ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ 9 ಸಾವಿರ ಕೆ.ಜಿ ಏಕ ಬಳಕೆ ಪ್ಲಾಸ್ಟಿಕ್ ವಶಪಡಿಸಿಕೊಂಡು 7.38 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಬಿ.ಎಸ್.ಡಬ್ಲ್ಯೂ.ಎಂ.ಎಲ್ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕರೀಗೌಡ ತಿಳಿಸಿದ್ದಾರೆ.
ನಗರದಾದ್ಯಂತ ಏಕ ಬಳಕೆ ಪ್ಲಾಸ್ಟಿಕ್ಅನ್ನು ಸಂಪೂರ್ಣವಾಗಿ ನಿಷೇಧಿಸಿದ್ದರೂ ಕೂಡ, ಅಕ್ರಮವಾಗಿ ಏಕ ಬಳಕೆ ಪ್ಲಾಸ್ಟಿಕ್ ಕವರ್ಗಳನ್ನು ದಾಸ್ತಾನು ಮಾಡಿಕೊಂಡು ಮಾರಾಟ ಮಾಡುತ್ತಿರುವುದು ಕಂಡು ಬಂದಿರುವ ಹಿನ್ನೆಲೆಯಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದ ಅಧಿಕಾರಿಗಳು ಉತ್ಪಾದಕರು ಹಾಗೂ ದಾಸ್ತಾನುದಾರರ ಮೇಲೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಪ್ಲಾಸ್ಟಿಕ್ ವಶಕ್ಕೆ ಪಡೆದು, ಕೆ.ಆರ್.ಮಾರುಕಟ್ಟೆಯಲ್ಲಿ ಒಂದು ಗೋಡೌನ್ ಸೀಜ್ ಮಾಡಲಾಗಿದೆ.
ಎಲ್ಲೆಲ್ಲಿ ದಂಡ ಸಂಗ್ರಹಣೆ- ಕೆ.ಆರ್. ಮಾರುಕಟ್ಟೆ: ಕೆ.ಆರ್ ಮಾರುಕಟ್ಟೆ ವ್ಯಾಪ್ತಿಯ ಎ ಬ್ಲಾಕ್ ನಲ್ಲಿ 3 ಪ್ರಕರಣಗಳಿಂದ 29 ಕೆ.ಜಿ ಏಕ ಬಳಕೆ ಪ್ಲಾಸ್ಟಿಕ್ ವಶಕ್ಕೆ ಪಡೆದಿದ್ದು, ರೂ. 30,000/- ಗಳ ದಂಡದ ಮೊತ್ತವನ್ನು ವಸೂಲಾತಿ ಮಾಡಲಾಗಿದೆ. ಜೊತೆಗೆ ವೆಂಡರ್ಸ್ ಸಿ ಬ್ಲಾಕ್ ನಲ್ಲಿ 22 ಪ್ರಕರಣಗಳಿಂದ 6310 ಕೆ.ಜಿ ಏಕ ಬಳಕೆ ಪ್ಲಾಸ್ಟಿಕ್ ವಶಕ್ಕೆ ಪಡೆದಿದ್ದು, ರೂ. 3500/- ಗಳ ದಂಡದ ಮೊತ್ತವನ್ನು ವಸೂಲಾತಿ ಮಾಡಲಾಗಿದೆ.
ಅವೆನ್ಯೂ ರಸ್ತೆ: ಅವೆನ್ಯೂ ರಸ್ತೆ ವ್ಯಾಪ್ತಿಯ ಬಿ ಬ್ಲಾಕ್ ನಲ್ಲಿ 17 ಪ್ರಕರಣಗಳಿಂದ 300 ಕೆ.ಜಿ ಏಕ ಬಳಕೆ ಪ್ಲಾಸ್ಟಿಕ್ ವಶಕ್ಕೆ ಪಡೆದಿದ್ದು, ರೂ. 40,000/- ಗಳ ದಂಡದ ಮೊತ್ತವನ್ನು ವಸೂಲಾತಿ ಮಾಡಲಾಗಿದೆ.
ಕಲಾಸಿಪಾಳ್ಯ: ಕಲಾಸಿಪಾಳ್ಯದಲ್ಲಿ 24 ಪ್ರಕರಣಗಳಿಂದ 150 ಕೆ.ಜಿ ಏಕ ಬಳಕೆ ಪ್ಲಾಸ್ಟಿಕ್ ವಶಕ್ಕೆ ಪಡೆದಿದ್ದು, ರೂ. 45,900/- ಗಳ ದಂಡದ ಮೊತ್ತವನ್ನು ವಸೂಲಾತಿ ಮಾಡಲಾಗಿದೆ.
ಯಶವಂತಪುರ ಮಾರುಕಟ್ಟೆ: ಯಶವಂತಪುರ ಮಾರುಕಟ್ಟೆಯಲ್ಲಿ 27 ಪ್ರಕರಣಗಳಿಂದ 110 ಕೆ.ಜಿ ಏಕ ಬಳಕೆ ಪ್ಲಾಸ್ಟಿಕ್ ವಶಕ್ಕೆ ಪಡೆದಿದ್ದು, ರೂ. 61,800/- ಗಳ ದಂಡದ ಮೊತ್ತವನ್ನು ವಸೂಲಾತಿ ಮಾಡಲಾಗಿದೆ.

ಪೀಣ್ಯ ಕೈಗಾರಿಕಾ ಪ್ರದೇಶ: ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ 27 ಪ್ರಕರಣಗಳಿಂದ 450 ಕೆ.ಜಿ ಏಕ ಬಳಕೆ ಪ್ಲಾಸ್ಟಿಕ್ ವಶಕ್ಕೆ ಪಡೆದಿದ್ದು, ರೂ. 1,00,500/- ಗಳ ದಂಡದ ಮೊತ್ತವನ್ನು ವಸೂಲಾತಿ ಮಾಡಲಾಗಿದೆ.
ದಾಸರಹಳ್ಳಿ (ಮ್ಯಾನುಪಾಕ್ಚರಿಂಗ್) ಪ್ರದೇಶ: ದಾಸರಹಳ್ಳಿ (ಮ್ಯಾನುಪಾಕ್ಚರಿಂಗ್) ಪ್ರದೇಶದಲ್ಲಿ 01 ಪ್ರಕರಣಗಳಿಂದ 218 ಕೆ.ಜಿ ಏಕ ಬಳಕೆ ಪ್ಲಾಸ್ಟಿಕ್ ವಶಕ್ಕೆ ಪಡೆದಿದ್ದು, ರೂ. 50,000/- ಗಳ ದಂಡದ ಮೊತ್ತವನ್ನು ವಸೂಲಾತಿ ಮಾಡಲಾಗಿದೆ.
ಚಾಮರಾಜಪೇಟೆ ಹಾಗೂ ಇತರೆ ಪ್ರದೇಶ: ಚಾಮರಾಜಪೇಟೆ-ಮಕ್ಕಳಕೂಟ, ಅಕ್ಕಿಪೇಟೆ, ಬಳೆಪೇಟೆ ಪ್ರದೇಶದಲ್ಲಿ 37 ಪ್ರಕರಣಗಳಿಂದ 2,000 ಕೆ.ಜಿ ಏಕ ಬಳಕೆ ಪ್ಲಾಸ್ಟಿಕ್ ವಶಕ್ಕೆ ಪಡೆದಿದ್ದು, ರೂ. 4,07,000/- ಗಳ ದಂಡದ ಮೊತ್ತವನ್ನು ವಸೂಲಾತಿ ಮಾಡಲಾಗಿದೆ.
ಒಟ್ಟಾರೆಯಾಗಿ 158 ಪ್ರಕರಣಗಳಿಂದ 9,567 ಕೆಜಿ ಏಕ ಬಳಕೆ ಪ್ಲಾಸ್ಟಿಕ್ ವಶಕ್ಕೆ ಪಡೆದು ರೂ. 7,38,700 ಗಳ ದಂಡದ ಮೊತ್ತವನ್ನು ವಸೂಲಿ ಮಾಡಿ, ಸಾರ್ವಜನಿಕರು ಹಾಗೂ ಮಾರಾಟಗಾರರು ಏಕ ಬಳಕೆ ಪ್ಲಾಸ್ಟಿಕ್ ಬಳಸದಂತೆ ಹಾಗೂ ಬಟ್ಟೆಯ ಚೀಲಗಳನ್ನು ಬಳಸಿ ಸಾರ್ವಜನಿಕ ಆರೋಗ್ಯ ಹಾಗೂ ಪರಿಸರ ಮಾಲಿನ್ಯ ತಡೆಗಟ್ಟುವಲ್ಲಿ ಸಹಕರಿಸುವಂತೆ ಮನವಿ ಮಾಡಿದರು.
Related


You Might Also Like
BMTC ಸಂಸ್ಥೆಯಿಂದ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕೊಡಿ: ವ್ಯವಸ್ಥಾಪಕ ನಿರ್ದೇಶಕರಿಗೆ ಟಿಸಿ ಶ್ರೀನಿವಾಸ್ ಮನವಿ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ಈ ಹಿಂದಿನಿಂದಲೂ ಸ್ವಾತಂತ್ರ್ಯೋತ್ಸವ, ಕನ್ನಡ ರಾಜ್ಯೋತ್ಸವದಂದು ಕೊಡಲಾಗುತ್ತಿತ್ತು ಆದರೆ, ಇತ್ತೀಚೆಗೆ ನಿಲ್ಲಿಸಿರುವುದು ಸರಿಯಾದ ಕ್ರಮವಲ್ಲ...
KKRTC ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 3 ವರ್ಷ ಜೈಲು, 6 ಸಾವಿರ ರೂ. ದಂಡ ವಿಧಿಸಿದ ಕೋರ್ಟ್ ಮಹತ್ವದ ತೀರ್ಪು
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕರ ಮೇಲೆ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಪ್ರಕರಣದಲ್ಲಿ ಅಪರಾಧಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ...
ಮೆಜೆಸ್ಟಿಕ್ ಬಳಿ ಮೊಬೈಲ್ ಶೌಚಾಲಯ ವ್ಯವಸ್ಥೆ: ಆಯುಕ್ತ ರಾಜೇಂದ್ರ ಚೋಳನ್
ಬೆಂಗಳೂರು: ಮೆಜೆಸ್ಟಿಕ್ ಬಳಿ ಪಾದಚಾರಿ ಮಾರ್ಗಗಳಲ್ಲಿ ಸಾರ್ವಜನಿಕರು ಮೂತ್ರ ವಿಸರ್ಜನೆ ಮಾಡುವುದನ್ನು ನಿಯಂತ್ರಿಸುವ ಸಲುವಾಗಿ ಮೊಬೈಲ್ ಶೌಚಾಲಯಗಳ ವ್ಯವಸ್ಥೆ ಮಾಡಲು ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ...
ಸರ್ಕಾರಿ ಬಸ್ ಚಾಲಕ-ನಿರ್ವಾಹಕರು ಎಲ್ಲದಕ್ಕೂ ಹೊಣೆಯಲ್ಲ: ಸುಜಯ ಆರ್.ಕಣ್ಣೂರ
ಬಿಎಂಟಿಸಿ ವಿರುದ್ಧ 10 ಸಾವಿರ ದೂರು' ಮುಖಪುಟ ವರದಿ ತಿಳಿಸುವ ಸಲುವಾಗಿ ಈ ಬರಹ. ನಾನು ಬಿಂಎಂಟಿಸಿ ಬಸ್ನಲ್ಲಿ 35 ವರ್ಷಗಳಿಂದ ಪ್ರಯಾಣಿಸುತ್ತಿದ್ದೇನೆ. ಇದರಲ್ಲಿ ಯಾರದು ತಪ್ಪು,...
BMTC ಬಸ್ ಚಾಲಕನ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ಖಂಡಿಸಿ ಚಾಲಕರ ಪ್ರತಿಭಟನೆ
ಬೆಂಗಳೂರು: ಕಾರಿಗೆ ಸೈಡ್ ಬಿಡಲಿಲ್ಲ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ಚಾಲಕನ ಮೇಲೆ ಜಿಗಣಿ ಠಾಣೆಯ ಪೊಲೀಸ್ ಸಿಬ್ಬಂದಿಯೊಬ್ಬರು ಹಲ್ಲೆ ಮಾಡಿರುವ ಘಟನೆ ನಡೆದಿದೆ....
ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಸಕಾರಾತ್ಮಕ ನಡೆ ಶ್ಲಾಘನೀಯ: ಪ್ರಧಾನಿ ಮೋದಿ
ನ್ಯೂಡೆಲ್ಲಿ: ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಕಾರಾತ್ಮಕ ನಡೆ ಶ್ಲಾಘನೀಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನಾನು ಮೋದಿ ಅವರೊಂದಿಗೆ...
“ಗಬ್ಬರ್ ಸಿಂಗ್ ತೆರಿಗೆ” ಸಣ್ಣ ವ್ಯಾಪಾರಿಗಳ ಸರ್ವನಾಶ ಮಾಡಲಿದೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ತೆರಿಗೆದಾರ ಜನತೆ ಮತ್ತು ವ್ಯಾಪಾರಿ ವರ್ಗದ ಮೇಲಿನ ಆರ್ಥಿಕ ಭಾರ ಮತ್ತು ಅನುಷ್ಠಾನದ ಜಂಜಾಟವನ್ನು ತಗ್ಗಿಸಲು ಅತ್ಯಗತ್ಯವಾಗಿದ್ದ ತೆರಿಗೆ ಸುಧಾರಣೆಯನ್ನು ಜಾರಿಗೆ ತರುವ ಸರಕು ಸೇವಾ...
ಜಾತಿ ವ್ಯವಸ್ಥೆ ಕಾರಣಕ್ಕೆ ಅವಕಾಶಗಳು ಎಲ್ಲರಿಗೂ ಸಿಗುತ್ತಿಲ್ಲ: CM ಸಿದ್ದರಾಮಯ್ಯ
ಬೆಂಗಳೂರು: ಜಾತಿ ವ್ಯವಸ್ಥೆ ಕಾರಣಕ್ಕೆ ಅಸಮಾನ ಸಮಾಜ ನಿರ್ಮಾಣವಾಗಿ ಅವಕಾಶಗಳು ಎಲ್ಲರಿಗೂ ಸಿಗುತ್ತಿಲ್ಲ. ಶೂದ್ರರ ಜತೆಗೆ ಮಹಿಳೆಯರನ್ನೂ ಶಿಕ್ಷಣದಿಂದ ಹೊರಗಿಡಲಾಗಿತ್ತು. ಆದರೆ ಈಗ ಶಿಕ್ಷಣದ ಹಕ್ಕಿನ ಕಾರಣಕ್ಕೆ...
ನಮ್ಮ ಸರ್ಕಾರ ವರ್ಷಕ್ಕೆ 65 ಸಾವಿರ ಕೋಟಿ ರೂ. ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ: ಸಿಎಂ
ಬೆಂಗಳೂರು: ಶಿಕ್ಷಣ ನಮ್ಮ ಸರ್ಕಾರದ ಆದ್ಯತಾ ಕಾರ್ಯಕ್ರಮವಾಗಿದ್ದು, ವರ್ಷಕ್ಕೆ 65 ಸಾವಿರ ಕೋಟಿ ರೂಪಾಯಿಯನ್ನು ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ವಿಧಾನಸೌಧದ...