CRIMENEWSನಮ್ಮರಾಜ್ಯಶಿಕ್ಷಣ

KSRTC ಬಸ್ ಕಂಡಕ್ಟರ್, ಚಾಲಕರ ವಿರುದ್ಧ ದುರ್ವತನೆ ದಂಡನೀಯ ಅಪರಾಧ: ವಿದ್ಯಾರ್ಥಿಗಳಿಗೆ ಮಹತ್ವದ ಸೂಚನೆ ನೀಡಿದ ಪ್ರೌಢಶಾಲೆ

ವಿಜಯಪಥ ಸಮಗ್ರ ಸುದ್ದಿ

ಬಂಟ್ವಾಳ: ಕರ್ನಾಟಕೆರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್ಆರ್ಟಿಸಿ) ಬಸ್‌ಗಳಲ್ಲಿ ಪ್ರಯಾಣಿಸುವ ತಮ್ಮ ವಿದ್ಯಾರ್ಥಿಗಳಿಗೆ ಮಹತ್ವದ ಸೂಚನೆಯೊಂದನ್ನು ದಕ್ಷಿಣ ಕನ್ನಡ ಜಿಲ್ಲೆಯ  ಬಂಟ್ವಾಳ ತಾಲೂಕಿನ ಅಳಿಕೆಯಲ್ಲಿರುವ ಶ್ರೀ ಸತ್ಯಸಾಯಿ ಲೋಕಸೇವಾ ಪ್ರೌಢ ಶಾಲೆ ಕೊಟ್ಟಿದೆ.

ಎಲ್ಲ ವಿದ್ಯಾರ್ಥಿಗಳು ಕೆಎಸ್ಆರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುವಾಗ ಶಿಸ್ತಿನೊಂದಿಗೆ ಹಾಗೂ ಗೌರವದಿಂದ ವರ್ತಿಸಬೇಕು. ಬಸ್‌ ಕಂಡಕ್ಟರ್, ಚಾಲಕ ಅಥವಾ ಸಹಪ್ರಯಾಣಿಕರೊಂದಿಗೆ ದುರ್ವತ್ರನೆ ಸಹಿಸಲ್ಪಡುವುದಿಲ್ಲ ಎಂದು ಶಾಲೆಯ ಮುಖ್ಯೋಪಾಧ್ಯಾಯರು ನೋಟಿಸ್‌ ಕೊಟ್ಟಿದ್ದಾರೆ.

ಇದರ ಜತೆಗೆ ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳ ಬಗ್ಗೆಯೂ ಸ್ಪಷ್ಟವಾಗಿ ಸೂಚನೆ ನೀಡಿದ್ದು, ಅವುಗಳಲ್ಲಿ ಪ್ರಮುಖವಾಗಿ 1) ಕೆಎಸ್ಆರ್ಟಿಸಿ ಸಿಬ್ಬಂದಿಗಳೊಂದಿಗೆ ವಿನಮ್ರವಾಗಿ ಮಾತನಾಡಿರಿ. 2) ವಾದ-ವಿವಾದ, ಗದ್ದಲ ಅಥವಾ ಅವಾಚ್ಯ ಶಬ್ದಗಳನ್ನು ಬಳಸಬೇಡಿ.

3) ಟಿಕೆಟ್‌ಗಳು, ಪಾಸ್‌ಗಳು ಮತ್ತು ಕುಳಿತ ಸ್ಥಳಗಳ ಬಗ್ಗೆ ಕಂಡಕ್ಟರ್ ಸೂಚನೆಗಳನ್ನು ಪಾಲಿಸಿರಿ. 4) ಸೀಟು, ಕಿಟಕಿ ಅಥವಾ ಬಸ್‌ನ ಯಾವುದೇ ಆಸ್ತಿಯನ್ನು ಹಾನಿಗೊಳಿಸಬೇಡಿ ಹಾಗೂ 5) ಸಾಮಾನ್ಯ ಶಿಸ್ತು ಪಾಲಿಸಿ, ಸಾರ್ವಜನಿಕ ಸಾರಿಗೆ ನಿಯಮಗಳಿಗೆ ಗೌರವ ನೀಡಿರಿ ಎಂದು ಸಲಹೆ ನೀಡಿದ್ದಾರೆ.

ಇನ್ನು ದುರ್ವತ್ರನೆಗೆ ವಿಧಿಸಲಾಗುವ ಶಿಕ್ಷೆಗಳ ಬಗ್ಗೆಯೂ ವಿದ್ಯಾರ್ಥೀಗಳಲ್ಲಿ ಜಾಗೃತಿ ಮೂಡಿಸಿದ್ದು ಕಾನೂನಿನ ಅರಿವನ್ನು ತಿಳಿಸಿದ್ದಾರೆ. ಅದರಲ್ಲಿ ಮೊದಲ ಬಾರಿ: ಎಚ್ಚರಿಕೆ ನೀಡಿ ಶಾಲೆ/ ಕಾಲೇಜಿಗೆ ವರದಿ ಮಾಡಲಾಗುತ್ತದೆ.

ಪುನರಾವರ್ತನೆ: ವಿದ್ಯಾರ್ಥಿ ಬಸ್ ಪಾನ್ ರದ್ದುಪಡಿಸಲಾಗುವುದು ಮತ್ತು ಶಾಲೆ/ ಕಾಲೇಜಿನಿಂದ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ. ಇನ್ನು ಗಂಭೀರ ದುರ್ವತ್ರನೆಗಳು (ಅಪಮಾನ, ಬೆದರಿಕೆ, ಹಲ್ಲೆ ಅಥವಾ ಆಸ್ತಿ ಹಾನಿ) ತೂರಿದರೆ ಭಾರತೀಯ ದಂಡ ಸಂಹಿತೆ ಮತ್ತು ವಾಹನ ಕಾಯ್ದೆಯಡಿ ಪೊಲೀಸ್ ದೂರು. ದಂಡ, ಶಾಲೆ/ ಕಾಲೇಜಿನಿಂದ ಅಮಾನತು ಅಥವಾ ಕಾನೂನು ಕ್ರಮ (ಗಂಭೀರ ಪ್ರಕರಣಗಳಲ್ಲಿ ಜೈಲು ಶಿಕ್ಷೆ ಸಹ).

ಗಮನಿಸಿ: ಬಸ್ ಕಂಡಕ್ಟರ್ ಮತ್ತು ಚಾಲಕರು ಸರ್ಕಾರಿ ಸಿಬ್ಬಂದಿ. ಅವರ ವಿರುದ್ಧ ದುರ್ವತನೆ ತೋರುವುದು ಕಾನೂನಿನಡಿಯಲ್ಲಿ ದಂಡನೀಯ ಅಪರಾಧ. ಹೀಗಾಗಿ ನಾವು ಜವಾಬ್ದಾರಿಯುತವಾಗಿ ಪ್ರಯಾಣಿಸಿ, ಸಾರ್ವಜನಿಕ ಸಾರಿಗೆಯ ಗೌರವವನ್ನು ಕಾಪಾಡೋಣ ಎಂದು ಶ್ರೀ ಸತ್ಯಸಾಯಿ ಲೋಕಸೇವಾ ಪ್ರೌಡ ಶಾಲೆಯ ಮುಖ್ಯೋಪಾಧ್ಯಾಯರು ಸೂಚನೆ ನೀಡಿದ್ದಾರೆ.

Megha
the authorMegha

Leave a Reply

error: Content is protected !!
Latest news
ಟನ್‌ ಕಬ್ಬಿಗೆ 3650 ರೂ. ಎಫ್ಆರ್‌ಪಿ ದರ ಘೋಷಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಸಲ್ಲ- 4500 ರೂ. ನಿಗದಿಗೊಳಿಸಬೇಕು: ಕ... KKRTC ವಿಜಯಪುರ: ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಭ್ರಷ್ಟಾಚಾರ ಸಾಬೀತು- ಆದರೂ ಕ್ರಮ ತೆಗೆದುಕೊಳ್ಳದ ಎಂಡ... KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ...