CRIMENEWSನಮ್ಮರಾಜ್ಯ

ಬಸ್ಸಿನಲ್ಲಿ ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ ಚಾಲಕನ ಬಟ್ಟೆ ಬಿಚ್ಚಿಸಿ ಥಳಿಸಿದ ತಾಯಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಚಾಲಕ ಬಸ್ಸಿನಲ್ಲಿ ನಮ್ಮ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ತಾಯಿಯೊಬ್ಬಳು ಚಾಲಕನ ಬಟ್ಟೆ ಬಿಚ್ಚಿಸಿ ಥಳಿಸಿರುವ ಘಟನೆ ನಗರದ ಬಸವೇಶ್ವರ ಸರ್ಕಲ್ ಬಳಿ ನಡೆದಿದೆ.

ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಸ್ಲೀಪರ್‌ ಬಸ್ಸಿನಲ್ಲಿ 15 ವರ್ಷದ ಬಾಲಕಿ ಇದ್ದು, ಆಕೆ ರಾತ್ರಿ ಮೊಬೈಲಿನ ಚಾರ್ಜ್‌ ಖಾಲಿಯಾಗಿದ್ದರಿಂದ ಚಾಲಕನ ಬಳಿ ಚಾರ್ಜ್‌ ಹಾಕುವಂತೆ ಮನವಿ ಮಾಡಿದ್ದಾಳೆ.

ಆ ವೇಳೆ ಚಾರ್ಜ್‌ಗೆ ಹಾಕಿದ್ದು, ಸ್ವಲ್ಪ ಸಮಯದ ಬಳಿಕ ಬಾಲಕಿ ಮೊಬೈಲ್‌ ಕೊಡುವಂತೆ ಕೇಳಿದ್ದಾಳೆ. ಆಗ ಚಾಲಕ ಆರೀಫ್‌ ಮುತ್ತು ಕೊಟ್ಟರೆ ಮಾತ್ರ ನೀಡುವುದಾಗಿ ಹೇಳಿದ್ದಾನೆ. ಅಷ್ಟೇ ಅಲ್ಲದೇ ಮಲಗಿದ್ದಾಗ ಸೀಟ್‌ ಬಳಿ ಬಂದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅದಕ್ಕೆ ವಿರೋಧ ವ್ಯಕ್ತಪಡಿಸಿದರೂ ರಾತ್ರಿ ಪದೇಪದೆ ಬಂದು ಲೈಂಗಿಕ ಕಿರುಕುಳ ನೀಡಿದ್ದಾನೆ.

ಈ ವೇಳೆ ಈತನ ಕಿರುಕುಳ ತಾಳಲಾರದೇ ಬಾಲಕಿ ಕರೆ ತನ್ನ ಪಾಲಕರಿಗೆ ಕರೆ ಮಾಡಿದ್ದು, ತಾಯಿ ಬಳಿ ನಡೆದ ಘಟನೆಯನ್ನು ವಿವರಿಸಿದ್ದಾಳೆ. ಇದರಿಂದ ಗಾಬರಿಗೊಂಡ ತಾಯಿ ತನ್ನ ಸಹೋದರನೊಂದಿಗೆ ಇಂದು ಬೆಳಗ್ಗೆ ಬಸವೇಶ್ವರನಗರದ ಸರ್ಕಲ್‌ ಬಳಿಕ ಬಂದು ಕಾದುಕುಳಿತ್ತಿದ್ದರು.

ಇನ್ನು ಬಸ್‌ ಬಸವೇಶ್ವರನಗರಕ್ಕೆ ಬರುತ್ತಿದ್ದಂತೆ ಚಾಲಕ ಆರೀಫ್‌ನನ್ನು ಕೆಳಗೆ ಇಳಿಸಿ ತಾಯಿ ಮತ್ತು ಆಕೆಯ ಸಹೋದರ ಪ್ರಶ್ನಿಸಿದ್ದಾರೆ. ಈ ವೇಳೆ ಆರೀಫ್‌ ಕೈ ಮುಗಿದು ತಪ್ಪಾಗಿದೆ ಎಂದು ಹೇಳಿದ್ದಾನೆ. ನಂತರ ಆತನ ಬಟ್ಟೆಯನ್ನು ಬಿಚ್ಚಿಸಿ ಚೆನ್ನಾಗಿ ಥಳಿಸಿದ್ದಾರೆ.

ಆತ ಧರಿಸಿದ್ದ ಎಲ್ಲ ಬಟ್ಟೆಯನ್ನು ತೆಗೆದು ಬೆತ್ತಲೆಗೊಳಿಸಲು ಮುಂದಾದಾಗ ಪೊಲೀಸರು ಸ್ಥಳಕ್ಕೆ ಆಗಮಿಸಿ ತಾಯಿಯನ್ನು ತಡೆದು ಆತನನ್ನು ವಶಕ್ಕೆ ಪಡೆದಿದ್ದಾರೆ.

ಈ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಬಾಲಕಿಯ ತಾಯಿ, ಹೈದರಾಬಾದ್‌ನಲ್ಲಿರುವ ನನ್ನ ಮಗಳ ಮನೆಗೆ ಇವಳು ಹೋಗಿದ್ದಳು. ರಾತ್ರಿ ಮಗಳು ಫೋನ್‌ ಮಾಡಿ ತಂಗಿಯನ್ನು ಬಸ್ಸಿನಲ್ಲಿ ಹತ್ತಿಸಿದ್ದೇನೆ ಎಂದು ಹೇಳಿದ್ದಳು. ಆದರೆ ಈತ ಮಗಳಿಗೆ ಬಸ್ಸಿನಲ್ಲಿ ಕೊಡಬಾರದ ಕಿರುಕುಳ ನೀಡಿದ್ದಾನೆ. ಅದನ್ನು ಇಲ್ಲಿ ಹೇಳಲು ಅಸಹ್ಯವಾಗುತ್ತಿದೆ. ಪೊಲೀಸರು ಏನು ಕ್ರಮ ಕೈಗೊಳ್ಳುತ್ತಾರೋ ಗೊತ್ತಿಲ್ಲ. ನಾನು ಮಾತ್ರ ಈತನನ್ನು ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.

Megha
the authorMegha

Leave a Reply

error: Content is protected !!
Latest news
ಪವಿತ್ರ ರಂಜಾನ್ ಹಬ್ಬದ ಸಂದೇಶ ಮನುಕುಲಕ್ಕೆ‌ ಮಾರ್ಗದರ್ಶನ: ಸಿಎಂ ರಾಜ್ಯ ಉಗ್ರಾಣ ನಿಗಮದ ಎಂಡಿ ಆತ್ಮಹತ್ಯೆ ಪ್ರಕರಣ: ಸಾರಿಗೆ ಸಚಿವ ರಾಜೀನಾಮೆ! KKRTC: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಸ್‌ ಪಲ್ಟಿ- 8ಮಂದಿಗೆ ಗಾಯ BMTC: ಘಟಕ 22ರಲ್ಲಿ ಹ್ಯಾಂಡ್ ಬ್ರೇಕ್ ಹಾಕದೇ ನಿಲ್ಲಿಸಿದ್ದ ಬಸ್‌ ಚಲಿಸಿ ಸಂಚಾರ ನಿಯಂತ್ರಕರ ಕಚೇರಿ, ಬೈಕ್‌ಗಳಿಗೆ ಡಿಕ್... KSRTCಶಿರಾ: ಬರಗೂರು ಸಮೀಪ ಬಸ್‌ಗೆ ಬೈಕ್ ಡಿಕ್ಕಿ: ಇಬ್ಬರು ಸವಾರರ ಸಾವು ಬೆಂಗಳೂರಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರಿ ಬಸ್‌ ಬ್ರೇಕ್ ಫೇಲಾಗಿ ಬೈಕ್, ಪಿಕಪ್ ವ್ಯಾನ್‌ಗೆ ಡಿಕ್ಕಿ: ಗರ್ಭಿಣಿ, ಮಗು ಸೇರಿ ಎಂಟು ಮಂದಿ ಸಾವು BMTC: ಕುಡಿದು ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜತೆ ಚಾಲಕನ ರಂಪಾಟ ಆರೋಪ ನೌಕರರ ವರ್ಗಾವಣೆ ವಿಚಾರದಲ್ಲಿ ಸಿಎಂಒ ನೇರ ಹಸ್ತಕ್ಷೇಪಕ್ಕೆ ಹೈಕೋರ್ಟ್ ತೀವ್ರ ಆಕ್ಷೇಪ ಮಾಜಿ ಪ್ರಧಾನಿ ಎಚ್‌ಡಿಡಿ ಸಹೋದರಿ ಜವರಮ್ಮ ನಿಧನ