NEWSನಮ್ಮರಾಜ್ಯಮೈಸೂರುಸಂಸ್ಕೃತಿ

ಮೈಸೂರು: ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್‌ಗೆ ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ನಾಡಹಬ್ಬ ದಸರಾ ಉದ್ಘಾಟಕರಾಗಿ ಆಯ್ಕೆಯಾಗಿರುವ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತರಾದ ಸಾಹಿತಿ ಬಾನು ಮುಷ್ತಾಕ್ ಅವರನ್ನು ಸರ್ಕಾರದ ಪರವಾಗಿ ಮೈಸೂರು ಜಿಲ್ಲಾಡಳಿತದ ವತಿಯಿಂದ ಅಧಿಕೃತವಾಗಿ ಬುಧವಾರ ಆಹ್ವಾನಿಸಲಾಯಿತು.

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರು, ಇಂದು ಹಾಸನ ನಗರದ ಅಮೀರ್ ಮೊಹಲ್ಲಾದಲ್ಲಿರುವ ಸಾಹಿತಿ ಬಾನು ಮುಷ್ತಾಕ್ ಅವರ ಮನೆಗೆ ಭೇಟಿ ನೀಡಿ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ದಸರಾ ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡುವ ಮೂಲಕ ಅಧಿಕೃತವಾಗಿ ಈ ಬಾರಿಯ ದಸರಾ ಉದ್ಘಾಟನೆಗೆ ಆಹ್ವಾನಿಸಿದರು.

ಇದೇ ವೇಳೆ ಮೈಸೂರು ಅಪರ ಜಿಲ್ಲಾಧಿಕಾರಿ ಶಿವರಾಜ್, ಚಾಮುಂಡಿ ದೆವಾಲಯ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರೂಪ, ಜಿಪಂ ಸಿಇಒ ಯುಕೇಶ್ ಕುಮಾರ್, ಮೈಸೂರು ಮಹಾನಗರ ಪಾಲಿಕೆ ಅಯುಕ್ತರಾದ ತನ್ವಿರ್ ಆಶಿಫ್ ಮತ್ತಿತರರು ಉಪಸ್ಥಿತರಿದ್ದರು.

ವಿರೋಧ ವ್ಯಕ್ತಪಡಿಸಿದ್ದ ಬಿಜೆಪಿ-ಸಂಘಪರಿವಾರ: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಿತ್ತು. ಬಾನು ಮುಷ್ತಾಕ್ ಅವರು ‘ಮುಸ್ಲಿಂ’ ಎಂಬ ಕಾರಣಕ್ಕೆ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಸಂಘಪರಿವಾರ ವಿರೋಧ ವ್ಯಕ್ತಪಡಿಸುವ ಮೂಲಕ ಇದನ್ನು ವಿವಾದವನ್ನಾಗಿ ಸೃಷ್ಟಿಸಲು ಪ್ರಯತ್ನಿಸಿತ್ತು. ಆದರೆ, ಇದ್ಯಾವುದಕ್ಕೂ ಜಗ್ಗದ ಸಿದ್ದರಾಮಯ್ಯ ಕಾಂಗ್ರೆಸ್‌ ಸರ್ಕಾರ, ಅಧಿಕೃತವಾಗಿ ಮೈಸೂರು ಜಿಲ್ಲಾಡಳಿತದ ಮೂಲಕ ಬುಧವಾರ ಆಹ್ವಾನ ನೀಡಿದೆ.

Megha
the authorMegha

Leave a Reply

error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ