NEWSಮೈಸೂರುಸಂಸ್ಕೃತಿ

ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ದಸರಾ ಉದ್ಘಾಟಿಸಿದ ಹಿರಿಯ ಸಾಹಿತಿ ಬಾನು ಮುಷ್ತಾಕ್

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ದಸರಾ ಮಹೋತ್ಸವಕ್ಕೆ ಅಧಿಕೃತವಾಗಿ ಇಂದು ಚಾಲನೆ ಸಿಕ್ಕಿದೆ. ನಾಡಿನ ಹಿರಿಯ ಸಾಹಿತಿ ಬಾನು ಮುಷ್ತಾಕ್ ಅವರು ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಉದ್ಘಾಟಿಸಿದರು.

ಸೋಮವಾರ ಬೆಳಗ್ಗೆ ವೃಶ್ಚಿಕ ಶುಭ ಲಗ್ನದಲ್ಲಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ‘ಮೈಸೂರು ದಸರಾ’ಗೆ ಚಾಲನೆ ನೀಡಿದರು. ಉದ್ಘಾಟನೆಗೂ ಮುನ್ನ, ಬಾನು ಮುಷ್ತಾಕ್​ ಅವರು ಕುಟುಂಬ ಸಮೇತ ಚಾಮುಂಡಿ ಸನ್ನಿಧಿಗೆ ಆಗಮಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ವಿಶೇಷ ಅಂದರೆ ಬಾನು ಮುಷ್ತಾಕ್ ಅವರು ಕೇಸರಿ ಬಣ್ಣದ ಸೀರೆ, ಹಸಿರು ಬಣ್ಣದ ರವಿಕೆ, ತಲೆಯಲ್ಲಿ ಮಲ್ಲಿಗೆ ಹೂ ಮೂಡಿದು ಬಂದಿದ್ದರು. ಚಾಮುಂಡಿತಾಯಿ ಗರ್ಭಗುಡಿಯಲ್ಲಿ ಪೂಜೆ ಸಲ್ಲಿಸಿದ ಮುಷ್ತಾಕ್ ಅವರನ್ನು ಅಭಿನಂದಿಸಲಾಯಿತು.

ಇನ್ನು ಬಿಜೆಪಿ ನಾಯಕರ ಹೇಳಿಕೆಗೆ ಬಾನು ಮುಷ್ತಾಕ್ ಸೆಡ್ಡು ಹೊಡೆದರು. ದಸರಾ ಉದ್ಘಾಟನೆಗೆ ಬಾನು ಅವರ ಆಯ್ಕೆಯನ್ನು ಬಿಜೆಪಿ ಪ್ರಶ್ನೆ ಮಾಡಿತ್ತು. ಅಲ್ಲದೇ ಚಾಮುಂಡಿ ಸನ್ನಿಧಿಗೆ ಹೋಗುವ ಅವರು ಮಂಗಳಾರತಿ ತಗೋತಾರ? ಕೈಮುಗಿತಾರ ಅಂತಾ ಬಿಜೆಪಿ ಹೇಳಿತ್ತು. ಆದರೆ ಮುಷ್ತಾಕ್ ಅವರು ಚಾಮುಂಡೇಶ್ವರಿಗೆ ಕೈಮುಗಿದು, ಮಂಗಳಾರತಿ ತೆಗೆದುಕೊಂಡು ಭಾವುಕರಾದರು.

ದಸರಾ ಉದ್ಘಾಟಿಸಿ ಮಾತನಾಡಿದ ಬಾನು ಅವರು, ಪ್ರೀತಿಯ ಸಮಾಜ ಕಟ್ಟೋಣ, ಎಲ್ಲರಿಗೂ ಸಮಪಾಲು ಸಮಬಾಳು ಇರಲಿ. ನಾನು ನೂರಾರು ದೀಪಗಳನ್ನು ಬೆಳಗಿದ್ದೇನೆ. ಇವತ್ತು ಪುಷ್ಪಾರ್ಚನೆ ಮಾಡಿದೇನೆ ಎಂದರು.

ಅಲ್ಲದೆ ಮಂಗಳಾರತಿ ಸ್ವೀಕರಿಸಿದ್ದೇನೆ. ನನ್ನ ಹಿಂದೂ ಧರ್ಮದ ಸಂಬಂಧ ನನ್ನ ಆತ್ಮಕಥೆಯಲ್ಲಿ ಬರೆದಿದ್ದೇನೆ. ಅದು ನಾಳೆ ಪ್ರಕಟ ಆಗಲಿದೆ. ಎಷ್ಟೇ ಸವಾಲು ಬಂದ್ರೂ ದಿಟ್ಟವಾಗಿ ಆಹ್ವಾನ ನೀಡಿ ನೈತಿಕ ಬೆಂಬಲ ಕೊಟ್ಟ ಸಿಎಂ ಹಾಗೂ ಜಿಲ್ಲಾಡಳಿತಕ್ಕೆ ಧನ್ಯವಾದ ಎಂದರು.

Megha
the authorMegha

Leave a Reply

error: Content is protected !!
Latest news
ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ... ಕುಡಿಯುವ ನೀರು ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಖಂಡ್ರೆ ಎಚ್ಚರಿಕೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣವೊಂದೇ ಆಯುಧ: ನ್ಯಾ. ಶ್ರೀಶೈಲ್ ಭೀಮಸೇನ ಬಾಗಡಿ