NEWSನಮ್ಮರಾಜ್ಯ

ಪೆಟ್ರೋಲ್, ಡೀಸೆಲ್ ದರ ಹೆಚ್ಚಳಕ್ಕೆ ಡಿಕೆಶಿ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಳೆದ ಆರು ದಿನಗಳಿಂದ ನಿರಂತರವಾಗಿ ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಳ ಮಾಡುತ್ತಿರುವುದು ಸರ್ಕಾರದ ಜನ ವಿರೋಧಿ ಕ್ರಮ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ವಿಶ್ವ ಮಾರಿ ಕೊರೊನಾದಿಂದ ಸಂಕಷ್ಟದ ಪರಿಸ್ಥಿತಿಗೆ ಸಿಲುಕಿ ನರಳುತ್ತಿರುವ ಜನಸಾಮಾನ್ಯರ ರಕ್ಷಣೆಗೆ ನಿಲ್ಲಬೇಕಾದ ಸರ್ಕಾರವೇ ಅವರನ್ನು ಲೂಟಿ ಮಾಡಲು ಹೊರಟಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಹೀಗೆ ಜನರನ್ನು ಕಿತ್ತು ತಿನ್ನುವ ಪ್ರವೃತ್ತಿಯನ್ನು ಕೇಂದ್ರ ಸರ್ಕಾರ ನಿಲ್ಲಿಸಬೇಕು ಇಲ್ಲವಾದರೆ ಜನರೇ ಸಿಡಿದೇಳುವ ಕಾಲ ಬರುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕಳೆದ ಭಾನುವಾರದಿಂದ ಇಂದಿನವರೆಗೂ ನಿತ್ಯ ಇಂಧನ ಬೆಲೆ ಏರಿಕೆಯಾಗುತ್ತಲೇ ಇದೆ. ಪೆಟ್ರೋಲ್ ಪ್ರತಿ ಲೀಟರಿಗೆ 3.30 ರೂ. ಹಾಗೂ ಡೀಸೆಲ್ ಗೆ ಪ್ರತಿ ಲೀಟರ್ ಗೆ 3.42 ರೂ. ಹೆಚ್ಚಳ ಮಾಡಿದೆ. ಕೊರೊನಾ ಸೋಂಕಿನಿಂದ ಜನರನ್ನು ರಕ್ಷಿಸಬೇಕಾದ ಕೇಂದ್ರ ಸರ್ಕಾರ ಅವೈಜ್ಞಾನಿಕ ಲಾಕ್ ಡೌನ್ ಹೇರಿಕೆ ಮಾಡಿ ಕೈಗಾರಿಕೆ ವ್ಯಾಪಾರೋದ್ಯಮ ಆರ್ಥಿಕ ವಲಯ ನೆಲಕಚ್ಚುವಂತೆ ಮಾಡಿದೆ.

ಇಂಥ ಸಂಕಷ್ಟದ ಸಮಯದಲ್ಲಿ ಮತ್ತೆ ಕೈಗಾರಿಕೆಗಳನ್ನು ಮೇಲೆತ್ತಲು ಸರ್ಕಾರದಿಂದ ದೊಡ್ಡ ಮಟ್ಟದ ನೆರವಿನ ಅಗತ್ಯವಿದೆ. ಆದರೆ ಸರ್ಕಾರ ಅದನ್ನು ಬಿಟ್ಟು ಗಾಯದ ಮೇಲೆ ಬರೆ ಎಳೆದಂತೆ ಸಾಮಾನ್ಯರಿಗೆ ಹೊರೆ ಆಗುವ ರೀತಿಯಲ್ಲಿ ಇಂಧನ ಬೆಲೆಯನ್ನು ನಿರಂತರವಾಗಿ ಏರಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್