CRIMENEWSನಮ್ಮರಾಜ್ಯ

KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!

ವಿಜಯಪಥ ಸಮಗ್ರ ಸುದ್ದಿ
  • ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ ಒಗ್ಗಟ್ಟಿಲ್ಲ ಎಂಬುವುದು ಮತ್ತೆ ಮತ್ತೆ ಸಾಬೀತಾಗುತ್ತಲೇ ಇದೆ. ಅದಕ್ಕೆ ಮತ್ತೊಂದು ತಾಜಾ ನಿದರ್ಶನ ಹಿರಿಯೂರಿಗೆ ರಾತ್ರಿ ಹೋಗುತ್ತಿದ್ದ ಸಂಸ್ಥೆಯ ನಿರ್ವಾಹಕಿ ಅನುಭವಿಸಿದ ಯಾತನೆಯಾಗಿದೆ.

ಹೌದು! ಗುರುವಾರ ರಾತ್ರಿ 9.30ರಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಶಿರಾ ಘಟಕದಲ್ಲಿ ನಿರ್ವಾಹಕಿ ಕರ್ತವ್ಯ ನಿರ್ವಹಿಸುತ್ತಿದ್ದು. ಕರ್ತವ್ಯ ಮುಗಿಸಿ ರಾತ್ರಿ ಸುಮಾರು 9:30 ಸಮಯದಲ್ಲಿ ಶಿರಾ ದಿಂದ ಹಿರಿಯೂರಿಗೆ ಪ್ರಯಾಣ ಬೆಳೆಸಿದ್ದಾರೆ. ಈ ವೇಳೆ ತಮ್ಮದೇ ಸಂಸ್ಥೆಯ ಮಹಿಳಾ ಸಿಬ್ಬಂದಿಗೆ ಕಲಬುರ್ಗಿ ಘಟಕ-2ರ ಚಾಲಕ ಮತ್ತು ನಿರ್ವಾಹಕ ಇಬ್ಬರು ಸರಿಯಾಗಿ ತಮ್ಮ ಡ್ಯೂಟಿ ಮಾಡದೆ ರಾತ್ರಿ ಟೋಲ್‌ ಬಳಿ ಇಳಿಸಿ ಉದ್ಧಟತನ ಮೆರೆದಿದ್ದಾರೆ.

ಇನ್ನು ಹಿರಿಯೂರು ಬಸ್ ನಿಲ್ದಾಣಕ್ಕೆ ಹೋಗದೆ ಬೈಪಾಸ್ ನಲ್ಲಿರುವ ಟಿಬಿ ಸರ್ಕಲ್ ಅಲ್ಲಿಯಾದರೂ ನಿಲ್ಲಿಸಿ ಎಂದು ಸಹೋದ್ಯೋಗಿ ನಿರ್ವಾಹಕಿ ಕೇಳಿಕೊಂಡಿದ್ದರು ಸಹ ಚಾಲಕ ಮತ್ತು ನಿರ್ವಾಹಕ ಇಬ್ಬರು ನಾವು ಹಿರಿಯೂರಿಗೆ ಹೋಗುವುದಿಲ್ಲ ಎಂದು ಹಿರಿಯೂರಿನ ಬಳಿ ರಿಂಗ್ ರೋಡ್ ರಸ್ತೆಯ ಮುಖಾಂತರ ಹೋಗಿದ್ದಾರೆ.

ಈ ವೇಳೆ ನಿರ್ವಾಹಕಿ ಎಷ್ಟೇ ಕೇಳಿಕೊಂಡರು ಸಹ ಅವರನ್ನೇ ಹೆದರಿಸಿ ಮೊಬೈಲನ್ನು ಕಸಿದುಕೊಳ್ಳಲು ಯತ್ನಿಸಿದ್ದಾರೆ. ಅಲ್ಲದೆ ಹಿರಿಯೂರಿನಿಂದ ಸುಮಾರು ಹದಿನೈದು ಕಿಲೋಮೀಟರ್ ದೂರದಲ್ಲಿರುವ ಅರ್ತಿಕೋಟೆ ಟೋಲ್ ಬಳಿ ತಮ್ಮ ಸಹೋದ್ಯೋಗಿ ಮಹಿಳಾ ಕಂಡಕ್ಟರನ್ನು ಇಳಿಸಿ ಹೋಗಿದ್ದಾರೆ.

ಆ ಸಮಯದಲ್ಲಿ ನಿರ್ವಾಹಕಿ ತಮ್ಮ ಪತಿಗೆ ಫೋನ್‌ ಕರೆ ಮಾಡಿ ವಿಚಾರ ತಿಳಿಸಿದ್ದು, ಬಳಿಕ ಪತಿ ಬಾಡಿಗೆ ಕಾರನ್ನು ಮಾಡಿಕೊಂಡು ಸುಮಾರು ಹನ್ನೊಂದು ಗಂಟೆಗೆ ಹೋಗಿ ಪತ್ನಿಯನ್ನು ಕ್ಷೇಮವಾಗಿ ಮನೆಗೆ ಕರೆದುಕೊಂಡು ಹೋಗಿದ್ದಾರೆ.

ಸಾರಿಗೆ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರಿಗೆ ಅದೂ ಕೂಡ ತಮ್ಮ ಸಹೋದ್ಯೋಗಿಗೆ ಇವರು ಸ್ಟಾಪ್ ಕೊಡಲಿಲ್ಲ. ಜತೆಗೆ ತಾವು ತೆರಳಬೇಕಿರುವ ಮಾರ್ಗಬಿಟ್ಟು ಅನ್ಯ ಮಾರ್ಗದಲ್ಲಿ ಹೋಗಿದ್ದಾರೆ ಎಂದರೆ ಇದು ಎಷ್ಟರ ಮಟ್ಟಿಗೆ ಸರಿ. ಜತೆಗೆ ನೀನು ಬೇಕಾದರೆ ಕಲಬುರ್ಗಿಗೆ ಬಾ, ನಾನು ನಿನ್ನನ್ನು ಹಿಡಿಸುವುದಿಲ್ಲ ಎಂದು ಏಕವಚನದಲ್ಲಿ ಸಹೋದ್ಯೋಗಿ ಮಹಿಳೆ ಅವಾಜ್‌ಕೂಡ ಹಾಕಿದ್ದಾರೆ.

ಇನ್ನು ಇವರು ಒಬ್ಬ ಹೆಣ್ಣು ಮಗಳನ್ನು ರಾತ್ರಿ ಸಮಯದಲ್ಲಿ ಸುಮಾರು ಹದಿನೈದು ಕಿಲೋಮೀಟರ್ ದೂರದಲ್ಲಿರುವ ಅರ್ತಿಕೋಟೆ ಟೋಲ್ ಬಳಿ ಇಳಿಸಿ ಹೋಗುತ್ತಾರೆ ಎಂದರೆ ಇವರಲ್ಲಿ ಮಾನವೀಯತೆ ಇದೆಯೇ?  ಹೋಗಲಿ ತಮ್ಮ ಸಹೋದ್ಯೋಗಿ ಎಂಬುದನ್ನು ಲೆಕ್ಕಿಸದೆ ಹೀಗೆ ನಡೆದುಕೊಂಡಿರುವುದು ಇವರಲ್ಲಿ ಇರುವ ಒಗ್ಗಟ್ಟು ಏನು ಎಂದು ತೋರಿಸುತ್ತಿದೆ. ಅಲ್ಲದೆ, ಹೀಗೆ ಪದೇಪದೆ ಸಹೋದ್ಯೋಗಿಗಳನ್ನೇ ಕೀಳಾಗಿ ಕಾಣುತ್ತಿರುವುದು ಸರಿಯೇ?

ಹೀಗಾಗಿ ಈ ರೀತಿ ರಾತ್ರಿ ಸಮಯದಲ್ಲಿ ಹದಿನೈದು ಕಿಲೋಮೀಟರ್ ದೂರದ ಅರ್ತಿಕೋಟೆ ಟೋಲ್ ಬಳಿ ಇಳಿಸಿ ಹೋಗಿರುವುದು  ಅಲ್ಲದೆ ಮಾರ್ಗ ಬದಲಿಸಿಕೊಂಡು ಹೋಗಿರುವ ಈ ಇಬ್ಬರು ಚಾಲನಾ ಸಿಬ್ಬಂದಿಗಳನ್ನು ಕೂಡಲೇ ಅಮಾನತು ಮಾಡಬೇಕೆಂದು ಶಿರಾ ಘಟಕದ ನೌಕರರು ಒತ್ತಾಯಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ... ಪ್ರಾಮಾಣಿಕತೆ ಮೆರೆದ KSRTC ಸಿಬ್ಬಂದಿ - ಆಭರಣ ಅಡವಿಟ್ಟು ತಂದಿದ್ದ ಹಣ ಕಳೆದು ಕೊಂಡ ಪ್ರಯಾಣಿಕನಿಗೆ ಮರಳಿ ಕೊಟ್ಟ ನೌಕರರ... KSRTC: ಚಾಲನಾ ಸಿಬ್ಬಂದಿ ವಿರುದ್ಧ ಮೆಮೊ ನೀಡುವುದಕಷ್ಟೇ ತಮ್ಮ ಕಾರ್ಯ ವ್ಯಾಪ್ತಿಯ ಸೀಮಿತಗೊಳಿಸಿಕೊಂಡ ತನಿಖಾಧಿಕಾರಿಗಳು?...