ಬೆಂಗಳೂರು: ಕೊರೊನಾ ವೈರಸ್ ಪಿಡುಗಿನ ಮಧ್ಯೆಯೂ ಚುನಾವಣಾ ಆಯೋಗ ಜೂನ್ 29 ರಂದು ವಿಧಾನ ಪರಿಷತ್ ಚುನಾವಣೆಗೆ ನಡೆಸಲು ಘೋಷಣೆ ಮಾಡಿದೆ.
ಈ ಸಂಬಂಧ ಗುರುವಾರ (ಜೂನ್ 11) ಅಧಿಸೂಚನೆ ಹೊರಡಿಸಲಿದೆ. ಜೂನ್ 18 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. 19ರಂದು ನಾಮಪತ್ರಗಳ ಪರಿಶೀಲನೆ ಮತ್ತು ಜೂನ್ 22 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನ.
ಜೂನ್ 29ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು ಅಂದು ಸಂಜೆ 5 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಜೂನ್ 30ಕ್ಕೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಆಯೋಗ ತಿಳಿಸಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ವಿಧಾನ ಸಭಾ ಸದಸ್ಯರು ಆಯ್ಕೆ ಮಾಡಲಿರುವ ಪರಿಷತ್ನ ಏಳು ಸ್ಥಾನಗಳ ಅವಧಿ ಇದೇ ಜೂನ್ 30ಕ್ಕೆ ಮುಗಿಯಲಿದ್ದು ಆ ಸ್ಥಾನಗಳ ಭರ್ತಿಗಾಗಿ ಆಯೋಗ ಚುನಾವಣೆ ಘೋಷಿಸಿದೆ. ಆದರೆ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ ತಲಾ 2 ಸ್ಥಾನಗಳಿಗೆ ನಡೆಯಬೇಕಾಗಿದ್ದ ಚುನಾವಣೆಯನ್ನು ಮುಂದೂಡಿದೆ.
ಇನ್ನು ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಲು ಹಿರಿಯ ಅಧಿಕಾರಿಯೊಬ್ಬರನ್ನು ನೇಮಕ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಆಯೋಗ ಸೂಚಿಸಿದೆ. ಈ ನಡುವೆ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಆಯೋಗ ವೀಕ್ಷಕರನ್ನು ನೇಮಿಸುವುದಾಗಿ ತಿಳಿಸಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ನಿವೃತ್ತಿ ಹೊಂದಲಿರುವವರು?
ಜೂನ್ 30ರಂದು ನಜೀರ್ ಅಹಮದ್, ಜಯಮ್ಮ, ಎಂ.ಸಿ. ವೇಣುಗೋಪಾಲ್, ಎನ್.ಎಸ್. ಬೋಸರಾಜು, ಎಚ್.ಎಂ. ರೇವಣ್ಣ, ಟಿ.ಎ.ಶರವಣ, ಡಿ.ಯು. ಮಲ್ಲಿಕಾರ್ಜುನ ನಿವೃತ್ತಿ ಹೊಂದಲಿದ್ದಾರೆ.
ಶಾಸಕರ ಸಂಖ್ಯಾಬಲದ ಆಧಾರದಲ್ಲಿ ಬಿಜೆಪಿ 3, ಕಾಂಗ್ರೆಸ್ 2 ಮತ್ತು ಜೆಡಿಎಸ್ 1 ಸ್ಥಾನವನ್ನು ಸುಲಭವಾಗಿ ಗೆದ್ದುಕೊಳ್ಳಲಿವೆ. 7ನೇ ಸ್ಥಾನಕ್ಕೆ ಅಗತ್ಯ ಸಂಖ್ಯಾ ಬಲ ಯಾವ ಪಕ್ಷದ ಬಳಿಯಲ್ಲೂ ಇಲ್ಲ. ಈ ಸ್ಥಾನಕ್ಕೆ ಪೈಪೋಟಿ ನಡೆಯುವ ಸಾಧ್ಯತೆ ಇದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail