NEWSಕೃಷಿನಮ್ಮರಾಜ್ಯ

ಹುತಾತ್ಮರಾದವರ ಕುಟುಂಬಗಳಿಗೆ 50 ಲಕ್ಷ ರೂ. ಪರಿಹಾರ: ಸಚಿವ ಈಶ್ವರ್ ಖಂಡ್ರೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾಡುಗಳ್ಳ ವೀರಪ್ಪನ್ ವಿರುದ್ಧ ಕಾರ್ಯಾಚರಣೆ, ಕಳ್ಳಬೇಟೆಗಾರರ ಹತ್ತಿಕ್ಕುವ ವೇಳೆ, ಕಾಡ್ಗಿಚ್ಚು ನಂದಿಸುವ ವೇಳೆ, ಮಾನವ – ಪ್ರಾಣಿಗಳ ಸಂಘರ್ಷದ ವೇಳೆ ಬಲಿಯಾದವರಿಗೆ 50 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಮಲ್ಲೇಶ್ವರಂನ ಅರಣ್ಯ ಭವನದಲ್ಲಿ ಹುತಾತ್ಮರ ದಿನಾಚರಣೆ (National Forest Martyrs Day) ಕಾರ್ಯಕ್ರಮದಲ್ಲಿ ಮಾತನಾಡಿದರು.

ವೀರಪ್ಪನ್ ವಿರುದ್ಧ ಕಾರ್ಯಾಚರಣೆ, ಕಳ್ಳಬೇಟೆಗಾರರ ಹತ್ತಿಕ್ಕುವ ವೇಳೆ, ಕಾಡ್ಗಿಚ್ಚು ನಂದಿಸುವ ವೇಳೆ, ಮಾನವ – ಪ್ರಾಣಿಗಳ ಸಂಘರ್ಷದ ವೇಳೆ 62 ಮಂದಿ ಹುತಾತ್ಮರಾಗಿದ್ದು,ಈ ಹುತಾತ್ಮರಾದವರ ಕುಟುಂಬಗಳಿಗೆ 50 ಲಕ್ಷ ರೂ. ಪರಿಹಾರ ನೀಡಲಿದ್ದೇವೆ ಎಂದರು.

ಇನ್ನು ಈಗ ಹವಾಮಾನ ಬದಲಾವಣೆ ದೊಡ್ಡ ಮಟ್ಟದ ಸಮಸ್ಯೆಯಾಗುತ್ತಿದೆ. ಏಕಾಏಕಿ ಮೇಘಸ್ಫೋಟ, ಅತಿಯಾದ ಮಳೆ ಬರುತ್ತಿದೆ. ಮನುಕುಲವೇ ನಾಶವಾಗುವ ಪರಿಸ್ಥಿತಿ ಉಂಟಾಗುತ್ತಿದೆ. ಕರ್ನಾಟಕವೂ ಕೂಡ ಡೇಂಜರ್ ಝೋನ್‌ನಲ್ಲಿದೆ. ಭೂ ಕುಸಿತ ಸಂಭವಿಸುತ್ತಿದೆ. ಅರಣ್ಯ ಸಂಪತ್ತನ್ನು ಉಳಿಸೋದು ಮಾತ್ರ ಇದಕ್ಕೆ ಪರಿಹಾರ ಎಂದರು.

ರಾಜ್ಯದಲ್ಲಿ ಸಂಪತ್ಭರಿತ ಅರಣ್ಯವಿದೆ. ಪಶ್ಚಿಮ ಘಟ್ಟದಲ್ಲಿ ವಿವಿಧ ಪ್ರಭೇದಗಳ ಜೀವ ವೈವಿಧ್ಯ ತಾಣಗಳು ಇವೆ. ಮಳೆ ಮಾರುತವನ್ನು ಬದಲಾವಣೆ ಮಾಡಿ, ಮಳೆಯನ್ನು ತರಿಸುವ ಶಕ್ತಿ ಪಶ್ಚಿಮ ಘಟ್ಟಗಳಿಗೆ ಇದೆ. ಆದರೆ ಇಲ್ಲಿ 2 ಲಕ್ಷ ಎಕರೆ ಭೂಮಿಯ ಒತ್ತುವರಿಯಾಗಿದೆ. ಮೂವತ್ತು- ನಲವತ್ತು ಸಾವಿರ ಎಕರೆ ಭೂಮಿಯನ್ನು ಮರುವಶಪಡಿಸಿಕೊಂಡು ಸಂರಕ್ಷಿತ ತಾಣ ಅಂತಾ ಘೋಷಿಸಿದ್ದೇವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಐದು ಹುಲಿಗಳು ಮೃತಪಟ್ಟಿದ್ದು ಬಹಳ ನೋವಾಗಿತ್ತು. ಸಿಎಂ ಕೂಡ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದರು. ಮಾನವ ಹಾಗೂ ವನ್ಯಜೀವಿಗಳ ಸಂಘರ್ಷ ಹೆಚ್ಚಾಗಿದೆ. ಆನೆಗಳ ಸಂಖ್ಯೆಯಲ್ಲಿ ಕರ್ನಾಟಕ ನಂಬರ್ 1 ಸ್ಥಾನದಲ್ಲಿದೆ. ಹುಲಿಗಳ ಸಂಖ್ಯೆಯಲ್ಲಿ ಕರ್ನಾಟಕ ದೇಶದಲ್ಲಿ 2ನೇ ಸ್ಥಾನ ಪಡೆದುಕೊಂಡಿದೆ. ಪ್ರಾಣಿಗಳ ಸಂಖ್ಯೆ ಹೆಚ್ಚಾಗಿದೆ, ಆದರೆ ಅರಣ್ಯ ಭೂಮಿ ಕಡಿಮೆ ಇದೆ. ಹೀಗಾಗಿ ಈ ವ್ಯವಸ್ಥೆ ಬಗ್ಗೆಯೂ ಅಧ್ಯಯನ ಮಾಡುತ್ತಿದ್ದೇವೆ ಎಂದು ತಿಳಿಸಿದರು.

Megha
the authorMegha

Leave a Reply

error: Content is protected !!
Latest news
ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತರಿಗೆ 6 ಕೋಟಿ ರೂ. ಭಾರಿ ನಗದು ಬಹುಮಾನ: ಕ್ರೀಡಾಪಟುಗಳ ಬದುಕಿಗೆ ಭರವಸೆ ನೀಡಿದ ಸಿಎಂ BMTC: ಮಹಿಳಾ ಕಂಡಕ್ಟರ್‌ಗಳಿಗೆ ಶೇ.33ರಷ್ಟು ಮುಂಬಡ್ತಿ ಮೀಸಲಾತಿ ಅಸಾಧ್ಯ- ಸಂಸ್ಥೆ ನಿಯಮದಲ್ಲೂ ಇಲ್ಲ ಅವಕಾಶ ಎಂದ ಸಿಪಿಎ... ಶಕ್ತಿಯೋಜನೆಗಾಗಿ ರಾಜಸ್ಥಾನದ ಆಧಾರ್‌ ಕಾರ್ಡ್‌ಗೆ ಬೆಂಗಳೂರು ನಿವಾಸಿ ಎಂಬ ನಕಲಿ ಕಾರ್ಡ್‌ ಸೃಷ್ಟಿಸಿಕೊಂಡು ಮಹಿಳೆ ಓಡಾಟ! BMTC ಘಟಕ 29: ಡಿಪೋ ಆವರಣದಲ್ಲಿ ಎಲೆಕ್ಟ್ರಿಕ್ ಬಸ್ ಡಿಕ್ಕಿ- ಚಾಲಕನಿಗೆ ತೀವ್ರ ಗಾಯ ತಿ.ನರಸೀಪುರ: ಯುವಕನ ಕಿರುಕುಳದಿಂದ ಮದುವೆ ನಿಶ್ಚಯವಾಗಿದ್ದ ಯುವತಿ ಜತೆಗೆ ಅಪ್ಪಅಮ್ಮ ಆತ್ಮಹತ್ಯೆ ತಿ.ನರಸೀಪುರ: ವಿದ್ಯುತ್‌ ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ ತಹಸೀಲ್ದಾರ್‌ಗೆ ಮನವಿ ಚಾಲನೆಯಲ್ಲಿದ್ದ ಬಸ್‌ನ ಸ್ಟೇರಿಂಗ್‌ ಹಿಡಿದ ಕುಡುಕ- ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಬಸ್‌ ಡಿಕ್ಕಿ, 11 ಮಂದಿಗೆ ಗಂಭೀರ... KSRTC: ಶೇ.44 ರಷ್ಟು ಬಸ್‌ ಪ್ರಯಾಣ ದರ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಗೃಹಜ್ಯೋತಿಯಿಂದ ಸರ್ಕಾರಿ ನೌಕರರ ಹೊರಗಿಡಲು ಸರ್ಕಾರದ ಚಿಂತನೆ ಸರ್ಕಾರಿ ನೌಕರಿ ಮಹಿಳೆಯರಿಗೆ ಇನ್ನು ಮುಂದೆ ಸಿಗಲ್ವ ಶಕ್ತಿ ಯೋಜನೆಯ ಉಚಿತ ಪ್ರಯಾಣ?