NEWSನಮ್ಮರಾಜ್ಯ

ಕೊರೊನಾ ವಾರಿಯರ್ಸ್‌ ಸೇವೆ ಶ್ಲಾಘನೀಯ

ಚಿಕ್ಕಬಳ್ಳಾಪುರದ ಕೃತಜ್ಞತಾ ಕಾರ್ಯಕ್ರಮದಲ್ಲಿ ಸಚಿವ ಡಾ.ಕೆ ಸುಧಾಕರ್ ಹೇಳಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಚಿಕ್ಕಬಳ್ಳಾಪುರ: ಇಡೀ ವಿಶ್ವವೇ ಎದುರಿಸುತ್ತಿರುವ ಕೊರೊನಾ ವೈರಸ್‌ಗೆ ನಮ್ಮ ರಾಜ್ಯದಲ್ಲಿ ಉತ್ತಮ ರೀತಿಯಲ್ಲಿ ನಿಯಂತ್ರಣವೇರಲು ರಾತ್ರಿ ಹಗಲು ದುಡಿದಂತಹ ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ, ಪೊಲೀಸ್ ಇಲಾಖೆ, ವೈದ್ಯರು, ನರ್ಸ್‌ಗಳು, ಪೊಲೀಸರು, ಪೌರಕಾರ್ಮಿಕರು, ಆಶಾಕಾರ್ಯಕರ್ತರು ಹಾಗೂ ಪ್ರತಿಯೊಬ್ಬ ನಾಗರಿಕನೂ ಪ್ರಮುಖ ಪಾತ್ರವಹಿಸಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ  ಡಾ. ಕೆ.ಸುಧಾಕರ್ ತಿಳಿಸಿದರು.

ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಶನಿವಾರ ಆಯೋಜಿಸಲಾಗಿದ್ದ ಚಿಕ್ಕಬಳ್ಳಾಪುರ ನಗರದ ನಾಗರಿಕರಿಂದ ಕೊರೊನಾ ವಾರಿಯರ್ಸ್‌ಗಳಿಗೆ ಕೃತಜ್ಞತಾ ಕಾರ್ಯಕ್ರಮ  ಉದ್ಘಾಟಿಸಿ  ಮಾತನಾಡಿದರು..

ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ತಾಂಡದವಲಸೆ ಕಾರ್ಮಿಕರು ಮಹಾರಾಷ್ಟ್ರದಿಂದ 8 ಬಸ್ಸಿನ ಮೂಲಕ ಒಟ್ಟು 275 ಜನರನ್ನು ಬರಮಾಡಿಕೊಳ್ಳಲಾಗಿತ್ತು ಆದರೆ ಮಹಾರಾಷ್ಟç ಕಾರ್ಮಿಕರು ಹಾಗೂ ಜಿಲ್ಲೆಯ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 150 ದೃಢಪಟ್ಟಿದೆ. ಇವರೆಲ್ಲ ಅತೀ ಶೀಘ್ರದಲ್ಲೆ ಗುಣಮುಖರಾಗುತ್ತಾರೆ ಇನ್ನೂ ಕೆಲವು ದಿನಗಳಲ್ಲಿ ಜಿಲ್ಲೆಯನ್ನು ಕೊರೋನಾ ವೈರಸ್ ಮುಕ್ತ ಜಿಲ್ಲೆಯನ್ನಾಗಿ ನೋಡಬಹುದಾಗಿದೆ ಹಾಗೂ ಜಲ್ಲೆಯನ್ನು ಹಸಿರು ವಲಯದಲ್ಲಿ ಕಾಣಬಹುದಾಗಿದೆ ಎಂದರು.

ಪ್ರತಿಯೊಬ್ಬ ವಾರಿಯರ್ಸ್‌ಗಳ ಕೂಡ ದೇಶದ ಸೈನಿಕನಂತೆ ಕೊರೋನಾ ವೈರೆಸ್ ವಿರುದ್ದ ಹೋರಾಡಿದ್ದಾರೆ, ಸರ್ಕಾರವು 4 ತಿಂಗಳ ಲಾಕ್‌ಡೌನ್ ಪರಿಸ್ಥಿತಿಯಲ್ಲಿ ದೇಶ ರಾಜ್ಯ ಆರ್ಥಿಕ ಕಷ್ಟಕರ ಪರಿಸ್ಥಿತಿಯಲ್ಲಿ ಜನರಿಗೆ ಉಚಿತವಾಗಿ ಆಹಾರ ಧಾನ್ಯಗಳು ಹಾಗೂ ತರಕಾರಿಗಳನ್ನು ನೀಡಲಾಗಿದೆ. ಅದೇ ರೀತಿ ಹಲವಾರು ಸ್ವಯಂಸೇವಕರು ಸಂಘ ಸಂಸ್ಥೆಗಳು ಇಂತಹ ಕಷ್ಟಕರ ಸಮಯದಲ್ಲಿ ನಗರ ಗ್ರಾಮೀಣ ಪ್ರದೇಶಗಳಲ್ಲಿ ಉಚಿತವಾಗಿ ಆಹಾರ ಕೀಟ್‌ಗಳನ್ನು ನೀಡುತ್ತಿರುವವರಿಗೆ ಅಭಿನಂದಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಜಿಲ್ಲಾಧಿಕಾರಿ ಆರ್. ಲತಾ ಮಾತನಾಡಿ ಜಿಲ್ಲೆಯಲ್ಲಿ ಮಾರ್ಚ್ 20 ರಂದು ಕೊರೋನಾ ಮೊದಲ ಪ್ರಕರಣವು ದಾಖಲಾಯಿತು ಮೂರು ತಿಂಗಳಲ್ಲಿ 150 ಪ್ರಕರಣಗಳು ಕಂಡು ಬಂದು 90 ಜನ ಚೇತರಿಸಿಕೊಂಡು ಮೂರು ಜನರು ಸಾವನ್ನಪ್ಪಿ ಉಳಿದ ಜನರು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್   ಮಾತನಾಡಿ, ನಮ್ಮ ಜಿಲ್ಲೆಯಲ್ಲಿ ಎಲ್ಲಾ ಇಲಾಖೆಗಳಲ್ಲಿ ಸಮನ್ವಯತೆ ಇದೆ. ನಾವು ನಮ್ಮ ದಿನ ನಿತ್ಯದ ಜೀವನ ಶೈಲಿಯನ್ನು ಬದಲಾವಣೆಯನ್ನು ಮಾಡಿಕೊಳ್ಳಬೇಕು ನಮ್ಮ ಪೂರ್ವಿಕರು ಮಾಡುತ್ತಿದ್ದ ಪದ್ದತಿಗಳನ್ನು ನಾವು ಅನುಸರಿಸಬೇಕಾಗುತ್ತದೆ ಎಂದರು .

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ