NEWSನಮ್ಮರಾಜ್ಯ

ಮಾತಿನಂತೆ ನಡೆದುಕೊಳ್ಳದ ಬಿಎಸ್‌ವೈ: ಡಿಕೆಶಿ

ಯಡಿಯೂರಪ್ಪರ ಮೇಲಿದ್ದ ನಂಬಿಕೆ ಹುಸಿಯಾಗಿದೆ ಎಂದ ಶಿವಕುಮಾರ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾತಿಗೆ ತಪ್ಪುವುದಿಲ್ಲ ಮತ್ತು ಕೆಳಹಂತದ ರಾಜಕಾರಣ ಮಾಡುವುದಿಲ್ಲ ಎಂದು ಅಂದುಕೊಂಡಿದ್ದೆ ಆದರೆ ನನ್ನ ಪದಗ್ರಹಣ ವಿಚಾರದಲ್ಲಿ ಆ ನಂಬಿಕೆ ಹುಸಿಯಾಗಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

ಪದಗ್ರಹಣ ಸಮಾರಂಭಕ್ಕೆ ಅನುಮತಿ ಕೊಡುವುದನ್ನು ಸರ್ಕಾರ ನಿರಾಕರಿಸಿದ್ದು, ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು. ಸರ್ಕಾರ ಒಪ್ಪಿಗೆ ಕೊಟ್ಟ ಮೇಲಷ್ಟೇ ಪದಗ್ರಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಇದು ಇಡೀ ರಾಜ್ಯದ ಕಾಂಗ್ರೆಸ್ ಕಾರ್ಯಕರ್ತರ ಕಾರ್ಯಕ್ರಮ ನಾವು ಇದನ್ನು ನಿಲ್ಲಿಸುವುದಿಲ್ಲ ಈಗ ಯೋಜಿಸಿರುವಂತೆಯೇ  ಸಮಾರಂಭವನ್ನು ಮಾಡಲು ದಿನಾಂಕವನ್ನು ಮುಂದೆ ತಿಳಿಸುತ್ತೇವೆ ಎಂದು ವಿವರಿಸಿದರು.

ರಾಜ್ಯ ಸರ್ಕಾರದ ಬಹುತೇಕ ಸಚಿವರು ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ಕಾರ್ಯಕ್ರಮ ನಡೆಸುತ್ತಿದ್ದಾರೆ. ಆದರೆ ಅವರ ವಿರುದ್ಧ ಯಾವ ಕ್ರಮವೂ ಇಲ್ಲ. ನಾವು ಕಾನೂನಾತ್ಮಕವಾಗಿ ಅನುಮತಿ ಕೇಳಿದರೆ ಕೊಡುವುದಿಲ್ಲ. ಅಂದರೆ ಸರ್ಕಾರದ ಈ ದ್ವಂದ್ವ ನಿಲುವು ಅರ್ಥವಾಗುತ್ತಿಲ್ಲ ಎಂದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಪದಗ್ರಹಣ ಸಮಾರಂಭಕ್ಕೆ ಅನುಮತಿ ನಿರಾಕರಿಸಿರುವುದರ ಹಿಂದೆ ರಾಜಕೀಯ ದುರುದ್ದೇಶ ಕಾಣುತ್ತಿದೆ ನಾವು ಕಾನೂನನ್ನು ಗೌರವಿಸುತ್ತೇವೆ. ಹೀಗಾಗಿ ಅವರು ಅನುಮತಿ ಕೊಟ್ಟ ನಂತರವೇ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು ಎಂದು ಹೇಳಿದರು.

ನಾನು ವ್ಯರ್ಥವಾಗಿ ಮನೆಯಲ್ಲಿ ಕೂರುವುದಿಲ್ಲ ವಿಧಾನ ಪರಿಷತ್ ಚುನಾವಣೆ ಮುಗಿದ ಬಳಿಕ ಪ್ರವಾಸ ಮಾಡುತ್ತೇನೆ ಕೊರೊನಾ ಸಂಕಷ್ಟದಿಂದ ಬಳಲುತ್ತಿರುವ ಜನರ ಕಷ್ಟವನ್ನು ಆಲಿಸುತ್ತೇನೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ಯಾಕೇಜ್‌ ಅರ್ಹರಿಗೆ ತಲುಪಿದೆಯೇ ಎಂದು ವಿವರಿಸಲು ಪ್ರವಾಸ ಕೈಗೊಳ್ಳಲಾಗುವುದು. ಜನರ ಕಷ್ಟಕ್ಕೆ ಸ್ಪಂದಿಸಿ ನಮ್ಮ ಪಕ್ಷದ ಎಲ್ಲ ನಾಯಕರು ಈ ಪ್ರವಾಸದಲ್ಲಿ ಭಾಗವಹಿಸುತ್ತಾರೆ. ಪಕ್ಷದ ಬಾವುಟ ಬಳಸುವುದಿಲ್ಲ ಎಂದು ತಿಳಿಸಿದರು.

ಬಿಜೆಪಿ ನಕಲು ಮಾಡಿದೆ
ಈಗ ಮಾಡುತ್ತಿರುವ ಆನ್ ಲೈನ್ ಕಾರ್ಯಕ್ರಮ ನಮ್ಮ ಚಿಂತೆಯಾಗಿತ್ತು. ಅದನ್ನು ಬಿಜೆಪಿ ನಕಲು ಮಾಡಿದೆ. ನಮಗೆ ಅನುಮತಿ ನಿರಾಕರಿಸಿ ಬಿಜೆಪಿ ವತಿಯಿಂದ ನಮ್ಮದೇ ರೀತಿಯ ವರ್ಚುವಲ್ ಕಾರ್ಯಕ್ರಮ ಮಾಡಲಾಗುತ್ತಿದೆ. ರಾಷ್ಟ್ರೀಯ ಪ್ರಕೃತಿ ವಿಕೋಪ ಕಾನೂನನ್ನು ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಡಿಕೆಶಿ ದೂರಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ