NEWSಆರೋಗ್ಯಮೈಸೂರು

ಮೈಸೂರು-ಮನಕಲಕುವ ಘಟನೆ: ಆಸ್ಪತ್ರೆ ಬಿಲ್‌ ಕಟ್ಟಲು ಗ್ರಾಮದ ಯುವಕರು, ಸಂಬಂಧಿಕರ ಜತೆ ಭಿಕ್ಷೆ ಬೇಡಿದ ಕುಟುಂಬ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ನಂಜನಗೂಡು ತಾಲೂಕಿನ ಹೆಡತಲೆ ಗ್ರಾಮದಲ್ಲೊಂದು ಮನಕಲಕುವ ಘಟನೆ ನಡೆದಿದೆ. ಆಸ್ಪತ್ರೆಯ ಬಿಲ್‌ ಕಟ್ಟಲು  ಗ್ರಾಮದ ಯುವಕರು, ಸಂಬಂಧಿಕರ  ಜೊತೆ ಸೇರಿ ಕುಟುಂಬವೊಂದು ಭಿಕ್ಷೆ ಬೇಡಿದೆ.

ಹೌದು. ಇದೇ ತಿಂಗಳ 2ರಂದು ಬದನವಾಳು ಬಳಿ 2 ಬೈಕ್ ನಡುವೆ ಅಪಘಾತ ಆಗಿದ್ದು, 6 ಜನ ಗಾಯಗೊಂಡಿದ್ದರು. ಅದರಲ್ಲಿ ಒಂದೇ ಕುಟುಂಬದ ತಂದೆ ಮಹೇಶ್ (38) ತಾಯಿ ರಾಣಿ (32) ಹಾಗೂ ಮಗಳು ಆದ್ಯ (5) ಗಾಯಗೊಂಡಿದ್ದರು.

ತಾಯಿ, ಮಗು ಒಂದೆಡೆ, ತಂದೆ ಮತ್ತೊಂದು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಸದ್ಯ ಮಗು ಆದ್ಯಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗ್ತಿದೆ. 3 ದಿನದ ಚಿಕಿತ್ಸೆಗೆ 1,80,000 ರೂ. ಬಿಲ್‌ ಕಟ್ಟಬೇಕು ಎಂದು ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ.

ಮಗು ನೋಡಬೇಕು, ವೆಂಟಿಲೇಟರ್‌ನಿಂದ ಹೊರ ತೆಗೆಯಬೇಕು ಅಂದರೆ  ಮೊದಲು ಬಿಲ್‌ ಕಟ್ಟಿ ಅಂತಿದ್ದಾರೆ ಅಂತ ಸಂಬಂಧಿಕರು ಆರೋಪಿಸಿದ್ದಾರೆ. ಕೂಲಿ ಮಾಡುವ ಕುಟುಂಬಕ್ಕೆ ಅಷ್ಟು ಹಣ ನೀಡಲು ಆಗದ ಕಾರಣ ಬಡ ಕುಟುಂಬದ ನೆರವಿಗೆ ಬಂದ ಗ್ರಾಮದ ಯುವಕರು, ಸಂಬಂಧಿಕರು ಭಿಕ್ಷೆ ಬೇಡಿದ್ದಾರೆ.

ಮಗುವಿನ ದೊಡ್ಡಮ್ಮ ಮಂಗಳ ಎಂಬುವರು ಭಿಕ್ಷೆ ಬೇಡೋ ವಿಡಿಯೋ ವೈರಲ್ ಆಗಿದೆ. ಈ ನಡುವೆ ಖಾಸಗಿ ಆಸ್ಪತ್ರೆ (ಬೃಂದಾವನ) ಆಡಳಿತ ಮಂಡಳಿಯ ಖಂಡೇಶ್ ಎಂಬುವರು ಸ್ಪಷ್ಟನೆ ನೀಡಿದ್ದು, ಆಸ್ಪತ್ರೆಗೆ ಬಂದಾಗ ಇಲ್ಲಿನ ಚಿಕಿತ್ಸಾ ವೆಚ್ಚದ ಬಗ್ಗೆ ತಿಳಿಸಲಾಗಿತ್ತು. ಅವರು ಅದಕ್ಕೆ ಒಪ್ಪಿದ್ದರು. ಆ ಕುಟುಂಬದ ಆರ್ಥಿಕ ಪರಿಸ್ಥಿತಿ ನಮಗೆ ಗೊತ್ತಿರಲಿಲ್ಲ.

ಇನ್ನು ಭಿಕ್ಷೆ ಬೇಡಿ ಹಣ ತಂದಿದ್ದಾರೆ ಎಂಬುದು ನಮಗೆ ವಿಡಿಯೋ ಮೂಲಕ ತಿಳಿಯಿತು. ಹೀಗಾಗಿ ಈ ವಿಡಿಯೋ ನೋಡಿ ನಾವು ರಿಯಾಯಿತಿ ಕೊಡಲು ತೀರ್ಮಾನ ಮಾಡಿದ್ದೇವೆ. ಮಗು ಐಸಿಯುನಲ್ಲಿದ್ದರೂ ಡಿಸ್ಚಾರ್ಜ್ ಮಾಡಿ ಎನ್ನುತ್ತಿದ್ದಾರೆ ಅಂತ ಖಂಡೇಶ್ ಹೇಳಿದ್ದಾರೆ.

Megha
the authorMegha

Leave a Reply

error: Content is protected !!
Latest news
GBA ದಕ್ಷಿಣ: ಮಳೆ ಬಂದಾಗ ಹೆಚ್ಚು ನೀರು ನಿಲ್ಲುವ ಪ್ರದೇಶಗಳಿಗೆ ಆಯುಕ್ತ ರಮೇಶ್ ಭೇಟಿ ಸರ್ಕಾರ ಸಾರಿಗೆ ನೌಕರರ ಏಳಿಗೆ ಬಗ್ಗೆ ಯೋಚಿಸಲೂ ಆಗದಂತಹ ನಿಕೃಷ್ಟ ಹಂತ ತಲುಪಿರುವುದು ದುರಂತವೇ ಸರಿ: ವಿಪಕ್ಷ ನಾಯಕ ಆರ್‌... KKRTC: ಭ್ರಷ್ಟ ಅಧಿಕಾರಿಗಳ ವಿರುದ್ಧ ಎಂಡಿಗೆ ಲಿಖಿತ ದೂರು ಕೊಟ್ಟು 3 ತಿಂಗಳುಗಳು ಕಳೆದರೂ ಯಾವುದೇ ಕ್ರಮವಿಲ್ಲ ಏಕೆ- ಯಾ... KSRTC- ನಮ್ಮ ಹೋರಾಟ ಕಡೆಗಣಿಸುತ್ತಿದ್ದೀರಿ ಇದು ನಿಮಗೆ ಸಲ್ಲ- ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತೇವೆ ಕೇಂದ್ರ ಸರ್... ಸಾರಿಗೆ ನೌಕರರಿಗೆ 26 ತಿಂಗಳ ವೇತನ ಹಿಂಬಾಕಿ ಪಾವತಿಗೆ ಮೊದಲ ಹಂತವಾಗಿ 450 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ ! KSRTC: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಗುಡ್ಡಕ್ಕೆ ಡಿಕ್ಕಿ ಹೊಡೆದು ನಿಂತ ಬಸ್‌- ತಪ್ಪಿದ ಭಾರಿ ಅನಾಹುತ KSRTC ಪ್ರಮುಖ ಬೇಡಿಕೆಗಳ ಸರ್ಕಾರ ಇನ್ನೂ ನೌಕರರ ಶ್ರಮಕ್ಕನ್ವಯ ಇತ್ಯರ್ಥಪಡಿಸಿಲ್ಲ: ಜ್ಯೋತಿ ಅನಂತಸುಬ್ಬರಾವ್ ಅಸಮಾಧಾನ ಇಂದು ಸಾರಿಗೆ ಸಚಿವರ ಅಧ್ಯಕ್ಷತೇಲಿ ನೌಕರರ ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿ ಕುರಿತು ಮತ್ತೇ ಒಕ್ಕೂಟದ ಜತೆ ಸಭೆ ಕೆಲ ಸಾರಿಗೆ ಅಧಿಕಾರಿಗಳಿಗೆ ವರದಾನವಾದ 17/1ನಿಯಮ- ಮೇ 10ರೊಳಗೆ ರದ್ದುಗೊಳಿಸಿ ಮೂಲ ಹುದ್ದೆಗೆ ನಿಯೋಜಿಸಲು ಎಂಡಿಗೆ ಸಾರಿ... ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಓಕೆನಾ ಅಥವಾ ವೇತನ ಆಯೋಗನಾ? ನೌಕರರ ಅಭಿಪ್ರಾಯವೇನು?