ನಾಲ್ಕೂ ಸಾರಿಗೆ ನಿಗಮಗಳಲ್ಲಿ ಡ್ಯೂಟಿ ಮುಗಿಸಿ ಬಂದ ಕಂಡಕ್ಟರ್ಗಳು ಘಟಕದಲ್ಲಿ ಸಹಿ ಪಡೆದು ಹಣ ಪಾವತಿಸಬೇಕೆಂಬ ನಿಯಮವಿಲ್ಲ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಘಟಕಗಳಲ್ಲಿ ನಿರ್ವಾಹಕರು ಕರ್ತವ್ಯ ಮುಗಿಸಿ ಬಂದಾಗ ಘಟಕ ವ್ಯವಸ್ಥಾಪಕರು ಹಾಗೂ ಎಟಿಎಸ್ ಮತ್ತು ಎಟಿಐ ಇವರಿಂದ ಮಾರ್ಗ ಪ್ರತಿಯ ಮೇಲೆ ಸಹಿ ಹಾಕಿಸಿಕೊಂಡ ಬಳಿಕ ಲೆಕ್ಕಪತ್ರ ಶಾಖೆಯಲ್ಲಿ ಹಣ ಸಂದಾಯ ಮಾಡಬಾರದೆಂಬ ನಿಯಮವಿಲ್ಲ ಎಂದು ಸಾರಿಗೆ ಕೇಂದ್ರ ಕಚೇರಿಯ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ತಿಳಿಸಿದ್ದಾರೆ.
4 ಸಾರಿಗೆ ನಿಗಮಗಳ ಬಹುತೇಕ ಎಲ್ಲ ಘಟಕಗಳಲ್ಲೂ ನಿರ್ವಾಹಕರು ಕರ್ತವ್ಯ ಮುಗಿಸಿ ಬಂದಾಗ ಘಟಕ ವ್ಯವಸ್ಥಾಪಕರು ಅಥವಾ ಎಟಿಎಸ್ ಅಥವಾ ಎಟಿಐ ಇವರಿಂದ ಮಾರ್ಗ ಪ್ರತಿಯ ಮೇಲೆ ಸಹಿ ಹಾಕಿಸಿಕೊಂಡ ಬಳಿಕ ಕಂಡಕ್ಟರ್ಗಳು ಲೆಕ್ಕಪತ್ರ ಶಾಖೆಯಲ್ಲಿ ಹಣ ಪಾವತಿ ಮಾಡಬೇಕು ಎಂದು ನಿಯಮಬಾಹಿರ ನಡೆಯನ್ನು ಅಧಿಕಾರಿಗಳು ಅನುಸರಿಸುತ್ತಿದ್ದಾರೆ.
ಒಂದು ಈ ಮೂವರಲ್ಲಿ ಯಾರಾದರೊಬ್ಬರಿಂದ ಸಹಿ ಮಾಡಿಸಿಲ್ಲ ಎಂದರೆ ಅಂಥ ನೌಕರರನ್ನು ಆರೋಪಿಯ ಸ್ಥಾನದಲ್ಲಿ ನೋಡುವುದಲ್ಲದೆ, ಘಟಕದಲ್ಲಿ ಅಧಿಕಾರಿಗಳು ದರ್ಪಮೆರೆಯುತ್ತಿದ್ದಾರೆ. ಹೀಗಾಗಿ ಈ ಸಂಬಂಧ ಕಳೆದ 2022ರ ಜುಲೈ 29ರಂದೆ ಆರ್ಟಿಐ ಅಡಿ ಅರ್ಜಿ ಹಾಕಿ ಮಾತಿಪಡೆದುಕೊಂಡಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿಯ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ತಾವು ಕೋರಿರುವ ಮಾಹಿತಿಗೆ ಸಂಬಂಧಿಸಿದಂತೆ ಈ ಕಚೇರಿಯಲ್ಲಿ ನಿರ್ದಿಷ್ಟವಾದ ಮಾಹಿತಿ/ ದಾಖಲಾತಿ ಇಲ್ಲ ಎಂದು ಲಿಖಿತವಾಗಿ ತಿಳಿಸಿದ್ದಾರೆ. ಆದರೂ ಈಗಲೂ KSRTC, BMTC, KKRTC ಹಾಗೂ NWKRTC ಸಂಸ್ಥೆಯ ಕೆಲ ಡಿಪೋಗಳಲ್ಲಿ ನಮ್ಮ ಸಹಿ ಮಾಡಿಸಿಕೊಂಡೇ ಹೋಗಬೇಕು ಎಂದು ನೌಕರರಿಗೆ ದಮ್ಕಿಹಾಕುತ್ತಿದ್ದಾರೆ.
ಕೇಂದ್ರ ಕಚೇರಿಯ ಸಾರ್ವಜನಿಕ ಮಾಹಿತಿ ಅಧಿಕಾರಿ ಕೊಡ ಮಾಹಿತಿ ಏನು?: ಈ ಮೇಲಿನ ವಿಷಯ ಹಾಗೂ ಉಲ್ಲೇಖಗಳಿಗೆ ಸಂಬಂಧಿಸಿದಂತೆ, ಮಾಹಿತಿ ಹಕ್ಕು ಅಧಿನಿಯಮ-2005 ರನ್ವಯ ತಾವು ಕೋರಿರುವ ಮಾಹಿತಿಗೆ ಸಂಬಂಧಿಸಿದಂತೆ ಸಂಚಾರ (ಕಾರ್ಯಾಚರಣೆ) ಇಲಾಖೆಗೆ ಸಂಬಂಧಿಸಿದ ಮಾಹಿತಿಯನ್ನು ಈ ಕೆಳಕಂಡಂತೆ ನೀಡಲಾಗಿದೆ.
ಕೋರಿರುವ ಮಾಹಿತಿ: KSRTC ಸಂಸ್ಥೆಯ ಎಲ್ಲ ಘಟಕಗಳಲ್ಲಿ ನಿರ್ವಾಹಕರು ಕರ್ತವ್ಯ ಮುಗಿಸಿ ಹಿಂದಿರುಗಿ ಬಂದಾಗ “ಇಪಿಕೆಎಂ-25 ರೂಪಾಯಿ ಕಡಿಮೆ ಬಂದ ನಿರ್ವಾಹಕರಿಗೆ, ಘಟಕದಲ್ಲಿ ಇಟ್ಟಿರುವ ಒಂದು ಪುಸ್ತಕದಲ್ಲಿ ಈ ವಿಷಯವಾಗಿ ಸಾರಾಂಶ ಬರೆದು, ಘಟಕ ವ್ಯವಸ್ಥಾಪಕರು ಹಾಗೂ ಎಟಿಎಸ್ ಮತ್ತು ಎಟಿಐ ಬರುವವರೆಗೂ ಕಾಯ್ದು ಮಾರ್ಗ ಪ್ರತಿಯ ಮೇಲೆ ಅವರ ಸಹಿಯನ್ನು ಹಾಕಿಸಿಕೊಂಡು, ಲೆಕ್ಕಪತ್ರ ಶಾಖೆಯಲ್ಲಿ ಈ ಅಧಿಕಾರಿಗಳ ಸಹಿ ಇಲ್ಲದೆ ಹಣವನ್ನು ಸಂದಾಯ ಮಾಡಬಾರದೆಂಬ ನಿಯಮವನ್ನು ಸರ್ಕಾರದಿಂದ ಅಥವಾ ಸಾರಿಗೆ ಸಂಸ್ಥೆಯಿಂದ ಅಥವಾ ಘಟಕ ವ್ಯವಸ್ಥಾಪಕರಿಂದ ಹೊರಡಿಸಿರುವ ಸುತ್ತೋಲೆಯ ಮಾಹಿತಿಯನ್ನು ಮಾಹಿತಿ ಹಕ್ಕು ಅಧಿನಿಯಮ 2005ರ ಪ್ರಕಾರ ಮಾಹಿತಿ ನೀಡಬೇಕಾಗಿ ಮನವಿ.

ಒದಗಿಸಲಾದ ಮಾಹಿತಿ: ಕೋರಿರುವ ಮಾಹಿತಿಗೆ ಸಂಬಂಧಿಸಿದಂತೆ ಈ ಕಚೇರಿಯಲ್ಲಿ (ಶಾಂತಿನಗರದಲ್ಲಿರುವ KSRTC ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ) ನಿರ್ದಿಷ್ಟವಾದ ಮಾಹಿತಿ/ ದಾಖಲಾತಿ ಇರುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಅಲ್ಲದೆ ಈ ಮೇಲ್ಕಂಡ ಮಾಹಿತಿ ಬಗ್ಗೆ ಭಾದಿತರಾದಲ್ಲಿ, ಮಾಹಿತಿ ಹಕ್ಕು ಅಧಿನಿಯಮ-2005ರ ನಿಯಮ 19(1) ರನ್ವಯ, ಈ ಪತ್ರ ತಲುಪಿದ 30 ದಿನಗಳೊಳಗಾಗಿ ಮೇಲ್ಮನವಿ ಪ್ರಾಧಿಕಾರಸ್ಥರಿಗೆ ಅಂದರೆ ಉಪ ಮುಖ್ಯ ಸಂಚಾರ ವ್ಯವಸ್ಥಾಪಕ (ಕಾ) ಅವರಿಗೆ ಹಾಗೂ ಒಂದನೇ ಅಪೀಲು ಪ್ರಾಧಿಕಾರಿಗಳು, ಕರಾರಸಾ ನಿಮಗ, ಕೇಂದ್ರ ಕಚೇರಿ, ಸಾರಿಗೆ ಭವನ, ಬೆಂಗಳೂರು-560027 ಅವರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ ಎಂಬ ಅಂಶವನ್ನು ತಮ್ಮ ಗಮನಕ್ಕೆ ತರಲಾಗಿದೆ ಎಂದೂ ಕೂಡ (ಸಾರ್ವಜನಿಕ ಮಾಹಿತಿ ಅಧಿಕಾರಿ/ ವಿಭಾಗೀಯ ಸಂಚಲನಾಧಿಕಾರಿ ಸಂಚಾರ (ಕಾರ್ಯಾಚರಣೆ) ಇಲಾಖೆ) ತಿಳಿಸಿದ್ದಾರೆ.
Related


You Might Also Like
ಜಕ್ಕೂರು ರೈಲ್ವೆ ಮೇಲ್ಸೇತುವೆ 3 ತಿಂಗಳಲ್ಲಿ ಪೂರ್ಣಗೊಳಿಸಿ: ಗುತ್ತಿಗೆದಾರರಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ತಾಕೀತು
3.5 ಟನ್ ಪ್ಲಾಸ್ಟಿಕ್ ವಶಪಡಿಸಿಕೊಂಡು 1.5 ಲಕ್ಷ ರೂ. ವಿಧಿಸಲಾಗಿದೆ. ಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಜಕ್ಕೂರು ರೈಲ್ವೆ ಮೇಲ್ಸೇತುವೆಯನ್ನು 3 ತಿಂಗಳಲ್ಲಿ ಪೂರ್ಣಗೊಳಿಸಲು...
ಯುವಜನತೆ ಬದುಕಿನ ಶಿಸ್ತಿಗೆ ಕ್ರೀಡೆ ಮುಖ್ಯ: ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಸಚಿವ ಮುನಿಯಪ್ಪ ಅಭಿಮತ
ಬೆಂ.ಗ್ರಾಂ.: ಯುವ ಜನತೆ ಬದುಕಿನಲ್ಲಿ ಶಿಸ್ತು ಅಳವಡಿಸಿಕೊಳ್ಳಲು ಶಿಕ್ಷಣದ ಜತೆಗೆ ಕ್ರೀಡೆಯು ಮುಖ್ಯ. ಕ್ರೀಡೆ ಎಂಬುದು ಕೇವಲ ಮನರಂಜನೆಗೆ ಮಾತ್ರ ಸೀಮಿತವಾಗಿರದೆ ಮನುಷ್ಯನ ಮಾನಸಿಕ ಹಾಗೂ ಸಾಂಸ್ಕೃತಿಕ...
ಎಸ್ಸೆಸ್ಸೆಲ್ಸಿ-ಪಿಯುಸಿಯಲ್ಲಿ ಜಿಲ್ಲೆಯ ಮೊದಲ ಸ್ಥಾನಕ್ಕೆ ಏರಿಸಿ: ಸಚಿವ ಮುನಿಯಪ್ಪ ಕರೆ
ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ l ಜಿಲ್ಲೆಯ101 ಪಂಚಾಯಿತಿಗಳಲ್ಲಿ ಮಾದರಿ ಶಾಲೆ l ಗುಣಮಟ್ಟದ ಶಿಕ್ಷಣಕ್ಕೆ ಮೊದಲ ಆದ್ಯತೆ ಬೆಂಗಳೂರು ಗ್ರಾಮಾಂತರ: ಮುಂಬರುವ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ...
ಕನಿಷ್ಠ ಪಿಂಚಣಿ 7500 ರೂ. ಪಡೆಯಲು EPS ಪಿಂಚಣಿದಾರರ ನಿರಂತರ ಹೋರಾಟ- 92ನೇ ಮಾಸಿಕ ಸಭೆಯಲ್ಲಿ ಹಲವು ನಿರ್ಧಾರಗಳು
ಬೆಂಗಳೂರು: ಇಪಿಎಸ್ ಪಿಂಚಣಿದಾರರ 92ನೇ ಮಾಸಿಕ ಸಭೆ ಲಾಲ್ಬಾಗ್ ಆವರಣದಲ್ಲಿ ಯಶಸ್ವಿಯಾಗಿ ಜರುಗಿತು ಎಂದು ಬಿಎಂಟಿಸಿ & ಕೆಎಸ್ಆರ್ಟಿಸಿ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ....
BMTC ಸಂಸ್ಥೆಯಿಂದ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕೊಡಿ: ವ್ಯವಸ್ಥಾಪಕ ನಿರ್ದೇಶಕರಿಗೆ ಟಿಸಿ ಶ್ರೀನಿವಾಸ್ ಮನವಿ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ಈ ಹಿಂದಿನಿಂದಲೂ ಸ್ವಾತಂತ್ರ್ಯೋತ್ಸವ, ಕನ್ನಡ ರಾಜ್ಯೋತ್ಸವದಂದು ಕೊಡಲಾಗುತ್ತಿತ್ತು ಆದರೆ, ಇತ್ತೀಚೆಗೆ ನಿಲ್ಲಿಸಿರುವುದು ಸರಿಯಾದ ಕ್ರಮವಲ್ಲ...
KKRTC ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 3 ವರ್ಷ ಜೈಲು, 6 ಸಾವಿರ ರೂ. ದಂಡ ವಿಧಿಸಿದ ಕೋರ್ಟ್ ಮಹತ್ವದ ತೀರ್ಪು
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕರ ಮೇಲೆ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಪ್ರಕರಣದಲ್ಲಿ ಅಪರಾಧಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ...
ಮೆಜೆಸ್ಟಿಕ್ ಬಳಿ ಮೊಬೈಲ್ ಶೌಚಾಲಯ ವ್ಯವಸ್ಥೆ: ಆಯುಕ್ತ ರಾಜೇಂದ್ರ ಚೋಳನ್
ಬೆಂಗಳೂರು: ಮೆಜೆಸ್ಟಿಕ್ ಬಳಿ ಪಾದಚಾರಿ ಮಾರ್ಗಗಳಲ್ಲಿ ಸಾರ್ವಜನಿಕರು ಮೂತ್ರ ವಿಸರ್ಜನೆ ಮಾಡುವುದನ್ನು ನಿಯಂತ್ರಿಸುವ ಸಲುವಾಗಿ ಮೊಬೈಲ್ ಶೌಚಾಲಯಗಳ ವ್ಯವಸ್ಥೆ ಮಾಡಲು ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ...
ಸರ್ಕಾರಿ ಬಸ್ ಚಾಲಕ-ನಿರ್ವಾಹಕರು ಎಲ್ಲದಕ್ಕೂ ಹೊಣೆಯಲ್ಲ: ಸುಜಯ ಆರ್.ಕಣ್ಣೂರ
ಬಿಎಂಟಿಸಿ ವಿರುದ್ಧ 10 ಸಾವಿರ ದೂರು' ಮುಖಪುಟ ವರದಿ ತಿಳಿಸುವ ಸಲುವಾಗಿ ಈ ಬರಹ. ನಾನು ಬಿಂಎಂಟಿಸಿ ಬಸ್ನಲ್ಲಿ 35 ವರ್ಷಗಳಿಂದ ಪ್ರಯಾಣಿಸುತ್ತಿದ್ದೇನೆ. ಇದರಲ್ಲಿ ಯಾರದು ತಪ್ಪು,...
BMTC ಬಸ್ ಚಾಲಕನ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ಖಂಡಿಸಿ ಚಾಲಕರ ಪ್ರತಿಭಟನೆ
ಬೆಂಗಳೂರು: ಕಾರಿಗೆ ಸೈಡ್ ಬಿಡಲಿಲ್ಲ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ಚಾಲಕನ ಮೇಲೆ ಜಿಗಣಿ ಠಾಣೆಯ ಪೊಲೀಸ್ ಸಿಬ್ಬಂದಿಯೊಬ್ಬರು ಹಲ್ಲೆ ಮಾಡಿರುವ ಘಟನೆ ನಡೆದಿದೆ....