NEWSವಿಡಿಯೋ

ಪಾಲಿಕೆ ಜಾಗದಲ್ಲಿದ್ದ ಅನಧಿಕೃತ ಮಾರ್ಬಲ್ ಅಂಗಡಿ ತೆರವು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪಾಲಿಕೆ ಜಾಗದಲ್ಲಿ ಅನಧಿಕೃತವಾಗಿ ಮಾರ್ಬಲ್ ಅಂಗಡಿಗಳನ್ನಿಟ್ಟು ವ್ಯಾಪಾರ ನಡೆಸುತ್ತಿದ್ದ ಸ್ಥಳವನ್ನು ಮೇಯರ್‌ ಗೌತಮ್‌ ಕುಮಾರ್‌ ನೇತೃತ್ವದಲ್ಲಿ ತಪಾಸಣೆ ನಡೆಸಿ ಅಧಿಕಾರಿಗಳು ವಶಕ್ಕೆ ಪಡೆದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಹೊಂಬೆಗೌಡನಗರ ವಾರ್ಡ್-145ರ ಬನ್ನೇರಘಟ್ಟ ರಸ್ತೆ, ಮೈಕೋ ಫ್ಯಾಕ್ಟರಿ ಹಿಂಭಾಗ, ಲಕ್ಕಸಂದ್ರ ಗ್ರಾಮದ ಸರ್ವೆ ಸಂ.14ರಲ್ಲಿ  ಒತ್ತುವರಿ ಆಗಿತ್ತು. ಈ  ಸ್ವತ್ತನ್ನು ಗುರುವಾರ ಮೇಯರ್‌  ಅಧ್ಯಕ್ಷತೆಯಲ್ಲಿ ತೆರವುಗೊಳಿಸಲಾಯಿತು.

ಈ ವೇಳೆ ಸುಮಾರು 10.04 ಎಕರೆ ಪಾಲಿಕೆ ಆಸ್ತಿಯನ್ನು ಸರ್ವೇ ಮಾಡಿ ಪಾಲಿಕೆಯ ಒಡೆತನಕ್ಕೆ ತೆಗೆದುಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮೇಯರ್‌ ತಿಳಿಸಿದರು.

ಬಿಬಿಎಂಪಿ ಹೊಂಬೆಗೌಡನಗರ ವಾರ್ಡ್-145ರ ಬನ್ನೇರಘಟ್ಟ ರಸ್ತೆ, ಮೈಕೋ ಫ್ಯಾಕ್ಟರಿ ಹಿಂಭಾಗ, ಲಕ್ಕಸಂದ್ರ ಗ್ರಾಮದ ಸರ್ವೆ ಸಂ.14ರಲ್ಲಿ ಪಾಲಿಕೆಗೆ ಒಳಪಟ್ಟ ಆಸ್ತಿಗಳನ್ನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದ್ದು, ಇಂದಿನಿಂದ ಸ್ಥಳ ತಪಾಸಣೆ ಪ್ರಾರಂಭಿಸಲಾಗಿದೆ. ಒತ್ತುವರಿ ಮಾಡಿರುವ ಪ್ರದೇಶವನ್ನು ಸರ್ವೇ ಮಾಡಿ ಪೊಲೀಸ್ ಅಧಿಕಾರಿಗಳ ಸಹಯೋಗದಲ್ಲಿ ನಾಮಫಲಕ ಅಳವಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಭೂದಾಖಲೆಗಳ ಸಹಾಯಕ ನಿರ್ದೇಶಕರು, ನಗರ ಮಾಪನ ತಂಡ-3 ರವರ ಕಚೇರಿಯಿಂದ ಅಳತೆ ಮಾಡಿ, ಸರ್ವೆ ನಕ್ಷೆಯನ್ನು ತಯಾರಿಸಿದ್ದಾರೆ. ಆದರೆ, ಸರ್ವೆ ವರದಿಯಲ್ಲಿ ಬ್ಲಾಕ್-3 ಮತ್ತು ಬ್ಲಾಕ್-4 ರಂತೆ ಗುರುತಿಸಲಾಗಿರುವ ಬ್ಲಾಕ್‌ಗಳಲ್ಲಿ ಕೂಡಲೇ ಅಧಿಕೃತವಾಗಿ ಸರ್ವೆ ಮಾಡಿ ಅತಿಕ್ರಮಿತ ಸರ್ಕಾರಿ ಆಸ್ತಿಯನ್ನು ವಶಪಡಿಸಿಕೊಳ್ಳಬೇಕು. ಅತಿಕ್ರಮ ಪ್ರದೇಶವನ್ನು ಒತ್ತುವರಿ ವಿಚಾರವಾಗಿ ಅಧಿಕಾರಿಗಳು ಶಾಮೀಲಾಗಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ವಹಿಸಲು ವಿಶೇಷ ಆಯುಕ್ತ(ಆಸ್ತಿಗಳು) ರಿಗೆ ಸೂಚಿಸಲಾಗಿದೆ ಎಂದರು.

ಉಪ ಮೇಯರ್‌ ರಾಮಮೋಹನ ರಾಜು, ಬೃಹತ್ ಸಾರ್ವಜನಿಕ ಕಾಮಗಾರಿ ಸ್ಥಾಯಿ ಸಮಿತಿ ಅಧ್ಯಕ್ಷರು ಮೋಹನ್ ಕುಮಾರ್, ವಿಶೇಷ ಆಯುಕ್ತರು(ಆಸ್ತಿಗಳು) ಶ್ರ ಜಿ.ಮಂಜುನಾಥ್, ದಕ್ಷಿಣ ವಲಯ ಉಪ ಆಯುಕ್ತೆ ಲಕ್ಷ್ಮೀದೇವಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ(ಬಿಡಿಎ) ಅಧಿಕಾರಿಗಳು, ಬೆಂಗಳೂರು ನಗರ ಜಿಲ್ಲಾ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್