NEWSನಮ್ಮರಾಜ್ಯ

ಜೂನ್‌ 29ರಂದು ವಿಧಾನ ಪರಿಷತ್‌ ಚುನಾವಣೆ: ಆಯೋಗ ಘೋಷಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ವೈರಸ್‌ ಪಿಡುಗಿನ ಮಧ್ಯೆಯೂ ಚುನಾವಣಾ ಆಯೋಗ ಜೂನ್‌ 29 ರಂದು ವಿಧಾನ ಪರಿಷತ್‌ ಚುನಾವಣೆಗೆ ನಡೆಸಲು ಘೋಷಣೆ ಮಾಡಿದೆ.

ಈ ಸಂಬಂಧ ಗುರುವಾರ (ಜೂನ್‌ 11) ಅಧಿಸೂಚನೆ ಹೊರಡಿಸಲಿದೆ. ಜೂನ್‌ 18 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. 19ರಂದು ನಾಮಪತ್ರಗಳ ಪರಿಶೀಲನೆ ಮತ್ತು ಜೂನ್‌ 22 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನ.

ಜೂನ್‌ 29ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು ಅಂದು ಸಂಜೆ 5 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಜೂನ್‌ 30ಕ್ಕೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಆಯೋಗ ತಿಳಿಸಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ವಿಧಾನ ಸಭಾ ಸದಸ್ಯರು ಆಯ್ಕೆ ಮಾಡಲಿರುವ ಪರಿಷತ್‌ನ ಏಳು ಸ್ಥಾನಗಳ ಅವಧಿ ಇದೇ ಜೂನ್‌ 30ಕ್ಕೆ  ಮುಗಿಯಲಿದ್ದು ಆ ಸ್ಥಾನಗಳ ಭರ್ತಿಗಾಗಿ  ಆಯೋಗ ಚುನಾವಣೆ ಘೋಷಿಸಿದೆ. ಆದರೆ ಪದವೀಧರರ  ಹಾಗೂ ಶಿಕ್ಷಕರ ಕ್ಷೇತ್ರದ ತಲಾ 2 ಸ್ಥಾನಗಳಿಗೆ ನಡೆಯಬೇಕಾಗಿದ್ದ ಚುನಾವಣೆಯನ್ನು ಮುಂದೂಡಿದೆ.

ಇನ್ನು ಕೊರೊನಾ ವೈರಸ್‌ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ  ವಹಿಸಲು ಹಿರಿಯ ಅಧಿಕಾರಿಯೊಬ್ಬರನ್ನು ನೇಮಕ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಆಯೋಗ ಸೂಚಿಸಿದೆ. ಈ ನಡುವೆ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಆಯೋಗ ವೀಕ್ಷಕರನ್ನು ನೇಮಿಸುವುದಾಗಿ ತಿಳಿಸಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ನಿವೃತ್ತಿ ಹೊಂದಲಿರುವವರು?
ಜೂನ್‌ 30ರಂದು ನಜೀರ್‌ ಅಹಮದ್‌, ಜಯಮ್ಮ, ಎಂ.ಸಿ. ವೇಣುಗೋಪಾಲ್‌, ಎನ್‌.ಎಸ್‌. ಬೋಸರಾಜು, ಎಚ್‌.ಎಂ. ರೇವಣ್ಣ, ಟಿ.ಎ.ಶರವಣ, ಡಿ.ಯು. ಮಲ್ಲಿಕಾರ್ಜುನ ನಿವೃತ್ತಿ ಹೊಂದಲಿದ್ದಾರೆ.

ಶಾಸಕರ ಸಂಖ್ಯಾಬಲದ ಆಧಾರದಲ್ಲಿ ಬಿಜೆಪಿ 3, ಕಾಂಗ್ರೆಸ್‌ 2 ಮತ್ತು ಜೆಡಿಎಸ್‌ 1 ಸ್ಥಾನವನ್ನು ಸುಲಭವಾಗಿ ಗೆದ್ದುಕೊಳ್ಳಲಿವೆ. 7ನೇ ಸ್ಥಾನಕ್ಕೆ ಅಗತ್ಯ ಸಂಖ್ಯಾ ಬಲ ಯಾವ ಪಕ್ಷದ ಬಳಿಯಲ್ಲೂ ಇಲ್ಲ. ಈ ಸ್ಥಾನಕ್ಕೆ ಪೈಪೋಟಿ ನಡೆಯುವ ಸಾಧ್ಯತೆ ಇದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Vijayapatha - ವಿಜಯಪಥ

Leave a Reply

error: Content is protected !!
LATEST
KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪ್ರಣಾಪಾಯದಿಂದ ಪತ್ನಿ ಪಾರು 600ರಿಂದ 800 ಮಂದಿ ಅಧಿಕಾರಿಗಳಿಗಾಗಿ 1.07 ಲಕ್ಷ ನೌಕರರಿಗೆ ಅನ್ಯಾಯ ಮಾಡಲು ಹೊರಟಿರುವುದು ನ್ಯಾಯವೇ? KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರಿಗೆ ಸಮಾನ ವೇತನ ಲಾಭವೋ-ನಷ್ಟವೋ..!?? ಹರಿಯಾಣದಲ್ಲಿ ಸಮಾವೇಶ: ಎಂಎಸ್‌ಪಿ ಖಾತ್ರಿ ಕಾನೂನು ಜಾರಿಗೆ ಅನ್ನದಾತರ ಪಟ್ಟು ಪ್ರಜಾಪ್ರಭುತ್ವದ ಉಳಿವಿಗಾಗಿ ಮಾನವ ಸರಪಳಿ : ಉಸ್ತುವಾರಿ ಸಚಿವ ಮುನಿಯಪ್ಪ BMTC ಅಧಿಕಾರಿಗಳ ವಾಹನಗಳಿಗೂ ಖಾಸಗಿ ಚಾಲಕರ ನೇಮಕಕ್ಕೆ ಟೆಂಡರ್‌ ಕರೆದ ಸಂಸ್ಥೆ KSRTC ಮಡಿಕೇರಿ: ವೇತನ ಬಿಡುಗಡೆ ಆಗ್ರಹಿಸಿ ಪ್ರತಿಭಟನೆಗೆ ಇಳಿದ ಗುತ್ತಿಗೆ ಚಾಲಕರು KSRTC ನೌಕರರ ನಂಬಿಸಲು ಹೋದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳಿಂದಲೇ ಅವರ ಊಸರವಳ್ಳಿ ಬಣ್ಣ ಬಯಲು..! KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ