದಿದೆ.

ಜಿಲ್ಲೆಯ ದೇವದುರ್ಗದ ಕ್ವಾರಂಟೈನ್‌ ಕೇಂದ್ರದಲ್ಲಿ ಗುಜರಾತ್‌ನಿಂದ ಬಂದಿದ್ದ ಬಾಲಕನನ್ನು ಸರ್ಕಾರದ ವತಿಯಿಂದ ಕ್ವಾರಂಟೈನ್‌ ಮಾಡಲಾಗಿತ್ತು.  ಈ ವೇಳೆ ಕಳೆದ ಎರಡು ದಿನದಿಂದ ಬಾಲಕ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಆದರೂ ಸಂಬಂಧಿಸಿದ ಅಧಿಕಾರಿಗಳು ಆತನಿಗೆ ಚಿಕಿತ್ಸೆ ಕೊಡಿಸದೆ ನಿರ್ಲಕ್ಷ್ಯ ವಹಿಸಿದ್ದರಿಂದ ಬಾಲಕ ಅಸುನೀಗಿದ್ದಾನೆ ಎಂದು ಕ್ವಾರಂಟೈನ್‌ ಆಗಿರುವವರು ಮತ್ತು ಬಾಲಕನ ಪಾಲಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಎರಡು ದಿನದಿಂದಲೂ ಬಾಲಕ ಹೊಟ್ಟೆನೋವಿನಿಂದ ಬಳಲುತ್ತಿದ್ದರು ಅಧಿಕಾರಿಗಳು ಆ ಬಾಲಕನ ಬಗ್ಗೆ ಏಕೆ ಕಾಳಜಿ ವಹಿಸಿಲ್ಲ ಎಂಬ ಅನುಮಾನವು ಕಾಡುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳನ್ನು ವಿಚಾರಿಸಿದರೆ ಆ ಬಗ್ಗೆ ತನಿಖೆ ನಡೆಯುತ್ತಿದ್ದು ಏನಾಗಿದೆ ಎಂಬುವುದು ತಿಳಿಯಲಿದೆ ಎಂದಷ್ಟೇ ಹೇಳಿಕೆ ನೀಡಿದ್ದಾರೆ.

ಇನ್ನು 14 ವರ್ಷದ ಮಗನನ್ನು ಕಳೆದುಕೊಂಡ ಪಾಲಕರ ಆಕ್ರಂದನ ಮುಗಿಲು ಮುಟ್ಟುವಂತಿತ್ತು. ನಮ್ಮ ಮಗನ ಸಾವಿಗೆ ಕಾರಣರಾದ ಅಧಿಕಾರಿಗಳಿಗೆ ತಕ್ಕ ಶಿಕ್ಷೆ ಕೊಡಿಸಿ ಎಂದು ಗೋಳಾಡುತ್ತಿದ್ದ ದೃಶ್ಯ ಮನಕಲಕುವಂತಿತ್ತು. ಪಾಲಕರ ದುಃಖವನ್ನು ನೋಡುತ್ತಿದ್ದ ಜನರ ಕಣ್ಣಾಲೆಗಳು ತೇವವಾಗುತ್ತಿದ್ದವು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ