NEWSನಮ್ಮಜಿಲ್ಲೆ

ಜೂ‌.18ರಿಂದ 30ರವರೆಗೆ ಜಿಂದಾಲ್ ಪ್ರವೇಶ ಸಂಪೂರ್ಣ ನಿಷೇಧ

ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಮಾಹಿತಿ

ವಿಜಯಪಥ ಸಮಗ್ರ ಸುದ್ದಿ

ಬಳ್ಳಾರಿ: ತಮ್ಮ ಸಿಬ್ಬಂದಿಯನ್ನು ತನ್ನ ಕಾರ್ಖಾನೆಯ ಟೌನ್ ಶಿಫ್‌ನಲ್ಲಿ ಉಳಿಸಿಕೊಂಡೇ ಕೆಲಸ ಮಾಡಿಕೊಳ್ಳಬೇಕು ಮತ್ತು ಸಿಬ್ಬಂದಿ ಹೊರಗಡೆ ಹಳ್ಳಿ ಮತ್ತು ನಗರಕ್ಕೆ ಬರದ ರೀತಿಯಲ್ಲಿ ಪ್ರವೇಶ ಮತ್ತು ಹೊರಹೋಗುವಿಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ.

ಅಗತ್ಯ ಸೇವೆಗಳನ್ನು ಅನುಮತಿ ಪಡೆದು ಒಳ ಸಂಚರಿಸುವುದನ್ನು ಹೊರತುಪಡಿಸಿ ಉಳಿದವುಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ‌ ತಿಳಿಸಿದರು.

ಈ ಆದೇಶವು ಜೂ.18ರಿಂದ ಜಾರಿಗೆ ಬರಲಿದ್ದು ಜೂ.30ರವರೆಗೆ ಜಾರಿಯಲ್ಲಿರಲಿದೆ. ಜಿಂದಾಲ್ ಒಳ ಪ್ರವೇಶಿಸುವಿಕೆ ಮತ್ತು ಹೊರಬರುವಿಕೆ ಗೇಟ್ ಬಳಿ ಸಂಪೂರ್ಣ ಬ್ಯಾರಿಕೆಡ್ ಅಳವಡಿಸಲಾಗುತ್ತಿದೆ ಎಂದು ವಿವರಿಸಿದ ಅವರು ಕೊರೊನಾ ಪ್ರಕರಣಗಳಿಂದ 838ಜನ ಜಿಂದಾಲ್ ಸಿಬ್ಬಂದಿ ಬಳಲುತ್ತಿದ್ದು,ಇವರನ್ನು ಸಂಬಳಸಹಿತ ರಜೆ ಮೇಲೆ ಜಿಂದಾಲ್ ಈಗಾಗಲೇ ಕಳುಹಿಸಲು ಒಪ್ಪಿಕೊಂಡಿದೆ ಎಂದರು.

ಇದುವರೆಗೆ 146 ಪ್ರಕರಣಗಳು ದಾಖಲಾಗಿದ್ದು,633 ಪ್ರಥಮ ಸಂಪರ್ಕಿತರಿದ್ದು, ಅವರನ್ನು ಸಾಂಸ್ಥಿಕ ಕ್ವಾರಂಟೈನ್ ನಲ್ಲಿರಿಸಲಾಗಿದೆ. ಕೋವಿಡ್ ಕೇಸ್ ಗಳು ಹೆಚ್ಚಿನ ಪ್ರಮಾಣದಲ್ಲಿ ಬಂದ ಸಂದರ್ಭದಲ್ಲಿ ಚಿಕಿತ್ಸೆ ನೀಡಲು ಅನುಕೂಲವಾಗುವ ದೃಷ್ಟಿಯಿಂದ ತಾಲೂಕು ಆಸ್ಪತ್ರೆಗಳನ್ನು ಅಗತ್ಯ ಸಲಕರಣೆಗಳೊಂದಿಗೆ ಸಿದ್ಧಪಡಿಸಲಾಗಿದೆ ಎಂದರು.

ಎಸ್ಪಿ ಸಿ.ಕೆ.ಬಾಬಾ ಮಾತನಾಡಿ, ಸಂಪೂರ್ಣ ಬ್ಯಾರಿಕೆಡ್ ಹಾಕಲಾಗುವುದು ಮತ್ತು ಯಾವುದೇ ರೀತಿಯ ‌ಚಲನವಲನವಾಗದಂತೆ ನೋಡಿಕೊಳ್ಳಲಾಗುವುದು ಎಂದರು.

ಜಿಪಂ ಸಿಇಒ ಕೆ.ನಿತೀಶ್, ಪ್ರೊಬೆಷನರಿ ಐಎಎಸ್‌ ಶೇಖ್ ತನ್ವೀರ್ ಅಸೀಫ್ ಮತ್ತಿತರರು ಇದ್ದರು.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್