CrimeNEWSನಮ್ಮರಾಜ್ಯ

ಇಬ್ಬರು ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ

ರಾಜ್ಯಾದ್ಯಂತ 6 ಸ್ಥಳಗಳಲ್ಲಿ ಕಾರ್ಯಾಚರಣೆ ಮಹತ್ವದ ದಾಖಲೆಗಳು ವಶ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದಡಿ  ಇಬ್ಬರು ಅಧಿಕಾರಿಗಳ ಮನೆ ಮತ್ತು ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಶುಕ್ರವಾರ ಬೆಳಗ್ಗೆ ರಾಜ್ಯದ ವಿವಿಧ 6 ಸ್ಥಳಗಳಲ್ಲಿ ಏಕ ಕಾಲಕ್ಕೆ ದಾಳಿ ದಾಳಿ ನಡೆಸಿದ ಅಧಿಕಾರಿಗಳು ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಸರ್ಕಾರಿ ನೌಕರರು ಆದಾಯಕ್ಕಿಂತ ಹೆಚ್ಚು  ಆಸ್ತಿ-ಪಾಸ್ತಿಗಳನ್ನು ಹೊಂದಿರುವ ಬಗ್ಗೆ ವಿಶ್ವಾಸಾರ್ಹ ಮಾಹಿತಿ ಸಂಗ್ರಹಿಸಿ ಅಕ್ರಮ ಆಸ್ತಿ ಗಳಿಕೆ ಪ್ರಕರಣಗಳನ್ನು ದಾಖಲಿಸಿ ಅವರಿಗೆ ಸಂಬಂಧಿಸಿದ 6 ಸ್ಥಳಗಳ ಮೇಲೆ ಇಂದು ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಇನ್ನೂ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಹನಮಪ್ಪ ಅಂದಪ್ಪ ಪ್ರಭರಣ್ಣವರ
 ಬಾಗಲಕೋಟೆಯ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಹನಮಪ್ಪ ಅಂದಪ್ಪ ಪ್ರಭರಣ್ಣವರ  ಅವರ ಗದಗ ಜಿಲ್ಲೆ, ರಾಜೀವ ಗಾಂಧಿನಗರದಲ್ಲಿರುವ ವಾಸದ ಮನೆ ಹಾಗೂ ಬಾಗಲಕೋಟೆಯ ರೋಟ್ರಿ ಕ್ಲಬ್ ಕ್ರಾಸ್ ಬಳಿಯಲ್ಲಿರುವ ಪ್ರಸ್ತುತ ವಾಸದ ಬಾಡಿಗೆ ಮನೆ, ಕರ್ತವ್ಯ ನಿರ್ವಹಿಸುತ್ತಿರುವ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರ ಕಚೇರಿ ಮೇಲೆ ಏಕಕಾಲಕ್ಕೆ ದಾಳಿಮಾಡಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ವಿಶೇಷ ಭೂ ಸ್ವಾಧೀನಾಧಿಕಾರಿ ಎಂ. ದಾಸೇಗೌಡ
ಮಂಗಳೂರಿನ ಕೆ.ಐ., ಎ.ಡಿ.ಬಿಯ  ವಿಶೇಷ ಭೂ ಸ್ವಾಧೀನಾಧಿಕಾರಿ ಎಂ. ದಾಸೇಗೌಡ (ಹಾಲಿ ಅಮಾನತು)  ಇವರ ಮಂಡ್ಯ ಜಿಲ್ಲೆ, ಕಾವೇರಿನಗರದ ನಿವಾಸ ಹಾಗೂ ಸ್ನೇಹಿತರ ಮಂಡ್ಯದ ಅಶೋಕ ನಗರದ ವಾಸದ ಮನೆ ಹಾಗೂ ಮಂಡ್ಯದ ಚಾಮುಂಡೇಶ್ವರಿನಗರದ ವಾಸದ ಮನೆ ಮೇಲೆ ದಾಳಿಮಾಡಿ ದಾಖಲೆಗಳನ್ನು ವಶಪಡಿಕೊಂಡಿದ್ದಾರೆ.

ಕರ್ನಾಟಕ ರಾಜ್ಯ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ವಿವಿಧ ತಂಡಗಳಿಂದ ಈ  ಸರ್ಕಾರಿ ನೌಕರರ ವಿರುದ್ಧ ದಾಳಿ ಮುಂದುವರಿದಿದ್ದು, ಇವರು ಹೊಂದಿರುವ ಆಸ್ತಿ-ಪಾಸ್ತಿಗಳ ಮೂಲದ ಬಗ್ಗೆ ತನಿಖೆ ಮುಂದುವರಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

 

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ